ರಾಜ್ಯ

ಕೆ ಐ ಎ ಡಿ ಬಿ ಬಹು ಕೋಟಿ ಹಗರಣ : ಪ್ರಮುಖ ಆರೋಪಿ ಅಶ್ಫಕ್ ದುಂಡಸಿ ಜಾಮೀನಿನ ಅರ್ಜಿ ವಜಾ

*ಕೆ ಐ ಎ ಡಿ ಬಿ ಬಹು ಕೋಟಿ ಹಗರಣ : ಪ್ರಮುಖ ಆರೋಪಿ ಅಶ್ಫಕ್ ದುಂಡಸಿ ಜಾಮೀನಿನ ಅರ್ಜಿ ವಜಾ* *ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶ* *ವಿ.ಡಿ. ಸಜ್ಜನ ಸೇರಿದಂತೆ ಹಲವರಿಗೆ ಜೈಲೂಟವೇ ಗತಿ* ಧಾರವಾಡ ಪ್ರಜಾಕಿರಣ.ಕಾಮ್ : ರೈತರ ಹೆಸರಿನಲ್ಲಿ ನಕಲಿ‌ ದಾಖಲೆ ಸೃಷ್ಟಿಸಿ ಡಬಲ್ ಪೇಮೆಂಟ್ ಪಡೆಯುವ ಮೂಲಕ ಸರಕಾರದ ಖಜಾನೆಗೆ ಕೋಟ್ಯಾಂತರ ರೂಪಾಯಿ ನಷ್ಟವೆಸಗಿದ ಆರೋಪದಲ್ಲಿ ಸಿಐಡಿ ಯಿಂದ ಬಂಧನಕ್ಕೆ ಒಳಗಾಗಿ ಧಾರವಾಡ ಕೇಂದ್ರ ಕಾರಾಗೃಹ ಸೇರಿರುವ ಪ್ರಮುಖ ಆರೋಪಿ […]

ರಾಜ್ಯ

ಧಾರವಾಡದ ರೌಡಿಶೀಟರ್‌ ಓಂಕಾರ್ ರಾಯಚೂರು ಸೇರಿ ನಾಲ್ವರ ಬಂಧನ

*ಧಾರವಾಡ ಗ್ರಾಮೀಣ ಪೊಲೀಸ್ ಮೇಲೆ ಹಲ್ಲೆ ಮಾಡಿದ ರೌಡಿಶೀಟರ್‌ ಓಂಕಾರ್ ರಾಯಚೂರು ಹಾಗೂ ಮೂವರ ಬಂಧನ* *ರಾಮರಾಜ್ಯ ಹೆಸರಿನಲ್ಲಿ ಗ್ಯಾಂಗ್ ಕಟ್ಟಿದ್ದ ಭೂಪ* *ಈ ಹಿಂದೆ ರಾಜಿಸಂಧಾನಕ್ಕೆ ಅಂತ ಕರೆದು ಓಣಿಯ ಯುವಕ ಅಜಯ್ ಪಠಾರೆ ಮೇಲೆ ಹಲ್ಲೆ ಮಾಡಿದ್ದ* ಧಾರವಾಡ ಪ್ರಜಾಕಿರಣ.ಕಾಮ್ : ಮಾಡೋದು ಅನಾಚಾರ, ಮನೆ ಮುಂದೆ ಬೃಂದಾವನ ಅನ್ನೋ ರೀತಿಯಲ್ಲಿ ಧಾರವಾಡದಲ್ಲಿ ಹಿಂದುತ್ವ, ಅದು, ಇದು ಅಂತ ರಾಮರಾಜ್ಯ ಹೆಸರಿನಲ್ಲಿ ಗ್ಯಾಂಗ್ ಕಟ್ಟಿ ಮೆರೆಯುತ್ತಿದ್ದ ಭೂಪ ಇದೀಗ ಧಾರವಾಡ ಗ್ರಾಮೀಣ ಪೊಲೀಸರ ಅತಿಥಿಯಾಗಿದ್ದಾನೆ. […]

