ಧಾರವಾಡ prajakiran.com : ಇಲ್ಲಿಯ ದೊಡ್ಡನಾಯಕನ ಕೊಪ್ಪ ಬಡಾವಣೆಯ ಬ್ರೇಂದ್ರೆ ನಗರ ಕ್ರಾಸ್ ನಲ್ಲಿ ಜ.17ರಂದು ಭಾನುವಾರ ಸಂಜೆ 6 ಗಂಟೆಗೆ ಜನಜಾಗೃತಿ ಸಂಘದ ವತಿಯಿಂದ ಸ್ವಾಮಿ ವಿವೇಕಾನಂದರ 158ನೇ ಜಯಂತಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಜನಜಾಗೃತಿ ಸಂಘದ ಅಧ್ಯಕ್ಷ ಬಸವರಾಜ ಹೆಚ್. ಕೊರವರ ತಿಳಿಸಿದ್ದಾರೆ. ಈ ಸಮಾರಂಭದ ದಿವ್ಯ ಸಾನ್ನಿಧ್ಯವನ್ನು ಉಪ್ಪಿನಬೆಟಗೇರಿ ಮೂರು ಸಾವಿರ ಮಠದ ಕುಮಾರ ವಿರೂಪಾಕ್ಷ ಸ್ವಾಮೀಜಿ ವಹಿಸುವುದು. ಮುಖ್ಯ ಭಾಷಣಕಾರರಾಗಿ ಕನ್ನಡದ ಕಬೀರ, ಪದ್ಮಶ್ಮೀ ಪ್ರಶಸ್ತಿ ಪುರಸ್ಕೃತ ಇಬ್ರಾಹಿಂ ಸುತಾರ ಮಾತನಾಡುವರು. ಮುಖ್ಯಅತಿಥಿಗಳಾಗಿ […]
Author: PK Team
ಹುಬ್ಬಳ್ಳಿ-ಧಾರವಾಡ ಬೈಪಾಸ್ ಅಗಲೀಕರಣಕ್ಕೆ ಶೀಘ್ರದಲ್ಲಿಯೇ ಸಾರ್ವಜನಿಕ ಹಿತಾಸಕ್ತಿ ಅರ್ಜಿ
ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಂಭವಿಸಿದ ಭೀಕರ ಅಪಘಾತಕ್ಕೆ ನಂದಿ ಇನ್ಪಾಸ್ಟಕ್ಷರ್ ಕಂಪನಿ ಮಾಲೀಕ ಅಶೋಕ ಖೇಣಿ ನೇರ ಹೊಣೆ : ದೀಪಕ ಚಿಂಚೋರೆ ಆರೋಪ ಧಾರವಾಡ prajakiran.com : ಧಾರವಾಡದ ಹೊರವಲಯದಲ್ಲಿರುವ ಇಟ್ಟಿಗಟ್ಟಿ ಕ್ರಾಸ್ ಬಳಿ ಜ.15ರಂದು ಸಂಭವಿಸಿದ ಭೀಕರ ಅಪಘಾತಕ್ಕೆ ಅದರ ಗುತ್ತಿಗೆದಾರ ಸಂಸ್ಥೆಯಾಗಿರುವ ನಂದಿ ಇನ್ಪಾಸ್ಟಕ್ಷರ್ ಕಂಪನಿ ಮಾಲೀಕ ಅಶೋಕ ಖೇಣಿ ನೇರ ಹೊಣೆಯಾಗಿದ್ದಾರೆ. ಹೀಗಾಗಿ ಅವರನ್ನು ತಕ್ಷಣ ಬಂಧಿಸಬೇಕು ಎಂದು ಎಐಸಿಸಿ ಸದಸ್ಯ ದೀಪಕ ಚಿಂಚೋರೆ ಆಗ್ರಹಿಸಿದರು. ಅವರು ಶನಿವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ […]
ದಾವಣಗೆರೆ ಟೂ ಗೋವಾ ದುರಂತ ಅಂತ್ಯ ಕಂಡವರ ವಿವರ
ಧಾರವಾಡ prajakiran.com : ಧಾರವಾಡದ ಹೊರವಲಯದಲ್ಲಿ ಇರುವ ರಾಷ್ಟ್ರೀಯ ಹೆದ್ದಾರಿ 4ರ ಇಟಿಗಟ್ಟಿ ಬಳಿ ಶುಕ್ರವಾರ ಬೆಳಿಗ್ಗೆ 7ರ ಹೊತ್ತಿಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದವರು ದಾವಣಗೆರೆ ಮೂಲದವರು. ಇವರೆಲ್ಲರೂ ದಾವಣಗೆರೆ ಟೂ ಗೋವಾ ಪ್ರವಾಸಕ್ಕೆ ಹೊರಟಿದ್ದರು. ಈ ವೇಳೆ ಧಾರವಾಡದ ಪರಿಚಯಸ್ಥರಯಸ್ಥರೊಬ್ಬರ ಮನೆಯಲ್ಲಿ ಉಪಹಾರ ಸೇವಿಸಿ ಮುಂದಕ್ಕೆ ಹೋಗುವವರಿದ್ದರು. ಅದಕ್ಕಿಂತ ಮುಂಚಿತವಾಗಿ ದುರ್ಘಟನೆ ಸಂಭವಿಸಿದ್ದು, ಟೆಂಪೋದಲ್ಲಿ ಎಂಟು ಜನ ಮಹಿಳೆಯರು, ಟೆಂಪೋ ಚಾಲಕ ಹಾಗೂ ಲಾರಿಯಲ್ಲಿದ್ದ ಕ್ಲೀನರ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದು […]
ಸಿಎಂ ಯಡಿಯೂರಪ್ಪ ವಿರುದ್ಧ ಮತ್ತೆ ಕಿಡಿಕಾರಿದ ಯತ್ನಾಳ……!
