prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
ಜಿಲ್ಲೆ

ಧಾರವಾಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.25, 26 ರಂದು ರಜೆ

*ನಿರಂತರ ಮಳೆ, ಶೀತಗಾಳಿ ಹಿನ್ನೆಲೆ ರಜೆ ಘೋಷಿಸಿದ ಜಿಲ್ಲಾಧಿಕಾರಿ* ಧಾರವಾಡ ಪ್ರಜಾಕಿರಣ.ಕಾಮ್ ಜು. .24: ಧಾರವಾಡ ಜಿಲ್ಲೆಯಾದ್ಯಂತ ನಿರಂತರ ಮಳೆ ಮತ್ತು ತಂಪು (ಶೀತ) ಗಾಳಿ ಬೀಸುತ್ತಿರುವದರಿಂದ ನಾಳೆ ಜುಲೈ 25 ಮತ್ತು 26 ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಪೂರ್ವ ಪ್ರಾಥಮಿಕ, ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ, ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಇಂದು ಸಂಜೆ ಆದೇಶಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಲ್ಲೆಯ ಬಹುತೇಕ ಕಡೆಗೆ ನಿರಂತರವಾಗಿ […]

ಅಂತಾರಾಷ್ಟ್ರೀಯ

ಇ ಡಿ ವಿರುದ್ದ ಕಾಂಗ್ರೆಸ್ ಪಕ್ಷದಿಂದ ಸಾಂಕೇತಿಕ ಪ್ರತಿಭಟನೆ

*ಮುಖ್ಯಮಂತ್ರಿಗಳ , ಸಚಿವರ ಹೆಸರು ಹೇಳಲು ಇಡಿ ಒತ್ತಾಯ ಹಿನ್ನೆಲೆ* *ಕಾಂಗ್ರೆಸ್ ಪಕ್ಷದಿಂದ ಸಾಂಕೇತಿಕ ಪ್ರತಿಭಟನೆ* *ರಾಜಕೀಯ ಸೇಡು, ದ್ವೇಷದ ನಡೆಯನ್ನು ನಮ್ಮ ಸರ್ಕಾರ ತೀವ್ರವಾಗಿ ಖಂಡಿಸುತ್ತೇವೆ*: *ಸಿಎಂ ಸಿದ್ದರಾಮಯ್ಯ* ಬೆಂಗಳೂರು ಪ್ರಜಾಕಿರಣ.ಕಾಮ್  ಜುಲೈ 23: ರಾಜಕೀಯ ಸೇಡು, ದ್ವೇಷದಿಂದ ಕೂಡಿದ ನಡೆಯನ್ನು ನಮ್ಮ ಸರ್ಕಾರ ತೀವ್ರವಾಗಿ ಖಂಡಿಸುತ್ತದೆ. ಇದನ್ನು ನಾವು ಪ್ರತಿಭಟಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಧಾನಸೌಧದ ಗಾಂಧಿ ಪ್ರತಿಮೆಯ ಬಳಿ ಸಾಂಕೇತಿಕವಾಗಿ ಹಮ್ಮಿಕೊಂಡಿದ್ದ ಪ್ರತಿಭಟನೆಯ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಪ್ರಜಾಪ್ರಭುತ್ವಕ್ಕೆ ಮಾರಕವಾದ […]

