prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
ಅಪರಾಧ

ಧಾರವಾಡದಲ್ಲಿ ಕೆಲ ಕಾಲ ಭಯ ಹುಟ್ಟಿಸಿದ ಅನಾಥ ಶವ….!

ಧಾರವಾಡ prajakiran.com : ಧಾರವಾಡದ ಸುಭಾಸ ರಸ್ತೆಯ ಕೆಸಿಸಿ ಬ್ಯಾಂಕ್ ಪಕ್ಕದ ಹೋಟೆಲ್ ಎದುರು ಪತ್ತೆಯಾದ‌ ವ್ಯಕ್ತಿಯ ಶವ ಶುಕ್ರವಾರ ಕೆಲ ಕಾಲ ಸ್ಥಳೀಯರಿಗೆ ಭಯ ಹುಟ್ಟಿಸಿತ್ತು. ಸುಮಾರು ೪೫ ವರ್ಷದ ವ್ಯಕ್ತಿ ಬೆಳ್ಳಂ ಬೆಳಗ್ಗೆ ಹೋಟೆಲ್ ಮುಂದೆ ಶವವಾಗಿ ಪತ್ತೆಯಾಗಿದ್ದ. ಬೆಳಗ್ಗೆ ಅಂಗಡಿ ಮಾಲೀಕ ಬಂದಾಗ ಈ ಮಾಹಿತಿ ತಿಳಿದು ಬೆಚ್ಚಿಬಿದ್ದಿದ್ದ. ತಕ್ಷಣ ಸ್ಥಳೀಯರು ಅಕ್ಕ ಪಕ್ಕದ ಅಂಗಡಿಯವರು ಕೂಡಲೇ ಜಿಲ್ಲಾಡಳಿತದ ಕಂಟ್ರೋಲ್ ರೂಂ.ಗೆ, ೧೦೮ ಸಿಬ್ಬಂದಿಗೆ ಸಹ ಮಾಹಿತಿ ನೀಡಿದ್ದರು.  ಆನಂತರ ಸ್ಥಳಕ್ಕೆ ಬಂದಅಂಬುಲೈನ್ಸ್ […]

ರಾಜ್ಯ

ಯಾದಗಿರಿ ಜಿಲ್ಲಾ ಪಂಚಾಯತ್ : ಕಾಂಗ್ರೆಸನ ಬಂಡಾಯ ಅಭ್ಯರ್ಥಿ ಗೆ ಬಿಜೆಪಿಯ10 ಸದಸ್ಯರ ಬೆಂಬಲ….!

ಯಾದಗಿರಿ prajakiran.com : ಕಳೆದ ದಿನಗಳ ಹಿಂದೆ ಯಾದಗಿರಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಸ್ಥಾನವು ತೆರವಾದ ಹಿನ್ನೆಲೆಯಲ್ಲಿ ನಡೆದ ಜುಲೈ 10 ರಂದು ಜಿಲ್ಲಾ ಪಂಚಾಯತ್ ಅಧ್ಯಕ್ಷರ ಸ್ಥಾನಕ್ಕೆ ಚುನಾವಣೆ ನಡೆಯಿತು. ಕರೋನ ವೈರಸ್ ನಿಂದ ಸ್ವಲ್ಪ ತಡೆ : ಯಾದಗಿರಿ ಜಿಲ್ಲಾಡಳಿತದ ಸಿಬ್ಬಂದಿಗಳಿಗೆ ಕರೋನಾವೈರಸ್  ಬಂದಿರುವ ಹಿನ್ನೆಲೆ ಜಿಲ್ಲಾಡಳಿತದ ಭವನಕ್ಕೆ ಸಂಪೂರ್ಣ ಸ್ಯಾನಿಟೇಜಿಂಗ್ ಸಿಂಪರಣೆ ಮಾಡಲಾಗುತ್ತಿತ್ತು. ಹೀಗಾಗಿ ಬೆಳಿಗ್ಗೆ ಪ್ರಾರಂಭವಾಗಬೇಕಿದ್ದ  ಜಿಲ್ಲಾ ಪಂಚಾಯತ್ ಅಧ್ಯಕ್ಷರ  ಚುನಾವಣೆ    ಮಧ್ಯಾಹ್ನ ಪ್ರಾರಂಭವಾಯಿತು. ಮಧ್ಯಾಹ್ನ 3 ಗಂಟೆಗೆ 22 ಜಿಲ್ಲಾ […]

