ಗಂಗಾವತಿ prajakiran.com : ರಾಜ್ಯದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಒಂದಿಲ್ಲ ಒಂದು ಯಡವಟ್ಟು ಮಾಡುವ ಮೂಲಕ ವಿವಾದಕ್ಕೆ ಸಿಲುಕುತ್ತಲೇ ಇದೆ. ರಾಜ್ಯದಅನೇಕ ಕಡೆ ಈ ರೀತಿಯ ವರದಿಗಳು ಬೆಳಕಿಗೆ ಬರುತ್ತಿದ್ದರೂ ಸಿಬ್ಬಂದಿ ಮಾತ್ರ ಎಚ್ಚೆತ್ತುಕೊಂಡಂತೆ ಕಾಣುತ್ತಿಲ್ಲ. ಇದಕ್ಕೆ ಮತ್ತೊಂದು ತಾಜಾ ನಿರ್ದಶನವೆಂಬಂತೆ ಗಂಗಾವತಿಯಲ್ಲಿ ನೆಗೆಟಿವ್ ಇದ್ದ ಯುವಕನನ್ನು ಪಾಸಿಟಿವ್ ಎಂದು ಕೋವಿಡ್ ನಿಯೋಜಿತ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇದರಿಂದಾಗಿ ಕಂಗಲಾದ ಯುವಕ ಎಲ್ಲಿ ತನಗೂ ಕರೋನಾ ವಕ್ಕರಿಸುತ್ತದೆಯೋ ಎಂಬ ಆತಂಕದಲ್ಲಿಯೇ ತನ್ನ ದುಗುಡವನ್ನು ವೀಡಿಯೋ ಮೂಲಕ ಹೊರ […]
Author: PK Team
ಧಾರವಾಡ ಜಿಲ್ಲೆಯಲ್ಲಿ ಭಾನುವಾರ 1 ಸಾವು, 129 ಜನರಿಗೆ ಕರೋನಾ
ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಭಾನುವಾರ ಸಂಜೆ ಮತ್ತೆ ಹೊಸದಾಗಿ 129 ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ. ಆ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 1088 ಕ್ಕೆ ಏರಿಕೆಯಾದಂತಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ. ಧಾರವಾಡ ಜಿಲ್ಲೆಯಲ್ಲಿ ಭಾನುವಾರ ಚಿಕಿತ್ಸೆ ಫಲಿಸದೆ ಒಬ್ಬರು ಸಾವನ್ನಪ್ಪಿದ್ದರೆ, ಈವರೆಗೆ 33 ಜನ ಸಾವನ್ನಪ್ಪಿದ್ದಾರೆ. 25 ಜನ ಸೋಂಕಿತರು ಕೋವಿಡ್ ನಿಯೋಜಿತ ಆಸ್ಪತ್ರೆಗಳ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಭಾನುವಾರ 64 ಜನ ಗುಣಮುಖರಾಗಿ […]
ರಾಜ್ಯದಲ್ಲಿ ಭಾನುವಾರ ಕರೋನಾಕ್ಕೆ 71 ಸಾವು, 2627 ಪ್ರಕರಣ ಪತ್ತೆ
ಬೆಂಗಳೂರು prajakiran.com : ರಾಜ್ಯದಲ್ಲಿ ಭಾನುವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 71 ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 2627 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 38843 