ಅಂತಾರಾಷ್ಟ್ರೀಯ

ರಾಜ್ಯಕ್ಕೆ ಚೊಂಬು ನೀಡಿದ ನಿರ್ಮಲಾ ಸೀತಾರಾಮನ್‌ :ಸಿಎಂ

*ರಾಜ್ಯಕ್ಕೆ ಚೊಂಬು ನೀಡಿದ ನಿರ್ಮಲಾ ಸೀತಾರಾಮನ್‌- ಸಿಎಂ* *ಕರ್ನಾಟಕದ ಬೇಡಿಕೆಗಳಿಗೆ ಮನ್ನಣೆ ನೀಡದ ನಿರಾಶಾದಾಯಕ ಬಜೆಟ್: ಸಿ.ಎಂ. ಸಿದ್ದರಾಮಯ್ಯ* ಬೆಂಗಳೂರು ಪ್ರಜಾಕಿರಣ.ಕಾಮ್  ಜುಲೈ 23: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ರಾಜ್ಯದ ಯಾವುದೇ ಬೇಡಿಕೆಗಳಿಗೂ ಮನ್ನಣೆ ನೀಡದೆ ಅತ್ಯಂತ ನಿರಾಶಾದಾಯಕ ಬಜೆಟ್‌ ಮಂಡಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ನಿರ್ಮಲಾ ಸೀತಾರಾಮನ್ ಅವರು ರಾಜ್ಯದ ಹಿತವನ್ನು ಸಂಪೂರ್ಣವಾಗಿ ನಿರ್ಲಕ್ಷಿಸುವ ಮೂಲಕ ರಾಜ್ಯದ ಜನತೆಯ ಕೈಗೆ ಚೊಂಬು ಕೊಟ್ಟಿದ್ದಾರೆ. […]

ಕ್ರೀಡೆ

ಜೇವರ್ಗಿ ಶಾಸಕ ಅಜಯ್ ಸಿಂಗ್ ಚಾಂಪಿಯನ್

👇*ಪ್ರಥಮ ಬಾರಿಗೆ ನಡೆದ ಲೆಜಿಸ್ಲೇಚರ್ ಕಪ್-2024 ಚೆಸ್ ಪಂದ್ಯಾವಳಿ* *ಜೇವರ್ಗಿ ಕ್ಷೇತ್ರದ ಶಾಸಕ ಅಜಯ್ ಸಿಂಗ್ ಚಾಂಪಿಯನ್* *ಕಪ್ ಮತ್ತು‌ ನಗದು ಬಹುಮಾನ ವಿತರಿಸಿದ ಸಿಎಂ‌ ಸಿದ್ದರಾಮಯ್ಯ* ಬೆಂಗಳೂರು ಪ್ರಜಾಕಿರಣ.ಕಾಮ್ ಜು 23: ವಿಧಾನಸಭೆ ಇತಿಹಾಸದಲ್ಲಿ ಮೊದಲ ಬಾರಿಗೆ ನಡೆದ ಲೆಜಿಸ್ಲೇಜರ್ ಕಪ್-2024 ಚೆಸ್ ಪಂದ್ಯಾವಳಿಯಲ್ಲಿ ಜೇವರ್ಗಿ ಶಾಸಕ ಅಜಯ್ ಸಿಂಗ್ ಅವರು ಎಲ್ಲಾ ಸುತ್ತಿನಲ್ಲೂ ವಿಜೇತರಾಗಿ ಚಾಂಪಿಯನ್ ಆಗಿದ್ದಾರೆ. ಸ್ಪೀಕರ್ ಯು.ಟಿ.ಖಾದರ್ ಅವರು ವಿಶ್ವ ಚೆಸ್ ದಿನದ ಅಂಗವಾಗಿ ಲೆಜಿಸ್ಲೇಜರ್ ಕಪ್ ಪಂದ್ಯಾವಳಿ ಆಯೋಜಿಸಿದ್ದು ಆರು […]