ವಿಜಯಪುರ prajakiran.com : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮತ್ತೊಮ್ಮೆ ನೇರವಾಗಿ ಕಿಡಿಕಾರಿದ್ದಾರೆ. ಈ ಕುರಿತು ಪತ್ರ ಬರೆದಿರುವ ಅವರು ತಮ್ಮ ಅಸಮಾಧಾನ ವನ್ನು ಹೊರ ಹಾಕಿದ್ದಾರೆ. ಅದರಲ್ಲೂ ವಿಶೇಷವಾಗಿ ತಮಗೆ ಕಲ್ಪಿಸಿರುವ ವೈಯಕ್ತಿಕ ಭದ್ರತಾ ವ್ಯವಸ್ಥೆಯನ್ನು ಹಿಂಪಡೆದಿರುವ ಕುರಿತು ಪತ್ರ ಬರೆದಿದ್ದು, ಅದರಲ್ಲಿ ವಿವರವಾಗಿ ಗುಡುಗಿದ್ದಾರೆ. ಪತ್ರದ ವಿವರ ಯಥಾವತ್ತಾಗಿ ಈ ರೀತಿಯಲ್ಲಿ ಇದೆ. ನಾನು ಪ್ರಖರ ಹಿಂದುಪರವಾದ ಮತ್ತು ಜನಪರ ಹೋರಾಟ ಮತ್ತು ಸಂಘಟನೆಯಲ್ಲಿ ತೊಡಗಿಸಿಕೊಂಡಿರುವದರಿಂದ […]
ಕೇಂದ್ರ ಸರ್ಕಾರ-ರೈತರ ನಡುವಿನ 9ನೇ ಸುತ್ತಿನ ಮಾತುಕತೆಯೂ ವಿಫಲ….!
ನವದೆಹಲಿ prajakiran.com : ಸುಪ್ರೀಂ ಕೋರ್ಟ್ ಚಾಟಿ ಬೀಸಿದ ಬೆನ್ನಲ್ಲೇ ನಡೆದ 9ನೇ ಸುತ್ತಿನ ಮಾತುಕತೆಯೂ ವಿಫಲಗೊಂಡಿತು. ನವದೆಹಲಿಯ ವಿಜ್ಞಾನ್ ಭವನದಲ್ಲಿ ನಡೆದ ಸಭೆಯಲ್ಲಿ ಸರ್ಕಾರದ ಪ್ರತಿನಿಧಿಗಳಾಗಿ ರೈಲ್ವೆ ಹಾಗೂ ಆಹಾರ ಸಚಿವ ಪಿಯೂಷ್ ಗೋಯಲ್, ಕೃಷಿ ಸಚಿವ ನರೇಂದ್ರಸಿಂಗ್ ತೋಮರ್ ಮತ್ತು ವಾಣಿಜ್ಯ ರಾಜ್ಯ ಖಾತೆ ಸಚಿವ ಸೋಮ್ ಪ್ರಕಾಶ್ ಪಾಲ್ಗೊಂಡಿದ್ದರು. ರೈತರ ಪ್ರತಿನಿಧಿಗಳಾಗಿ 40 ಸಂಘಟನೆಯ ಮುಖಂಡರು ಪಾಲ್ಗೊಂಡಿದ್ದರು. ಕೃಷಿ ಸಚಿವ ತೋಮರ್ ಮಾತುಕತೆಗೆ ಚಾಲನೆ ನೀಡಿ, `ನೀವು ಸರ್ಕಾರ ಪಟ್ಟು ಹಿಡಿದಿದೆ, ಇದನ್ನು […]
ಹುಬ್ಬಳ್ಳಿ-ಧಾರವಾಡ ಬೈಪಾಸ್ ಅಷ್ಟ ಪಥ ರಸ್ತೆ ನಿರ್ಮಿಸಿ : ಕೇಂದ್ರ ಸಚಿವರಿಗೆ ಬಹಿರಂಗ ಪತ್ರ
ಹುಬ್ಬಳ್ಳಿ prajakiran.com : ಹುಬ್ಬಳ್ಳಿ ಧಾರವಾಡ ಬೈಪಾಸ್ ಗೆ ಅಷ್ಟ ಪಥ ರಸ್ತೆ ಅವಶ್ಯಕತೆಯಿದ್ದು, ಅದನ್ನು ರಾಷ್ಟ್ರೀಯ ಹೆದ್ದಾರಿ -48ಕ್ಕೆ ಜೋಡಿಸಬೇಕು ಎಂದು ಕಾಂಗ್ರೆಸ್ ಪಕ್ಷದ ಮಾಧ್ಯಮ ವಿಶ್ಲೇಷಕ ಪಿ.ಎಚ್. ನೀರಲಕೇರಿ ಆಗ್ರಹಿಸಿದ್ದಾರೆ. ಈ ಕುರಿತು ಕೇಂದ್ರ ಭೂಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಅವರಿಗೆ ಪತ್ರ ಬರೆದು ರಾಜ್ಯ ಹಾಗೂ ಕೇಂದ್ರ ಸರ್ಕಾರದ ಗಮನ ಸೆಳೆದಿರುವ ಅವರು, ಅವಳಿ ನಗರದಲ್ಲಿ ದೀರ್ಘಾವಧಿಯ ಬಾಕಿ ಇರುವ ರಿಂಗ್ ರಸ್ತೆ ಮತ್ತು ಕೇಂದ್ರ ನಿಧಿಯ ಟೆಂಡರ್ ಖಚಿತವಾದ ರಸ್ತೆಯನ್ನು ಪೂರ್ಣಗೊಳಿಸುವುದು. […]
