prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
ರಾಜ್ಯ

ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿದ ಹೈಕೋರ್ಟ್

ಧಾರವಾಡ prajakiran.com : ಧಾರವಾಡ ಜಿಲ್ಲಾ ಪಂಚಾಯತ ಬಿಜೆಪಿ ಸದಸ್ಯ ಯೋಗೀಶಗೌಡ ಗೌಡರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವವಿನಯ ಕುಲಕರ್ಣಿ ಜಾಮೀನು ಅರ್ಜಿಯ ವಿಚಾರಣೆಯನ್ನು ಜ.21ಕ್ಕೆ ಧಾರವಾಡ ಹೈಕೋರ್ಟ್ ಮುಂದೂಡಿದೆ. ಧಾರವಾಡದ ಹೈಕೋರ್ಟ್ ಎಕಸದಸ್ಯ ಪೀಠದ ನ್ಯಾಯಮೂರ್ತಿಗಳಾದ ಕೆ.ಎನ್. ನಟರಾಜ್ ಅವರು ಈ ಮಹತ್ವದ ಆದೇಶ ಹೊರಡಿಸಿದರು. ಧಾರವಾಡ ಹೈಕೋರ್ಟ್ ನಲ್ಲಿ ಬುಧವಾರ ಸಿಬಿಐ ಪರ ಸುಪ್ರೀಂ ಕೋರ್ಟ್ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ. ರಾಜು ಒಂದೂವರೆ ಗಂಟೆಗಳ ಕಾಲ ಮಾಜಿ ಸಚಿವ ವಿನಯ ಕುಲಕರ್ಣಿ […]

ಜಿಲ್ಲೆ

ಗೋ ಪ್ರೇಮಿ ಶಿವು ಉಪ್ಪಾರ ಕೊಲೆ ಪ್ರಕರಣ : ಸಿಬಿಐ ತನಿಖೆಗೆ ವಹಿಸಲು ಶ್ರೀ ರಾಮ ಸೇನೆ ಆಗ್ರಹ

ಧಾರವಾಡ prajakiran.com : ಗೋ ಪ್ರೇಮಿ ದಿವಂಗತ ಶಿವು ಉಪ್ಪಾರ ಸಾವಿನ ಪ್ರಕರಣ ಸಿಬಿಐ ತನಿಖೆಗೆ ಒಪ್ಪಿಸಲು ಆಗ್ರಹಿಸಿ ಧಾರವಾಡ ಜಿಲ್ಲಾಧಿಕಾರಿ ಮೂಲಕ ಗೃಹ ಸಚಿವರಿಗೆ ಶ್ರೀ ರಾಮ ಸೇನೆ ಮುಖಂಡರು ಮನವಿ ಸಲ್ಲಿಸಿದರು. ಗೋವುಗಳನ್ನು ರಕ್ಷಿಸಲು ಹೊರಾಟ ಮಾಡುತ್ತಾ ಬಂದಿದ್ದ ಯುವಕ ಶಿವು ಉಪ್ಪಾರ 25.05.2019 ರಂದು ಬೆಳಗಾವಿ ಜಿಲ್ಲೆಯ ಹಿರೇಬಾಗೇವಾಡಿ APMC ಆವರಣದಲ್ಲಿ ಸಂಶಯಾಸ್ಪದವಾಗಿ ನೇಣುಬಿಗಿದ ಸ್ಥಿತಿಯಲ್ಲಿ ಶವ ದೊರಕಿದ್ದರ ಬಗ್ಗೆ ಪ್ರಾಮಾಣಿಕ ತನಿಖೆಗೆ ಆಗ್ರಹಿಸಿ ರಾಜ್ಯಾದ್ಯಂತ ತೀವ್ರ ಹೋರಾಟ ನಡೆಸಲಾಗಿದೆ. ಈ ಸಾವು […]