ರಾಜ್ಯ

ಧಾರವಾಡದಲ್ಲಿ ನಿರ್ಮಾಣ ಹಂತದ ಕಟ್ಟಡ ಸರ್ಜಾ ಕುಸಿತ : ಒಬ್ಬ ಕಾರ್ಮಿಕನಿಗೆ ಗಂಭೀರ ಗಾಯ

ಧಾರವಾಡದಲ್ಲಿ ನಿರ್ಮಾಣ ಹಂತದ ಕಟ್ಟಡ ಸರ್ಜಾ ಕುಸಿತ : ಒಬ್ಬ ಕಾರ್ಮಿಕನಿಗೆ ಗಂಭೀರ ಗಾಯ *ಕಳಪೆ ಕಾಮಗಾರಿಗೆ ಸರ್ಜಾ, ಗೊಡೆ ಕಾರಣ* *ನಿರ್ಮಿತಿ ಕೇಂದ್ರದಿಂದ ಬೇಜವಾಬ್ದಾರಿ ನಿರ್ವಹಣೆ* *ಸಮಾಜ ಕಲ್ಯಾಣ ಇಲಾಖೆಯ ಜಾಣಕುರುಡು* *ಬಿಹಾರ ಮೂಲಕ ಕಾರ್ಮಿಕನ ಕಾಲು‌ ಮೊಳೆ ಮುರಿತ* ಧಾರವಾಡ ಪ್ರಜಾಕಿರಣ.ಕಾಮ್  : ಇಲ್ಲಿನ ಸಪ್ತಾಪುರದಲ್ಲಿರುವ ಗೌರಿ ಶಂಕರ್ ವಸತಿ ನಿಲಯದ ಆವರಣದಲ್ಲಿ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಹೊಸದಾಗಿ ನಿರ್ಮಿಸುತ್ತಿರುವ ನಿರ್ಮಾಣ ಹಂತದ ಕಟ್ಟಡದ ಸರ್ಜಾ ಕುಸಿದು ಓರ್ವ ಕಾರ್ಮಿಕ ಗಂಭೀರವಾಗಿ ಗಾಯಗೊಂಡ […]

ಅಂತಾರಾಷ್ಟ್ರೀಯ

ಎಸ್.ಐ.ಟಿ. ತನಿಖೆಯಲ್ಲಿ ಸರ್ಕಾರಕ್ಕೆ ಸಂಪೂರ್ಣ ಭರವಸೆ: ಸಿಎಂ

ಬೆಂಗಳೂರು ಪ್ರಜಾಕಿರಣ.ಕಾಮ್  ಜುಲೈ 19 : ವಾಲ್ಮಿಕಿ ನಿಗಮದಲ್ಲಿ ನಡೆದಿರುವ ಹಣಕಾಸಿನ ಅವ್ಯವಹಾರದ ಬಗ್ಗೆ ಈಗಾಗಲೇ ಎಸ್‌ಐಟಿ ತನಿಖೆ ನಡೆಸುತ್ತಿದ್ದು, ಎಸ್‌ಐಟಿ ತನಿಖೆಯಲ್ಲಿ ಸರ್ಕಾರಕ್ಕೆ ಸಂಪೂರ್ಣ ಭರವಸೆಯಿದೆ. ರಾಜ್ಯ ಸರ್ಕಾರಕ್ಕೆ ಹಾಗೂ ತನಗೆ ಮಸಿ ಬಳಿಯುವ ಪ್ರಯತ್ನವನ್ನು ವಿರೋಧಪಕ್ಷಗಳು ಮಾಡುತ್ತಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಅವರು ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ವಾಲ್ಮಿಕಿ ಅಭಿವೃದ್ಧಿ ನಿಗಮದ ಅಕೌಂಟ್‌ ಸುಪರಿಡೆಂಟ್‌ ಚಂದ್ರಶೇಖರ್‌ ಆತ್ಮಹತ್ಯೆ ಮಾಡಿಕೊಂಡ ದಿನವೇ ಅವರ ಪತ್ನಿ ನೀಡಿದ ದೂರಿನ ಮೇಲೆ ಪ್ರಕರಣ ದಾಖಲಿಸಿ ತನಿಖೆ […]