ಧಾರವಾಡ ಹೊರವಲಯದಲ್ಲಿ ಬೆಳ್ಳಂ ಬೆಳಗ್ಗೆ ಭೀಕರ ರಸ್ತೆ ಅಪಘಾತ : ಸ್ಥಳದಲ್ಲೇ 11 ಜನರ ರ್ದುಮರಣ
ಧಾರವಾಡ prajakiran.com : ಧಾರವಾಡ ಹೊರವಲಯದಲ್ಲಿ ಬೆಳ್ಳಂ ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಇದರಿಂದಾಗಿ ಘಟನಾ: ಸ್ಥಳದಲ್ಲೇ 11 ಜನರ ರ್ದುಮರಣವನ್ನಿಪ್ಪಿದ್ದಾರೆ. ಧಾರವಾಡದ ಇಟ್ಟಿಗಟ್ಟಿ ಬಳಿ ಈ ಘಟನೆ ನಡೆದಿದ್ದು, ಹಲವರಿಗೆ ಗಂಭೀರವಾದ ಗಾಯಗಳಾಗಿವೆ. ಟೆಂಪೋ ಟ್ರಾವೆಲರ್ ಹಾಗೂ ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಟ್ರಾವೆಲರ್ ನಲ್ಲಿದ್ದ ದಾವಣಗೆರೆ ಜಿಲ್ಲೆಯ ಹಲವರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಇವರು ದಾವಣಗೆರೆಯಿಂದ ಧಾರವಾಡ ಮಾರ್ಗವಾಗಿ ಗೋವಾಕ್ಕೆ ಪ್ರಯಾಣಿಸುತ್ತಿದ್ದರು ಎಂದು ಗೊತ್ತಾಗಿದೆ. ಧಾರವಾಡದ ಸಮೀಪ ಬೆಳಗಿನ ಜಾವ […]
ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರ್ ಲಾಬುರಾಮ್ ರೌಂಡ್ಸ್
ಹುಬ್ಬಳ್ಳಿ Prajakiran.com : ಹುಬ್ಬಳ್ಳಿ-ಧಾರವಾಡ ಅವಳಿ ನಗರದ ಪೊಲೀಸ್ ಆಯುಕ್ತರಾದ ಲಾಬುರಾಮ್ ಅವರು ನಗರದ ವಿವಿಧ ಇಕ್ಕಟ್ಟಾದ ಸರ್ಕಲ್ಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದರು. ನಗರದ ದೇಶಪಾಂಡೆ ನಗರದಲ್ಲಿನ ಸರ್ಕಲ್ ಪರಿಶೀಲನೆ ನಡೆಸಿದ ಪೊಲೀಸ್ ಕಮಿಷನರ್ ಲಾಬುರಾಮ್ ಅವರಿಗೆ ಮಹಾನಗರ ಪಾಲಿಕೆ ಅಧಿಕಾರಿಗಳು ಸಾಥ್ ನೀಡಿದರು. ಅಲ್ಲದೆ, ಹುಬ್ಬಳ್ಳಿ ಧಾರವಾಡ ಟ್ರಾಫಿಕ್ ನಿಯಂತ್ರಣಕ್ಕಾಗಿ ರಸ್ತೆಗಳ ಅಗಲೀಕರಣದ ಚಿಂತನೆಯನ್ನು, ಮಹಾನಗರ ಪಾಲಿಕೆ ಆಯುಕ್ತ ಸುರೇಶ್ ಇಟ್ನಾಳ ಹಾಗೂ ಇತರೆ ಅಧಿಕಾರಿಗಳೊಂದಿಗೆ ಸಮಾಲೋಚನೆ ಮಾಡಿದರು. Share on: WhatsApp
ಧಾರವಾಡದಲ್ಲಿ ಪೊಲೀಸರ ವಿರುದ್ಧ ಪ್ರತಿಭಟನೆ ನಡೆಸಿದ ಬಂಗಾರ ಅಂಗಡಿ ಮಾಲೀಕರು..!