ರಾಜ್ಯ

ಸಮಾಜ ಸಂಘಟನೆಗೆ ರೂಪರೇಶಗಳು ಸಿದ್ಧ ಎಂದ ಗಾಲಿ ಜನಾರ್ಧನ ರೆಡ್ಡಿ

ಹೇಮ-ವೇಮ ರೆಡ್ಡಿ ಜನಸಂಘ ಮುಖ್ಯ ಕಾರ್ಯಾಲಯ ಉದ್ಘಾಟನೆ ಬೆಂಗಳೂರು prajakiran.com : ತತ್ವಜ್ಞಾನಿ, ಮಹಾಯೋಗಿ ಶ್ರೀ ವೇಮನರ ೬೦೯ನೇ ಜಯೋಂತ್ಯೋತ್ಸವ ಹಾಗೂ ಹೇಮ-ವೇಮ ರೆಡ್ಡಿ ಜನಸಂಘ ಕರ್ನಾಟಕದ ಮುಖ್ಯ ಕಾರ್ಯಾಲಯದ ಉದ್ಘಾಟನೆ ಬೆಂಗಳೂರು ನಗರದ ಬಸವೇಶ್ವರ ಸರ್ಕಾಲ್‌ನಲ್ಲಿರುವ ಹೈಪಾಯಿಂಟ್ ಕಟ್ಟಡದಲ್ಲಿ ಅತ್ಯಂತ ಭಕ್ತಿ ಪೂರ್ವಕವಾಗಿ ನಡೆಯಿತು. ರೆಡ್ಡಿ ಸಮಾಜದ ಸ್ವಾಮೀಜಿಗಳಾದ ಶ್ರೀ ಶಾಂತಮಲ್ಲಿಕಾರ್ಜುನ ಮಹಾಸ್ವಾಮಿಗಳು ಹೆಡಗಿನಮುದ್ರ ಅವರು, ವೇಮನವರ ಭಾವಚಿತ್ರಕ್ಕೆ ಪೂಜೆಯನ್ನು ನೆರವೇರಿಸಿ, ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಆಶೀರ್ವಚನ ನೀಡಿದ ಸ್ವಾಮೀಜಿಗಳು ವೇಮನರ ತತ್ವ ಆದರ್ಶಗಳನ್ನು […]

ಅಪರಾಧ ರಾಜ್ಯ

ಧಾರವಾಡದ ಮಾರಡಗಿ ಯೋಧನ ಮನೆಯಲ್ಲಿ ಕಳ್ಳರ ಕೈ ಚಳಕ

ಧಾರವಾಡ Prajakiran.com: ತಾಲೂಕಿನ ಮಾರಡಗಿ ಗ್ರಾಮದಲ್ಲಿ ಹಿತ್ತಲ ಬಾಗಿಲ ಕೀಲಿ ಮುರಿದು ಮನೆಯಲ್ಲಿದ್ದ ಚಿನ್ನ ಸೇರಿದಂತೆ ಹಣ ದೋಚಿಕೊಂಡು ಕಳ್ಳರು ಕೈಚಳಕ ತೋರಿಸಿದ ಘಟನೆ ನಡೆದಿದೆ.  ಈ ಕುರಿತು ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ. ಇನ್ನೂ ಘಟನಾ ಸ್ಥಳಕ್ಕೆ ಗ್ರಾಮೀಣ ಠಾಣೆ ಇನಸ್ಪೆಕ್ಟರ್ ಶ್ರೀಧರ ಸುತಾರೆ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.  ಮನೆಯ ಹಿತ್ತಲ ಬಾಗಿಲ ಕೀಲಿ ಮುರಿದು ಒಳನುಗ್ಗಿದ ಕಳ್ಳರು ಮನೆಯಲ್ಲಿದ್ದ ಚಿನ್ನ ಸೇರಿದಂತೆ ಹಣ ದೋಚಿಕೊಂಡು […]

ರಾಜ್ಯ

ತಾಂಡವ ಹಿಂದಿ ಚಿತ್ರದಲ್ಲಿ ದೇವತೆಗಳ ಅವಹೇಳನ : ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ

ಧಾರವಾಡ Prajakiran.com : ಹಿಂದೂ ಧರ್ಮದ ದೇವತೆಗಳ ಬಗ್ಗೆ ಅವಹೇಳನ  ಮಾಡಿದ ಹಿನ್ನೆಲೆಯಲ್ಲಿ ತಾಂಡವ ಹಿಂದಿ ಚಲನಚಿತ್ರದ ವಿರುದ್ಧ ಧಾರವಾಡದ ಹಿಂದೂಪರ ಸಂಘಟನೆಗಳ ಒಕ್ಕೂಟದಿಂದ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ವಿವಿಧ ಹಿಂದೂ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.  ತಾಂಡವ ಹಿಂದಿ ಚಿತ್ರದಲ್ಲಿ ಹಿಂದೂ ದೇವತೆಗಳಿಗೆ ಅವಹೇಳನ ಮಾಡಿದ್ದಾರೆ ಎಂದು ಚಿತ್ರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಚಿತ್ರ ಬ್ಯಾನ್ ಮಾಡಬೇಕು ಎಂದು ಆಗ್ರಹಿಸಿದರು.  ಚಲನಚಿತ್ರ ನಿರ್ಮಾಪಕ ಹಾಗೂ ನಿರ್ದೇಶಕ ಸೇರಿದಂತೆ […]