ಕ್ಕೆ ಏರಿಕೆಯಾಗಿದೆ. ಇಂದು ರಾಜ್ಯದಲ್ಲಿ693 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 15409 ಜನ ಗುಣಮುಖರಾಗಿದ್ದು, 22746 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 532 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ ಭಾನುವಾರ […]
ರಾಜ್ಯಾದ್ಯಂತ ಆರೋಗ್ಯ ಸೇವೆ ಸ್ಥಗಿತಗೊಳಿಸಿ ಆಶಾ ಕಾರ್ಯಕರ್ತೆಯರ ಹೋರಾಟ
ಧಾರವಾಡ prajakiran.com : ಆಶಾ ಕಾರ್ಯಕರ್ತೆಯರು ತಮ್ಮ ನ್ಯಾಯಯುತ ಬೇಡಿಕೆಗಳಿಗಾಗಿ ನಿರಂತರ ಹೋರಾಟಗಳನ್ನು ನಡೆಸುತ್ತಿದ್ದು, ಆರೋಗ್ಯ ಸೇವೆ ಸ್ಥಗಿತಗೊಳಿಸಿ ಅನಿರ್ದಿಷ್ಟ ಹೋರಾಟಕ್ಕೆ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಕರೆನೀಡಿದೆ. ಕಾರ್ಯಕರ್ತೆಯರಿಗೆ ಸರ್ಕಾರದ ನಿರ್ಲಕ್ಷ್ಯ ಮತ್ತು ಜನವಿರೋಧಿ ಧೋರಣೆಯ ವಿರುದ್ಧ ರಾಜಿರಹಿತ ಹೋರಾಟಕ್ಕೆ ಸಜ್ಜುಗೊಳ್ಳಬೇಕೆಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಮನವಿ ಮಾಡಿದ್ದು, ಇಲಾಖೆಯ ಒತ್ತಡಗಳಿಗೆ ಮಣಿಯದೇ ಮುಂದಿನ ರಾಜಿರಹಿತ ಹೋರಾಟಕ್ಕೆ ಮುನ್ನಡೆಸಲು ನಿರ್ಧರಿಸಿದೆ. ಜು. ೧೩ರಂದು ರಾಜ್ಯದ ಎಲ್ಲಾ ಜಿಲ್ಲೆ, […]
ಧಾರವಾಡ ಜಿಲ್ಲಾಸ್ಪತ್ರೆಯ ಸ್ಟಾಪ್ ನರ್ಸ್ ಸೇರಿ ನಾಲ್ವರು ಕರೋನಾ ಸೇನಾನಿಗಳು ಗುಣಮುಖ
ಧಾರವಾಡ prajakiran.com : ವಿದ್ಯಾನಗರಿ ಧಾರವಾಡ ಜಿಲ್ಲೆಯಾದ್ಯಂತ ಕರೋನಾ ಕಾಟ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಸಾಗುತ್ತಿರುವ ಬೆನ್ನಹಿಂದೆಯೇ ಗುಣಮುಖರಾಗುವವರ ಸಂಖ್ಯೆ ಕೂಡ ಗಣನೀಯವಾಗಿ ಹೆಚ್ಚಳವಾಗುತ್ತಿದೆ. ಅದರಲ್ಲೂ ಕರೋನಾ ಸೋಂಕಿನ ನಿಯಂತ್ರಣಕ್ಕೆ ಹಗಲಿರುಳು ಶ್ರಮಿಸುತ್ತಿರುವ ಪೊಲೀಸ್, ಆರೋಗ್ಯ ಇಲಾಖೆ ಸಿಬ್ಬಂದಿ ಬಳಲಿ ಬೆಂಡಾಗಿ ಆಸ್ಪತ್ರೆಗೆ ಸೇರಿ ಇದೀಗ ಅದರಿಂದ ಗುಣಮುಖರಾಗಿ ಬಿಡುಗಡೆಗೊಂಡಿರುವುದು ಕರೋನಾ ಸೇನಾನಿಗಳ ಹಾಗೂ ಅವರ ಕುಟುಂಬದ ಸದಸ್ಯರ ಮುಖದಲ್ಲಿ ಮಂದಹಾಸ ಮೂಡಿಸಿದೆ. ಧಾರವಾಡದ ಸಂಚಾರ ಪೊಲೀಸ್ ಠಾಣೆ ಹೆಡ್ ಕಾನ್ಸಟೇಬಲ್ ಒಬ್ಬರು ಗುಣಮುಖರಾಗಿ ಮನೆಗೆ ಮರಳಿದ ಬೆನ್ನಲ್ಲೇ […]
ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಆನ್ಲೈನ್ ತರಬೇತಿ
ಧಾರವಾಡ prajakiran.com : ನಗರದಲ್ಲಿಯೇ ಕೇಂದ್ರ ಸ್ಥಾನ ಹೊಂದಿರುವ ಶಿಕ್ಷಣ ಇಲಾಖೆಯ ರಾಜ್ಯ ಮಟ್ಟದ ತರಬೇತಿ ಸಂಸ್ಥೆಯಾಗಿರುವ ಶಾಲಾ ನಾಯಕತ್ವ ಶೈಕ್ಷಣಿಕ ಯೋಜನೆ ಮತ್ತು ನಿರ್ವಹಣಾ ಸಂಸ್ಥೆ (ಸಿಸ್ಲೆಪ್-ಕರ್ನಾಟಕ) ಆಶ್ರಯದಲ್ಲಿ ‘ರಚನಾವಾದ’ ಕುರಿತು ಇಲಾಖಾ ಅಧಿಕಾರಿಗಳಿಗೆ ಆನ್ಲೈನ್ ತರಬೇತಿ ಜರುಗಿತು. ಕೋವಿಡ್-೧೯ ಹಿನ್ನೆಲೆಯಲ್ಲಿ ಮುಖಾಮುಖಿ ತರಬೇತಿ ಹಮ್ಮಿಕೊಳ್ಳಲು ಸಾಧ್ಯವಾಗದೇ ಇರುವುದರಿಂದ ಪ್ರಸ್ತುತ ಗೂಗಲ್ ಮೀಟ್ ಆಪ್ ಬಳಕೆ ಮಾಡಿಕೊಂಡು ಆನ್ಲೈನ್ ಮೂಲಕ ತರಬೇತಿ ಹಮ್ಮಿಕೊಳ್ಳಲಾಗುತ್ತಿದ್ದು, ಬೆಳಗಾವಿ ಹಾಗೂ ಕಲಬುರ್ಗಿ ವಿಭಾಗದಲ್ಲಿಯ ಕ್ಷೇತ್ರ ಸಂಪನ್ಮೂಲ ಕೇಂದ್ರ (ಬಿ.ಆರ್.ಸಿ.) ಸಮನ್ವಯಾಧಿಕಾರಿಗಳಿಗೆ […]
ಕೊನೆಗೂ ಎಚ್ಚೆತ್ತ ಧಾರವಾಡ ಜಿಲ್ಲಾಡಳಿತ : ಅಂಬ್ಯುಲೆನ್ಸ್ ಸಿಗದೆ ಪರದಾಡಿದ್ದ ಹುಬ್ಬಳ್ಳಿ ವ್ಯಕ್ತಿ ಆಸ್ಪತ್ರೆಗೆ ದಾಖಲು
ಹುಬ್ಬಳ್ಳಿ prajakiran.com : ಕಳೆದ ರಾತ್ರಿ 11 ಗಂಟೆಯಿಂದ ಅಂಬ್ಯುಲೆನ್ಸ್ ಗಾಗಿ ಕಾದು ಕುಳಿತಿದ್ದ ಕರೋನಾ ಸೋಂಕಿತ ವ್ಯಕ್ತಿ ಮಾಧ್ಯಮಗಳಲ್ಲಿ ಸುದ್ದಿ ಬಿತ್ತರವಾದ ನಂತರ ಕೊನೆಗೂ ಆಸ್ಪತ್ರೆ ಸೇರಿದ ಘಟನೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ನಡೆದಿದೆ. ಕರೊನಾ ಸೋಂಕಿತನೊಬ್ಬ ನಿನ್ನೇ ರಾತ್ರಿಯಿಂದ ಅಂಬ್ಯುಲೆನ್ಸ್ ಗಾಗಿ ಕಾದು ಕುಳಿತ್ತಿದ್ದ. ಆದರೆ ಆತನನ್ನು ಅಂಬುಲೆನ್ಸ್ ಸಿಬ್ಬಂದಿ ಕರೆದುಕೊಂಡು ಹೋಗಿರಲಿಲ್ಲ. ಹೀಗಾಗಿ ಆತ ತನಗೆ ಕರೆದುಕೊಂಡು ಹೋಗಲು ಅಂಬುಲೈನ್ ಬಂದಿಲ್ಲ ಎಂದು ಹುಬ್ಬಳ್ಳಿಯ ಚೆನ್ನಮ್ಮ ಸರ್ಕಲ್ ಗೆ ಬಂದು ತನ್ನ ಅಳಲು […]
ಕಿಲ್ಲರ್ ಕರೋನಾಕ್ಕೆ ಹಾಸನದಲ್ಲಿ ಭಾನುವಾರ ಇಬ್ಬರು ಸಾವು