ರಾಜ್ಯ

ಧಾರವಾಡ : ಟ್ಯೂಶನ್‌ಗೆ ಹೋಗಿಲ್ಲ, ಮನೆಯಲ್ಲೇ ಓದಿ ಶೇ 94ರಷ್ಟು ಫಲಿತಾಂಶ

*ಟ್ಯೂಶನ್‌ಗೆ ಹೋಗಿಲ್ಲ, ಮನೆಯಲ್ಲೇ ಓದಿ ಶೇ 94ರಷ್ಟು ಫಲಿತಾಂಶ: ಪತ್ರಕರ್ತ ಪ್ರಸನ್ನ ಕರ್ಪೂರ ಮಗಳ‌ ಸಾಧನೆ* ಹೀಗೆ ಓದಬೇಕು. ಇಂತಿಷ್ಟೇ ಹೊತ್ತು ಓದಬೇಕು. ಈ ತರಹದ ಯಾವುದೇ ನಿರ್ದಿಷ್ಟ ವೇಳಾಪಟ್ಟಿ ಹಾಕಿಕೊಂಡು ಓದಿದವಳಲ್ಲ ನಾನು. ಯಾವಾಗ ಯಾವ ವಿಷಯ ಬೇಕೋ ಅದನ್ನು ಲಕ್ಷ್ಯ ಕೊಟ್ಟು ಓದುತ್ತಿದ್ದೆ. ಅದು ಫಲ ನೀಡಿತು. ಪಿಯುಸಿ ದ್ವಿತೀಯ ಸೈನ್ಸ್ ನಲ್ಲಿ ಶೇ. 94 ರಷ್ಟು ಫಲಿತಾಂಶ ಪಡೆದ ಧಾರವಾಡದ ಪ್ರಿಸಂ ಕಾಲೇಜ್ ವಿದ್ಯಾರ್ಥಿನಿ ಹಾಗೂ ಹಿರಿಯ ಪತ್ರಕರ್ತ ಪ್ರಸನ್ನ ಕರ್ಪೂರರ ಪುತ್ರಿ […]

ರಾಜ್ಯ

ಉಘೇ ಉಘೇ ಮಾದಪ್ಪ : ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ರಥೋತ್ಸವ

ಚಾಮರಾಜನಗರ ಪ್ರಜಾಕಿರಣ.ಕಾಮ್ : ರಾಜ್ಯದ ಪ್ರಸಿದ್ಧ ಧಾರ್ಮಿಕ ಸ್ಥಳವಾದ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರಾ ಮಹೋತ್ಸವದ ಪ್ರಯುಕ್ತ ಕೊನೆಯ ದಿನವಾದ ಮಂಗಳವಾರ ಸಹ್ರಸ್ರಾರು ಭಕ್ತರ ಸಮ್ಮುಖದಲ್ಲಿ ಮಹಾರಥೋತ್ಸವ ವಿಜೃಂಭಣೆಯಿಂದ ಜರುಗಿತು. ಹನೂರು ತಾಲ್ಲೂಕಿನ ಮಹದೇಶ್ವರ ಬೆಟ್ಟದಲ್ಲಿ ನಡೆದ ಮಾದಪ್ಪನ ರಥೋತ್ಸವದ ಕಾರ್ಯದಲ್ಲಿ ಶ್ರೀ ಸಾಲೂರು ಬೃಹನ್ ಮಠದ ಅಧ್ಯಕ್ಷರಾದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿಗಳು ಸೇರಿದಂತೆ ಬೇಡಗಂಪಣ ಅರ್ಚಕರು ಹಾಗೂ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ತೇರನ್ನು ವಿವಿಧ ಬಗೆಯ ಪುಷ್ಪಗಳು, […]