ರಾಜ್ಯ

ಹುಬ್ಬಳ್ಳಿ-ಧಾರವಾಡ ಬೈಪಾಸ್ ಅಗಲೀಕರಣಕ್ಕೆ ಒತ್ತಾಯಿಸಿ ಪಾದಯಾತ್ರೆ

ಹೋರಾಟಕ್ಕೆ ಕೆಲಗೇರಿ ಗ್ರಾಮಸ್ಥರು, ಲಾರಿ ಮಾಲೀಕರ ಸಂಘ, ಜನಜಾಗೃತಿ ಸಂಘ ಸೇರಿದಂತೆ ಹಲವರ ಬೆಂಬಲ ಧಾರವಾಡ prajakiran.com : ಹುಬ್ಬಳ್ಳಿ-ಧಾರವಾಡ ಅವಳಿನಗರದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಬೈಪಾಸ್ ಗಳಿಗೆ ಹುಬ್ಬಳ್ಳಿಯ ಗೊಬ್ಬುರ ಕ್ರಾಸ್ ನಿಂದ ಧಾರವಾಡ ತಾಲೂಕಿನ ನರೇಂದ್ರ ಕ್ರಾಸ್ ವರೆಗೆ ಬರುವ ಬೈಪಾಸ್ ಗಳ ರಸ್ತೆ ಅಗಲೀಕರಣ, ತಾಂತ್ರಿಕ ನಿರ್ಮಾಣ, ಸರ್ವಿಸ್ ರೋಡ್ ನಿರ್ಮಾಣಕ್ಕೆ ಆಗ್ರಹಿಸಿ ಸೋಮವಾರ ಹಿರಿಯ ನ್ಯಾಯವಾದಿ ಪಿ.ಎಚ್.ನೀರಲಕೇರಿ ಅವರ ನೇತೃತ್ವದಲ್ಲಿ ಪಾದಯಾತ್ರೆ ನಡೆಯಿತು. ಈ ಪಾದಯಾತ್ರೆಗೆ ಕೆಲಗೇರಿ ಗ್ರಾಮಸ್ಥರು, ಲಾರಿ ಮಾಲೀಕರ […]

ಆಧ್ಯಾತ್ಮ

ಮರಳಿನಲ್ಲಿ ಅರಳಿದ ಸ್ವಾಮಿ ವಿವೇಕಾನಂದರು : ಜನಜಾಗೃತಿ ಸಂಘದ ವತಿಯಿಂದ ಅರ್ಥಪೂರ್ಣ ಆಚರಣೆ

ಧಾರವಾಡ prajakiran.com : ಸ್ವಾಮಿ ವಿವೇಕಾನಂದರ ೧೫೮ನೇ ಜಯಂತಿಯನ್ನು ಇಲ್ಲಿಯ ದೊಡ್ಡನಾಯಕನಕೊಪ್ಪ ಬಡಾವಣೆಯ ಬೇಂದ್ರೆ ನಗರ ಕ್ರಾಸ್ ನಲ್ಲಿ ಜನಜಾಗೃತಿ ಸಂಘದ ವತಿಯಿಂದ ಅರ್ಥಪೂರ್ಣವಾಗಿ ಆಚರಿಸಲಾಯಿತು. ಭಾನುವಾರ ಬೆಳಗ್ಗೆ ಕಲಾವಿದ ಮಂಜುನಾಥ ಹಿರೇಮಠ ಅವರು ಸ್ವಾಮಿ ವಿವೇಕಾನಂದರ ಕಲಾಕೃತಿಯನ್ನು ಮರಳಿನಲ್ಲಿ ಅರಳಿಸಿದರು. ಬೆಳಗ್ಗೆ ೫-.೩೦ರಿಂದ ೯ಗಂಟೆಯವರೆಗೆ ಸತತ ನಾಲ್ಕು ಗಂಟೆಗಳಲ್ಲಿ ತಮ್ಮ ಕೈ ಚಳಕ ತೋರುವಲ್ಲಿ ಯಶಸ್ವಿಯಾದರು. ದೊಡ್ಡನಾಯಕನಕೊಪ್ಪ ಬಡಾವಣೆಯ ನಿವಾಸಿಗಳು ಕಲಾಕೃತಿಯನ್ನು ವೀಕ್ಷಿಸಿ, ಭಕ್ತಿಯಿಂದ ನಮಿಸಿ ಪೂಜೆ ಸಲ್ಲಿಸಿದರು. ಬಳಿಕ ನೆರೆದಿದ್ದ ಜನಸ್ತೋಮವನ್ನು ಉದ್ದೇಶಿಸಿ ಮಾತನಾಡಿದ […]