ಜಿಲ್ಲೆ

ಕವಿತಾ ಹಿರೇಮಠಗೆ ಮಾತೃಶಕ್ತಿ ರಾಷ್ಟ್ರೀಯ ಪುರಸ್ಕಾರ

*ವೀರಶೈವ ಧರ್ಮದ ಪಂಚಪೀಠಗಳಲ್ಲಿ ಒಂದಾದ ಕಾಶಿ ಜಗದ್ಗುರು ಪೀಠದಿಂದ ಪ್ರದಾನ* *ಕವಿತಾ ಹಿರೇಮಠರಿಗೆ ಮಾತೃಶಕ್ತಿ ರಾಷ್ಟ್ರೀಯ ಪುರಸ್ಕಾರ* *ಧಾರವಾಡ ಪ್ರಜಾಕಿರಣ.ಕಾಮ್ : ಧರ್ಮ, ಸಂಸ್ಕೃತಿ, ಸಾಹಿತ್ಯ, ಕಲೆ ಮತ್ತಿತರ ಕ್ಷೇತ್ರಗಳಲ್ಲಿ ಅತ್ಯುನ್ನತ ಸಾಧನೆ ಮಾಡಿರುವ ಮಹಿಳೆಯರಿಗೆ ವೀರಶೈವ ಧರ್ಮದ ಪಂಪೀಠಗಳಲ್ಲಿ ಒಂದಾಗಿರುವ ಉತ್ತರ ಪ್ರದೇಶದ ವಾರಾಣಾಸಿಯ ಕಾಶಿ ಜಗದ್ಗುರು ಪೀಠವು ಪ್ರದಾನ ಮಾಡುವ ‘ಶ್ರೀಮತಿ ಮಾಲತಿ ಮಹಾರುದ್ರಪ್ಪ ಖೇಣಿ ಮಾತೃಶಕ್ತಿ ರಾಷ್ಟ್ರೀಯ ಪುರಸ್ಕಾರಕ್ಕೆ ಧಾರವಾಡದ ಕವಿತಾ ಗುರುಸಿದ್ಧಯ್ಯ ಹಿರೇಮಠ ಆಯ್ಕೆಯಾಗಿದ್ದಾರೆ. ವಾರಾಣಾಸಿಯ ಬನಾರಸ್ ಹಿಂದೂ ವಿಶ್ವವಿದ್ಯಾಲಯದ ಪ್ರಾಧ್ಯಾಪಕ […]

ರಾಜ್ಯ

ಧಾರವಾಡದ ಕೆಸಿಡಿಯಲ್ಲಿ ಮೂರನೇ ಬಾರಿಯು ಕೌನ್ಸಲಿಂಗ್ ಮುಂದೂಡಿಕೆ

ಧಾರವಾಡ ಪ್ರಜಾಕಿರಣ.ಕಾಮ್  : ಕರ್ನಾಟಕ ಕಾಲೇಜಿನಲ್ಲಿ ಶುಕ್ರವಾರ ನಡೆಸಲು ಉದ್ದೇಶಿಸಿದ್ದ ಬಿ ಎ ಪ್ರವೇಶಾತಿ ಕೌನ್ಸಲಿಂಗ್ ವಿದ್ಯಾರ್ಥಿಗಳ ಹಿತರಕ್ಷಣಾ ಸಮಿತಿ ಪ್ರತಿಭಟನೆಗೆ ಹೆದರಿ ಸತತವಾಗಿ ಮೂರನೇ ಬಾರಿ ಏಕಾಎಕಿ ಮುಂದೂಡಲಾಯಿತು. ಧಾರವಾಡದ ವಿದ್ಯಾರ್ಥಿಗಳ ಹಿತರಕ್ಷಣಾ ಸಮಿತಿ ಸಹ ಸಂಚಾಲಕ ಸುರೇಶ ಕೋರಿ ನೇತೃತ್ವದ ಪ್ರತಿಭಟನೆಗೆ ಹೆದರಿ ಕೌನ್ಸಲಿಂಗ್ ಸ್ಥಗಿತಗೊಳಿಸಲಾಯಿತು‌ ಅಲ್ಲದೆ, ಯಾವುದೇ ರೀತಿಯ ಮುನ್ಸೂಚನೆ ನೀಡದೆ ಕೆಸಿಡಿ ಪ್ರಾಚಾರ್ಯರು ಹಾಗೂ ಸಿಬ್ಬಂದಿ ಅಲ್ಲಿಂದ ಕಾಲು ಕಿತ್ತರು.   ಸೋಮವಾರ ಮತ್ತೆ ಕೌನ್ಸಲಿಂಗ್ ನಡೆಸಲು ಕವಿವಿ ಆಡಳಿತ ಮಂಡಳಿಯ […]