ರಾಜ್ಯ

ಧಾರವಾಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರರಾಗಿ ಸ್ಪರ್ಧೆ

ಬೆಂಗಳೂರು ಪ್ರಜಾಕಿರಣ.ಕಾಮ್ : ಧಾರವಾಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಾಗಿ ಶಿರಹಟ್ಟಿಯ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಪ್ರಕಟಿಸಿದ್ದಾರೆ. ಅವರು ಬೆಂಗಳೂರಿನ ವೀರಶೈವ ಲಿಂಗಾಯತ ಭವನದಲ್ಲಿ ತಮ್ಮ ಬೆಂಬಲಿಗರು, ಹಿತೈಷಿಗಳ ಜೊತೆ ಸಭೆ ನಡೆಸಿದ ಬಳಿಕ ಈ ವಿಷಯ ಘೋಷಿಸಿದರು. ಧಾರವಾಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ತಾವು ಕಣಕ್ಕಿಳಿಯಲೇಬೇಕೆಂದು ಬೆಂಬಲಿಗರು ಒಕ್ಕೊರಲಿನಿಂದ ಒತ್ತಾಯಿಸಿದ ಪರಿಣಾಮ ಸ್ಪರ್ಧೆ ಮಾಡುವುದಾಗಿ ಸ್ವಾಮೀಜಿ ತಿಳಿಸಿದರು. “ನೊಂದ ಜನರು ನಮ್ಮ ಜೊತೆಗೆ ನೋವು ತೋಡಿಕೊಂಡಿದ್ದರಿಂದ ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ. ಕರ್ನಾಟಕದಲ್ಲಿ ಒಕ್ಕಲಿಗ, […]

ರಾಜ್ಯ

ಆದಿತ್ಯ ಮಿಲ್ಕ್ ಸಂಸ್ಥಾಪಕ ಶಿವಕಾಂತ ಸಿದ್ನಾಳ ಇನ್ನಿಲ್ಲ….!

ಬೆಳಗಾವಿ ಪ್ರಜಾಕಿರಣ.ಕಾಮ್  : ಜಿಲ್ಲೆಯ ಖ್ಯಾತ ಉದ್ಯಮಿ, ಆದಿತ್ಯ ಮಿಲ್ಕ್ ಸಂಸ್ಥಾಪಕ ಶಿವಕಾಂತ ಎಸ್. ಸಿದ್ನಾಳ (48) ಅವರು ಶನಿವಾರ ವಿಧಿವಶರಾದರು. ಅವರಿಗೆ ಪತ್ನಿ ದೀಪಾ ಸಿದ್ನಾಳ, ಓರ್ವ ಪುತ್ರ ಮತ್ತು ಪುತ್ರಿ ಸೇರಿದಂತೆ ಅಪಾರ ಬಂಧು-ಬಳಗವಿದೆ. ಮೂಲತಃ ಬೈಲಹೊಂಗಲ ತಾಲೂಕಿನ ಸಾಣಿಕೊಪ್ಪ ಗ್ರಾಮದ ಶಿವಕಾಂತ ಸಿದ್ನಾಳ ಅವರು ಆದಿತ್ಯ ಮಿಲ್ಕ್ ಉದ್ಯಮ ಆರಂಭಿಸುವ ಮೂಲಕ ಜಿಲ್ಲೆಯಲ್ಲಿ ಹೈನುಗಾರಿಕೆ ಕ್ಷೇತ್ರದಲ್ಲಿ ಕ್ರಾಂತಿಯನ್ನೇ ಮಾಡಿದ್ದರು. ವಿಆರ್‌ಎಲ್ ಸಂಮೂಹ ಸಂಸ್ಥೆಗಳ ಚೇರ್ಮನ್ ಡಾ.ವಿಜಯ ಸಂಕೇಶ್ವರ ಅವರ ಅಳಿಯರಾಗಿದ್ದ ಶಿವಕಾಂತ ಸಿದ್ನಾಳ […]

ರಾಜ್ಯ

ಯಮನೂರು ಚಾಂಗದೇವರ ಜಾತ್ರೆಯಲ್ಲಿ ನೀರಿಗಾಗಿ ಭಕ್ತರ ಪರದಾಟ….!?