ರಾಜ್ಯ

ಧಾರವಾಡದ ವ್ಯಾಪಾರಸ್ಥರಿಂದಲೂ ಸ್ವಯಂ ಪ್ರೇರಿತ ನಿರ್ಬಂಧ

ಧಾರವಾಡ prajakiran.com : ವಿದ್ಯಾನಗರಿ ಧಾರವಾಡ ಜಿಲ್ಲೆಯಲ್ಲಿ ಕರೋನಾ ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದರಿಂದ ಧಾರವಾಡದ ವಿವಿಧ ವ್ಯಾಪಾರಸ್ಥರು ಸ್ವಯಂಪ್ರೇರಿತ ನಿರ್ಬಂಧವಿಧಿಸಿಕೊಂಡು ಇತರರಿಗೆ ಮಾದರಿಯಾಗಿದ್ದಾರೆ. ಧಾರವಾಡದ ಗ್ರಾಹಕ ವಸ್ತುಗಳ ವಿತರಕರ ಸಂಘ, ಕಿರಾಣಿ ವರ್ತಕರ ಸಂಘ, ಜ್ಯುವೆಲರಿ ವರ್ತಕರ ಸಂಘ, ಬಟ್ಟೆ ವ್ಯಾಪಾರಿ ವರ್ತಕರ ಸಂಘ, ಹೋಲ್ ಸೇಲ್ ವ್ಯಾಪಾರಸ್ಥರ ಸಂಘ, ಹೂ ವ್ಯಾಪಾರಸ್ಥರ ಸಂಘ, ಎಲಿ ಅಡಿಕೆ ವರ್ತಕರ ಸಂಘ ಸೇರಿದಂತೆ ಇನ್ನಿತರ ಎಲ್ಲಾ ವ್ಯಾಪಾರಿ ಸಂಘಗಳು ಧಾರವಾಡದಲ್ಲಿ ಕರೋನಾ ನಿಯಂತ್ರಣಕ್ಕೆ ಸಂಪೂರ್ಣ ಸಹಮತ ವ್ಯಕ್ತಪಡಿಸಿದ್ದಾರೆ. ಇದಕ್ಕಾಗಿ […]

ರಾಜ್ಯ

ಧಾರವಾಡದಲ್ಲಿ ಎರಡನೇ ದಿನ 5 ಜನರಿಗೆ ಮನೆಯಲ್ಲಿಯೇ ಚಿಕಿತ್ಸೆ

ಧಾರವಾಡ prajakiran.com : ಕೋವಿಡ್ ಸೋಂಕು ಇದ್ದರೂ ಕೂಡ ರೋಗ ಲಕ್ಷಣ ಇಲ್ಲದವರು ಮತ್ತು ಸೌಮ್ಯ ಲಕ್ಷಣವುಳ್ಳ ಜನರಿಗೆ ತಮ್ಮ ಮನೆಗಳಲ್ಲಿಯೇ ಪ್ರತ್ಯೇಕವಾಗಿ ಇದ್ದು ಟೆಲಿ ಕನ್ಸಲ್ಟೇಷನ್ ಮೂಲಕ ಚಿಕಿತ್ಸೆ ಪಡೆಯುವ  ಅವಕಾಶ ಕಲ್ಪಿಸಲಾಗಿದೆ. ಮೋದಲ ದಿನ 12 ಜನರು ಮನೆಯಲ್ಲಿಯೇ ಚಿಕಿತ್ಸೆಗೆ ಸಮ್ಮತಿ ಪಡೆದಿದ್ದರೆ, ಎರಡನೇ  ದಿನ ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ 5  ಜನ ಸ್ವಯಂ ಪ್ರೇರಣೆಯಿಂದ ಈ ಮಾದರಿಯ ಚಿಕಿತ್ಸೆ ಆಯ್ದುಕೊಂಡಿದ್ದಾರೆ. ದೇಶದಾದ್ಯಂತ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಸಂದರ್ಭದಲ್ಲಿ , ಕೋವಿಡ್ ಸೋಂಕು ಇದ್ದರೂ ರೋಗ […]