ಹಾಸನ prajakiran.com : ಜಿಲ್ಲೆಯಲ್ಲಿ ಭಾನುವಾರ ಸಹ ಕೋವಿಡ್ 19 ಗೆ ಇಬ್ಬರು ಮೃತಪಟ್ಟಿದ್ದಾರೆ. ಆ ಮೂಲಕ ಹಾಸನ ಜಿಲ್ಲೆಯಲ್ಲಿ ಈವರೆಗೆ ಸಾವನ್ನಪ್ಪಿದ್ದವರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ. ಹಾಸನ ನಗರದ 57 ವರುಷದ ಪುರುಷ ಹಾಗೂ ಆಲೂರು ತಾಲ್ಲೂಕಿನ 45 ವರ್ಷದ ಮಹಿಳೆ ಸೋಂಕಿನಿಂದ ಕೊವಿಡ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಹಾಸನ ನಗರದ 57 ವರ್ಷದ ಸೋಂಕಿತ ವ್ಯಕ್ತಿ ಜು 5ರಂದು ನಗರದ ಕೊವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಜು 10 ರಂದು ಐ.ಸಿ.ಯು ನಲ್ಲಿ ಇರಿಸಿ ವೆಂಟಿಲೇಟರ್ ಸೌಲಭ್ಯ […]
ನಟಿ ಐಶ್ವರ್ಯ ರೈ, ಪುತ್ರಿ ಆರಾಧ್ಯಗೂ ಕರೋನಾ ಕಂಟಕ
ಮುಂಬೈ prajakiran.com : ಹಿಂದಿ ಚಿತ್ರರಂಗದ ಸುಪರ್ ಸ್ಟಾರ್ ಹಿರಿಯ ನಟ ಅಮಿತಾಬ್ ಬಚ್ಚನ್ ಹಾಗೂ ಅವರ ಪುತ್ರ ಅಭಿಷೇಕ್ ಬಚ್ಚನ್ ಅವರಿಗೆ ಕರೋನಾ ಪಾಸಿಟಿವ್ ದೃಢಪಟ್ಟ ಬೆನ್ನಲ್ಲೇ ಇದೀಗ ಅವರ ಸೋಸೆ ಐಶ್ವರ್ಯ ರೈ ಹಾಗೂ ಮೊಮ್ಮಗಳಾದ ಆರಾಧ್ಯ ಗೂ ಮಹಾಮಾರಿ ವಕ್ಕರಿಸಿದೆ. ನಿನ್ನೇಯಷ್ಟೇ ಇಬ್ಬರು ಮುಂಬೈನ ಪ್ರತಿಷ್ಠಿತ ನಾನಾವತಿ ಆಸ್ಪತ್ರೆಗೆ ದಾಖಲಾಗಿ ಕೋವಿಡ್ 19 ಚಿಕಿತ್ಸೆ ಪಡೆಯುತ್ತಿದ್ದರು. ಇಬ್ಬರಿಗೂ ಸೋಂಕಿನ ಲಕ್ಷಣಗಳಿಲ್ಲ. ಚಿಕಿತ್ಸೆಗೆ ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಹಿನ್ನಲೆಯಲ್ಲಿ ಬಚ್ಚನ್ […]
ಧಾರವಾಡದಲ್ಲಿ ಚಪ್ಪಲಿ ಅಂಗಡಿ ಬೆಂಕಿ : ಲಕ್ಷಾಂತರ ರೂಪಾಯಿ ಹಾನಿ
ಧಾರವಾಡ prajakiran.com : ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಚಪ್ಪಲಿ ಅಂಗಡಿವೊಂದು ಸುಟ್ಟು ಲಕ್ಷಾಂತರ ರೂಪಾಯಿ ಸಂಭವಿಸಿದ ಘಟನೆ ವಿದ್ಯಾನಗರಿ ಧಾರವಾಡದಲ್ಲಿ ನಡೆದಿದೆ. ನಗರದ ಕರ್ನಾಟಕ ವಿಶ್ವವಿದ್ಯಾಲಯದ ಆವರಣದಲ್ಲಿರುವ ಚಪ್ಪಲಿ ಅಂಗಡಿಯಲ್ಲಿ ಕಳೆದ ರಾತ್ರಿ ಈ ದುರಂತ ಸಂಭವಿಸಿದೆ. ರಾಜು ಬಳ್ಳಾರಿ ಎಂಬುವವರಿಗೆ ಸೇರಿದ ಚಪ್ಪಲ ಅಂಗಡಿ, ಇದಾಗಿದ್ದು, ಇದರಿಂದಾಗಿ ಸುಮಾರು 2 ಲಕ್ಷಕ್ಕೂ ಹೆಚ್ಚು ವಸ್ತುಗಳು ಸುಟ್ಟ ಭಸ್ಮವಾಗಿದೆ ಎಂದು ಅಂಗಡಿ ಮಾಲೀಕ ಅಳಲು ತೋಡಿಕೊಂಡಿದ್ದಾನೆ. ಕಳೆದ ತಡರಾತ್ರಿ ಶಾರ್ಟ್ ಸರ್ಕ್ಯೂಟ್ನಿಂದ ಈ ಅಗ್ನಿ ಆಕಸ್ಮಿಕ […]