*ಯಮನೂರು ಚಾಂಗದೇವ ಜಾತ್ರೆಯಲ್ಲಿ ಭಕ್ತರ ಪರದಾಟ* *ಶಾಸಕ ಎನ್. ಎಚ್.ಕೋನರಡ್ಡಿ ನಿರ್ಲಕ್ಷ್ಯ ಸರಿಯಲ್ಲ* *ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅಸಮಾಧಾನ* ಹುಬ್ಬಳ್ಳಿ ಪ್ರಜಾಕಿರಣ. ಕಾಮ್ : ಉತ್ತರ ಕರ್ನಾಟಕ ಭಾಗದ ಪ್ರಸಿದ್ಧ ಜಾತ್ರೆಗಳ ಪೈಕಿ ಒಂದಾಗಿರುವ ನವಲಗುಂದ ತಾಲ್ಲೂಕಿನ ಯಮನೂರು ಗ್ರಾಮದ ಚಾಂಗದೇವರ ಜಾತ್ರೆಯಲ್ಲಿ ಸಾವಿರಾರು ಭಕ್ತರು ಪವಿತ್ರ ಸ್ನಾನಕ್ಕೆ ಬೆಣ್ಣೆಹಳ್ಳದಲ್ಲಿ ನೀರಿಲ್ಲದೆ ಪರದಾಟ ನಡೆಸಿದ್ದಾರೆ. ಬೆಣ್ಣಿಹಳ್ಳದಲ್ಲಿ ನೀರಿಲ್ಲದ ಪರಿಣಾಮ ಇರುವ ಅಲ್ಪಸ್ವಲ್ಪ ನೀರಲ್ಲೇ ಚಾಂಗದೇವರ ಭಕ್ತಾದಿಗಳು ಸ್ನಾನ, ನೆಮ ಮುಗಿಸಿಕೊಳ್ಳುತ್ತಿದ್ದಾರೆ. ಪ್ರತಿ ವರ್ಷ ಹೋಳಿಹುಣ್ಣಿಮೆ […]

ರಾಜ್ಯ

ಧಾರವಾಡದ ಮನಸೂರಿನಲ್ಲಿ ಮತ್ತೆ ಮೂರು ಕರುಗಳ ಮೇಲೆ ಚಿರತೆ ದಾಳಿ…!

ಧಾರವಾಡ ಪ್ರಜಾಕಿರಣ.ಕಾಮ್ : ಧಾರವಾಡ ತಾಲೂಕಿನ  ಮನಸೂರ ಗ್ರಾಮದಲ್ಲಿ ಕಳೆದೊಂದು ವಾರದಿಂದ ಬೀಡು ಬಿಟ್ಟಿರುವ ಚಿರತೆ ಇದೀಗ ಮತ್ತೊಮ್ಮೆ ಮೂರು ಕರುಗಳ ಮೇಲೆ ದಾಳಿ ಮಾಡಿದೆ. ಇದರಿಂದಾಗಿ ಮೂರು ಕರುಗಳು ಚಿರತೆಯ ರಕ್ತದಾಹಕ್ಕೆ ಬಲಿಯಾದಂತಾಗಿವೆ. ಇದರಿಂದಾಗಿ ರೈತ ಸಮುದಾಯ ಮತ್ತಷ್ಟು ಆತಂಕಕ್ಕೆ ಸಿಲುಕಿದೆ. ಧಾರವಾಡ ತಾಲೂಕಿನ ಮನಸೂರ ಗ್ರಾಮದ ಬಳಿಯ ಜೋಶಿ ಫಾರ್ಮ್ ಹೌಸ್ ನಲ್ಲಿ ಕಟ್ಟಿದ್ದ ಆಕಳ‌ ಕರುಗಳ ಮೇಲೆ ನಿನ್ನೆ ತಡರಾತ್ರಿ ಚಿರತೆ ಈ ದಾಳಿ ನಡೆಸಿದೆ. ಕಳೆದ‌ ವಾರ‌ ಇದೇ ಗ್ರಾಮದಲ್ಲಿ ಕುಬೇರಪ್ಪ […]