ಧಾರವಾಡ prajakiran.com : ಸ್ಥಳೀಯ ಶಹರ ಠಾಣೆಯ ಪೊಲೀಸರೂ ಸೇರಿದಂತೆ ವಿವಿಧ ಠಾಣೆಯಿಂದ ಬರುವ ಪೊಲೀಸರು, ಕಳ್ಳತನ ಮಾಡಿರೋ ಬಂಗಾರವನ್ನ ಖರೀದಿಸಿದ್ದಾರೆಂದು ನಮಗೆ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿದ ಧಾರವಾಡದ ನಗರದ ಬಹುತೇಕ ಬಂಗಾರ ಅಂಗಡಿ ವ್ಯಾಪಾರಸ್ಥರು ಗಾಂಧಿಚೌಕದಲ್ಲಿ ಪ್ರತಿಭಟನೆ ನಡೆಸಿದರು. ಪೊಲೀಸರು ಆರೋಪಿಗಳ ಸಮೇತ ಬಂದ ಹಾಗೇ ತೋರಿಸಿ, ನಮ್ಮಲ್ಲೇ ಇರುವ ಅಂಗಡಿಗಳಿಂದ 100 ಗ್ರಾಂ, 200 ಗ್ರಾಂ ಬಂಗಾರ ಕೊಡು ಎಂದು ಪೀಡಿಸುತ್ತಾರೆ. ಕಳ್ಳರ ಮಾತುಗಳನ್ನ ಕೇಳಿ ನಮಗೆ ಕಿರಿಕಿರಿ ಕೊಡುತ್ತಿದ್ದಾರೆಂದು ದೂರಿದ ವ್ಯಾಪಾರಸ್ಥರು, ತಮ್ಮ […]
ಶಿವಗಂಗೆಯ ಬೆಟ್ಟದ ತುತ್ತತುದಿಯಲ್ಲಿ ತೀರ್ಥೋದ್ಬವ……!
ಬೆಂಗಳೂರು prajakiran.com : ಶಿವ-ಗಂಗೆ ನೆಲೆಸಿರುವ ತಪೋಭೂಮಿ, ದಕ್ಷಿಣಯಾನ ಕಳೆದು ಉತ್ತರಾಯಣ ಪ್ರಾರಂಭದ ದಿನ ಸಂಕ್ರಮಣ, ಈ ವಿಶೇಷ ದಿನದಂದು ಬೆಟ್ಟದ ತುತ್ತತುದಿಯ ಬಂಡೆಯಲ್ಲಿ ಬೊಗಸೆ ನೀರು ಪ್ರತ್ಯಕ್ಷವಾಗಿ ಜನರಲ್ಲಿ ಕೊವಿಡ್ ೧೯ ಮಧ್ಯೆಯೂ ವಿಸ್ಮಯದ ರೀತಿಯಲ್ಲಿ ಪವಾಡವನ್ನ ಮೂಡಿಸಿದೆ. ಒಂದೆಡೆ ಚಾರಣಿಗರಿಗೆ ಸವಾಲಿನಂತೆ ಅಲಂಕಾರಗೊಂಡಿರುವ ಬೆಟ್ಟ, ವಿದ್ಯುತ್ ದೀಪಗಳ ಸಾಲು. ಭೂಮಿಯಿಂದ ಸರಿಸುಮಾರು ೧೬೦೦ ಅಡಿಗಿಂತ ಎತ್ತರದ ದಕ್ಷಿಣ ಕಾಶಿ ಎಂದೆ ಪ್ರಸಿದ್ಧವಾಗಿರುವ ಪುಣ್ಯಕ್ಷೇತ್ರ ಶಿವಗಂಗೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಈ ಶಿವಗಂಗೆ […]