ರಾಜ್ಯ

ಧಾರವಾಡ 17, ಹುಬ್ಬಳ್ಳಿ 24, ಕುಂದಗೋಳ 5, ನವಲಗುಂದ 3 ಸೇರಿ 50 ಜನರಿಗೆ ಪಾಸಿಟಿವ್  

*ಒಟ್ಟು 882 ಕ್ಕೇರಿದ ಪ್ರಕರಣಗಳ ಸಂಖ್ಯೆ* *ಇದುವರೆಗೆ 332 ಜನ ಗುಣಮುಖ ಬಿಡುಗಡೆ* *521 ಸಕ್ರಿಯ ಪ್ರಕರಣಗಳು* ಇದುವರೆಗೆ 29  ಮರಣ ಧಾರವಾಡ prajakiran.com : ಜಿಲ್ಲೆಯಲ್ಲಿ ಶುಕ್ರವಾರ ಮತ್ತೇ ಹೊಸದಾಗಿ 50 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ . ಆ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 882 ಕ್ಕೆ ಏರಿದೆ. ಇದುವರೆಗೆ 332 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 521 ಪ್ರಕರಣಗಳು ಸಕ್ರಿಯವಾಗಿವೆ.ಅಲ್ಲದೆ, ಈವರೆಗೆ ಚಿಕಿತ್ಸೆ ಫಲಿಸದೆ ಒಟ್ಟು 29 ಜನ ಮೃತಪಟ್ಟಿದ್ದಾರೆ  ಎಂದು ಜಿಲ್ಲಾಧಿಕಾರಿಗಳಾದ […]

ರಾಜ್ಯ

ವಿಜಯಪುರ  ಎಸ್ಪಿ ಕಚೇರಿ, ಗ್ರಾಮೀಣ ಪೊಲೀಸ್ ಠಾಣೆ ಸೀಲ್ ಡೌನ್

ವಿಜಯಪುರ prajakiran.com : ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಯ ಎ ಎಸ್ ಐ ಒಬ್ಬರಿಗೆ ಕರೋನಾ ಬಂದ ಹಿನ್ನಲೆಯಲ್ಲಿ ಎಸ್ಪಿ ಕಚೇರಿಯನ್ನೇ ಸೀಲ್ ಡೌನ್ ಮಾಡಲಾಗಿದೆ. ಅದೇರೀತಿ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆ ಕಾನ್ಸಟೇಬಲ್ ಒಬ್ಬರಿಗೆ ಕರೋನಾ ಪಾಸಿಟಿವ್ ಇರುವುದು ದೃಢಪಟ್ಟ ಹಿನ್ನಲೆಯಲ್ಲಿ ಗ್ರಾಮೀಣ ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದೆ. ಕಳೆದ ಹಲವು ದಿನಗಳಿಂದ ವಿಜಯಪುರ ಜಿಲ್ಲೆಯಲ್ಲಿ ಕರೋನಾ ರಣಕೇಕೆ ಹಾಕುತ್ತಿದ್ದು, ಕೊರೊನಾ ವಾರಿಯರ್ಸ್ ಆಗಿರುವ ಪೊಲಿಸ್ ಇಲಾಖೆಗೂ ಇದೀಗ ಕೊರೊನಾ ಭಯ ಶುರುವಾಗಿದೆ.  ಈಗಾಗಲೇ ಎಸ್ಪಿ […]

ರಾಜ್ಯ

ಚಿಕಿತ್ಸೆ ನಿರಾಕರಿಸಿದಕ್ಕೆ ರೋಗಿಯೊಂದಿಗೆ ವಿಜಯಪುರ ಡಿಸಿ ಕಚೇರಿಗೆ ಬಂದ ಕುಟುಂಬಸ್ಥರು…!

ವಿಜಯಪುರ prajakiran.com : ತೀವ್ರ ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ರೋಗಿಯ ಚಿಕಿತ್ಸೆಯನ್ನು ಜಿಲ್ಲಾಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆ ವೈದ್ಯರು ನಿರಾಕರಿಸಿದ ಹಿನ್ನೆಲೆ ಕುಟುಂಬಸ್ಥರು ಕಾರ್‍ನಲ್ಲಿ ರೋಗಿಯೊಂದಿಗೆ ನಗರದ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಘಟನೆ ಶುಕ್ರವಾರ ನಡೆದಿದೆ. ಜಿಲ್ಲೆಯ ಸಿಂದಗಿ ತಾಲೂಕಿನ ಮಲಘಾಣ ಗ್ರಾಮದ ಜಮೀಲ್ ಅಹಮ್ಮದ್ ಎಂಬವರು ತೀವ್ರ ಉಸಿರಾಟ ತೊಂದರೆಯಿಂದ ಬಳಲುತ್ತಿದ್ದರು.  ಗುರುವಾರ ತಡ ರಾತ್ರಿ ಸಿಂದಗಿ ಪಟ್ಟಣದ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು, ಹೆಚ್ಚಿನ ಚಿಕಿತ್ಸೆಗಾಗಿ ವಿಜಯಪುರಕ್ಕೆ ಕರೆತಂದಿದ್ದಾರೆ. ರೋಗಿ ತೀವ್ರ ಉಸಿರಾಟದಿಂದ […]