ಅಪರಾಧ

ಧಾರವಾಡದಲ್ಲಿ ಮನೆ ಕಳ್ಳತನ ಮಾಡಿದ್ದ ಆರೋಪಿ ಅಂದರ್

ಧಾರವಾಡ prajakiran.com: ಇಲ್ಲಿನ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೆಲ ತಿಂಗಳ ಹಿಂದೆ ನಡೆದಿದ್ದ ಮನೆ ಕಳ್ಳತನ ಪ್ರಕರಣದ ಆರೋಪಿಯನ್ನು ವಿದ್ಯಾಗಿರಿ ಠಾಣೆ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ವಿಜಯಪುರ ಜಿಲ್ಲೆ ಬೆಳ್ಳುಬ್ಬಿ ಗ್ರಾಮದ ಅಜಿತ್ ಭೀಮಪ್ಪ ಚಲವಾದಿ (25) ಬಂಧಿತ ಆರೋಪಿಯಾಗಿದ್ದಾನೆ. ಬಂಧಿತನಿಂದ 2.50 ಲಕ್ಷ ರೂ. ಮೌಲ್ಯದ 50 ಗ್ರಾಂ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ. ಇಲ್ಲಿನ ಕವಿವಿ ರಸ್ತೆಯಲ್ಲಿನ ಅಪಾರ್ಟ್‌ಮೆಂಟ್‌ನಲ್ಲಿನ ಮನೆಯೊಂದರಲ್ಲಿ ನವೆಂಬರ್ ತಿಂಗಳಲ್ಲಿ ಕಳ್ಳತನ ನಡೆಸಿದ್ದ ಈ ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದ ಪೊಲೀಸರು, ಕೆಎಂಎಫ್ […]

ರಾಜ್ಯ

ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆ ವಿಸ್ತರಿಸದಿದ್ದಲ್ಲಿ ಹೋರಾಟ : ಇಸ್ಮಾಯಿಲ್ ತಮಟಗಾರ ಎಚ್ಚರಿಕೆ

ಧಾರವಾಡ : ಮಹಾರಾಷ್ಟ್ರದ ಥಾಣೆಯಿಂದ ಚೆನ್ನೈವರೆಗಿನ ೧,೨೩೫ ಕಿ.ಮೀ. ಉದ್ದದ ಸುವರ್ಣ ಚತುಷ್ಪಥ ರಸ್ತೆಯಲ್ಲಿ ಹುಬ್ಬಳ್ಳಿಯ ಗಬ್ಬೂರು ಕ್ರಾಸ್‌ನಿಂದ ಧಾರವಾಡದ ನರೇಂದ್ರ ಕ್ರಾಸ್‌ವರೆಗಿನ ೨೯.೦೪ ಕಿ.ಮೀ. ಉದ್ದನೇ ರಸ್ತೆ ಮಾತ್ರ ಕಿರಿದಾದ ರಸ್ತೆಯಾಗಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಸಂಸ್ಥೆ ನಿರ್ಮಿಸಿರುವ ಈ ರಸ್ತೆ ಇಲ್ಲಿಯವರೆಗೂ ೪೫೦ ಹೆಚ್ಚು ಜನರ ಬಲಿ ಪಡೆದಿದ್ದು, ಕೂಡಲೇ ಇದನ್ನು ವಿಸ್ತರಿಸಲು ಧಾರವಾಡ ಅಂಜುಮನ್ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಇಸ್ಮಾಯಿಲ್ ತಮಟಗಾರ ಆಗ್ರಹಿಸಿದ್ದಾರೆ. ಹುಬ್ಬಳ್ಳಿ-ಧಾರವಾಡ ಮಧ್ಯೆ ಬೈಪಾಸ್ ರಸ್ತೆಗೆ ಪ್ರಸಕ್ತ ಸಂಚಾರ ದಟ್ಟಣೆ ಲಕ್ಷದಲ್ಲಿಟ್ಟುಕೊಂಡಲ್ಲಿ […]