ಜಿಲ್ಲೆ

ಹಾಲಿನ ಪ್ರೋತ್ಸಾಹ ಧನ ಬಿಡುಗಡೆಗೆ ಆಗ್ರಹಿಸಿ ಮಳೆಯಲ್ಲಿಯೇ ರೈತರ ಪ್ರತಿಭಟನೆ

ಧಾರವಾಡ ಪ್ರಜಾಕಿರಣ.ಕಾಮ್  : ಬಾಕಿ ಇರುವ ಹಾಲಿನ ಪ್ರೋತ್ಸಾಹ ಧನವನ್ನು ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಧಾರವಾಡ ಕೆಎಂಎಫ್ ಕಚೇರಿ ಎದುರು ರತ್ನ ಭಾರತ ರೈತ ಸಮಾಜದ ಸದಸ್ಯರು ಮಳೆಯಲ್ಲಿಯೇ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ರೈತರ ಕಷ್ಟಕ್ಕೆ ಸರ್ಕಾರ ಸ್ಪಂದಿಸುತ್ತಿಲ್ಲ, ರೈತರಿಗೆ ಬರ ಪರಿಹಾರ ಪೂರ್ಣ ಪ್ರಮಾಣದಲ್ಲಿ ಬಿಡುಗಡೆ ಮಾಡಿಲ್ಲ, ಹಾಲಿಗೆ ನೀಡುವ ಪ್ರೋತ್ಸಾಹ ಧನವನ್ನು ಬಿಡುಗಡೆ ಮಾಡದೇ ಸರ್ಕಾರ ರೈತರೊಂದಿಗೆ ಚೆಲ್ಲಾಟ ಆಡುವುದು ಸರಿಯಲ್ಲ ಎಂದು ಸರ್ಕಾರದ ವಿರುದ್ಧ […]

ಅಪರಾಧ

ಚಿನ್ನದ ಚೈನ್, ಮೊಬೈಲ್ ದೋಚಿದ್ದ‌ ಮೂವರ ಬಂಧನ

ಧಾರವಾಡ ಪ್ರಜಾಕಿರಣ.ಕಾಮ್ : ವ್ಯಕ್ತಿಯೋರ್ವನ ‌ಮೇಲೆ ಹಲ್ಲೆ ನಡೆಸಿ‌ ಚಿನ್ನದ ಚೈನ್ ಮತ್ತು ಮೊಬೈಲ್ ದೋಚಿದ್ದ‌ ಮೂವರನ್ನು ಬಂಧಿಸುವಲ್ಲಿ ತಾಲೂಕಿನ ಗರಗ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಧಾರವಾಡದ ಶಂಕರ ಕೊಕಾಟೆ, ದೀಪಕ ಗೊಲ್ಲರ ಮತ್ತು ತಾಲೂಕಿನ‌ ಕಲ್ಲೂರ ಗ್ರಾಮದ ರವಿ ದಂಡಿನ ಬಂಧಿತ ಆರೋಪಿಗಳು. ಬಂಧಿತರು ಕಳೆದ ಫೆಬ್ರುವರಿ 3 ರಂದು ರಾತ್ರಿ 10 ಗಂಟೆ ಸುಮಾರಿಗೆ ತಾಲೂಕಿನ ಕಲ್ಲೂರ ಗ್ರಾಮದ ಜಿಲಾನಿ‌ ಮಾಬುಬ ಅಲಿ ಸೈಯ್ಯದನವರ ಎಂಬಾತನನ್ನು ರಸ್ತೆಯಲ್ಲಿ ಅಡ್ಡಗಟ್ಟಿ ತಡೆದು ಹಲ್ಲೆ ನಡೆಸಿ, ಆತನ […]