ರಾಜ್ಯ

ಹುಬ್ಬಳ್ಳಿ ಪೂರ್ವ ಕಾಂಗ್ರೆಸ್ ಶಾಸಕ ಪ್ರಸಾದ ಅಬ್ಬಯ್ಯಗೂ ಕರೊನಾ

ಹುಬ್ಬಳ್ಳಿ prajakiran.com : ಮಹಾಮಾರಿ ಕರೊನಾ ಕಾಟ ಜನಪ್ರತಿನಿಧಿಗಳಿಗೂ ದಿನದಿಂದ ದಿನಕ್ಕೆ ವಿಸ್ತರಿಸುತ್ತಲೇ ಇದೆ. ಶುಕ್ರವಾರ ಹುಬ್ಬಳ್ಳಿ ಪೂರ್ವ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರಸಾದಅಬ್ಬಯ್ಯಗೂ ಕೊರೊನಾ ಸೋಂಕು ತಗುಲಿದೆ.  ನಿನ್ನೆ ಕೆಮ್ಮು, ನೆಗಡಿ ಕಾಣಿಸಿಕೊಂಡಿದ್ದರಿಂದ ಗುರುವಾರ ಹುಬ್ಭಳ್ಳಿಯ ಕಿಮ್ಸ್ ಗೆ ದಾಖಲಾಗಿದ್ದರು. ನಿನ್ನೆಯೇ ಶಾಸಕರ ಗಂಟಲ ದ್ರವ ಪರೀಕ್ಷೆ ಮಾಡಲಾಗಿತ್ತು. ಇವತ್ತು ಅವರ ವರದಿ ಕೈ ಸೇರಿದ್ದು ಕರೋನಾ ಸೋಂಕು ಪಾಸಿಟಿವ್ ಇರುವದು ದೃಢಪಟ್ಟಿದೆ. ಈ ಹಿನ್ನಲೆಯಲ್ಲಿ ಶಾಸಕರನ್ನು ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಶಾಸಕ […]

hubli kims
ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಶುಕ್ರವಾರ 2 ಸಾವು, 50 ಜನರಿಗೆ ಕರೋನಾ

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಶುಕ್ರವಾರ ಸಂಜೆ ಮತ್ತೆ ಹೊಸದಾಗಿ 50 ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ. ಆ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 882ಕ್ಕೆ ಏರಿಕೆಯಾದಂತಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ.  ಧಾರವಾಡ ಜಿಲ್ಲೆಯಲ್ಲಿ ಶುಕ್ರವಾರ  ಚಿಕಿತ್ಸೆ ಫಲಿಸದೆ ಇಬ್ಬರು ಸಾವನ್ನಪ್ಪಿದ್ದರೆ, 18 ಜನ ಸೋಂಕಿತರು ಕೋವಿಡ್ ನಿಯೋಜಿತ ಆಸ್ಪತ್ರೆಗಳ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 13 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ ಎಂದು ವಿವರಿಸಿದೆ. ಧಾರವಾಡ ಜಿಲ್ಲೆಯಲ್ಲಿ ಜು.10 […]

ರಾಜ್ಯ

ರಾಜ್ಯದಲ್ಲಿ ಶುಕ್ರವಾರ ಕರೋನಾಕ್ಕೆ 57 ಸಾವು, 2313  ಪ್ರಕರಣ ಪತ್ತೆ

ಬೆಂಗಳೂರು prajakiran.com : ರಾಜ್ಯದಲ್ಲಿ ಶುಕ್ರವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 57 ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 2313 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ        33418 ಕ್ಕೆ ಏರಿಕೆಯಾಗಿದೆ.  ಇಂದು ರಾಜ್ಯದಲ್ಲಿ   1003 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು  13836   ಜನ ಗುಣಮುಖರಾಗಿದ್ದು,    19035  ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 472   ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ -19 ಸೋಂಕಿನಿಂದ […]