ರಾಜ್ಯ

ಗೂಂಡಾ ಮುಕ್ತ ಧಾರವಾಡ ಮಾಡಿ : ಬಸವರಾಜ‌ ಕೊರವರ

ಧಾರವಾಡ ಪ್ರಜಾಕಿರಣ.ಕಾಮ್  : ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ಹಾಗೂ ಗೂಂಡಾ ಕಾಯ್ದೆಯಡಿ ರೌಡಿಶೀಟರ್ ಗಡಿಪಾರು ಮಾಡಲು ಒತ್ತಾಯಿಸಿ ನೂರಾರು ಆಟೋ ಚಾಲಕರು ಧಾರವಾಡದ ಜನಜಾಗೃತಿ ಸಂಘ ಅಧ್ಯಕ್ಷರಾದ ಬಸವರಾಜ ಕೊರವರ ಹಾಗೂ ನಾಗರಾಜ ಕಿರಣಗಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ, ಮುಖ್ಯಮಂತ್ರಿ ಹಾಗೂ ಗೃಹಸಚಿವರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಸವರಾಜ ಕೊರವರ, ವಿದ್ಯಾನಗರಿ ಧಾರವಾಡದಲ್ಲಿ ಪುಂಢರು ಹಾವಳಿ ವಿಪರೀತ ಹೆಚ್ಚಿದೆ. ಹಲವರಂತೂ ಗ್ಯಾಂಗ್ ಕಟ್ಟಿಕೊಂಡು ರಾಜಾರೋಷವಾಗಿ ಅಂಧಾ ದರ್ಬಾರ್ ನಡೆಸುತ್ತಿದ್ದಾರೆ. […]

ರಾಜ್ಯ

ಧಾರವಾಡದ ಆರ್‌ಎಫ್‌ಓ ಮಹೇಶ ಹಿರೇಮಠ ಮನೆ, ಕಚೇರಿ ಮೇಲೆ ಲೋಕಾ ದಾಳಿ

ಧಾರವಾಡ ಪ್ರಜಾಕಿರಣ.ಕಾಮ್ : ಧಾರವಾಡ ಅರಣ್ಯ ಇಲಾಖೆಯ ವಿಭಾಗೀಯ ಅರಣ್ಯ ಅಧಿಕಾರಿಯ ಮಹೇಶ ಹಿರೇಮಠ ಅವರ ಮನೆ ಮೇಲೆ ಲೋಕಾಯುಕ್ತರು ಬುಧವಾರ ಬೆಳ್ಳಂಬೆಳಿಗ್ಗೆ ದಾಳಿ ಮಾಡಿದ್ದು, ಮಹತ್ವದ ದಾಖಲೆಗಳ ಪರಿಶೀಲನೆ ಆರಂಭಿಸಿದ್ದಾರೆ. ಧಾರವಾಡದ ಕುಮಾರೇಶ್ವರ ಬಡಾವಣೆಯ ಮೂಕಾಂಬಿಕಾ ನಗರದಲ್ಲಿರುವ ಆರ್‌ಎಫ್‌ಓ ಮಹೇಶ ಹಿರೇಮಠ ಅವರ ಮನೆ ಮತ್ತು ಕಚೇರಿಯಲ್ಲಿ ಲೋಕಾಯುಕ್ತರು ಪರಿಶೀಲನೆ ಆರಂಭಿಸಿದ್ದಾರೆ. ಲೋಕಾಯುಕ್ತ ಎಸ್ಪಿ ಶಂಕರ ರಾಗಿ ನೇತೃತ್ವದಲ್ಲಿ ದಾಳಿ ನಡೆದಿದ್ದು, ದಾಖಲೆಗಳನ್ನು ಕ್ರೋಡಿಕರಿಸಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.   Share on: WhatsApp