ರಾಜ್ಯ

ಧಾರವಾಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರರಾಗಿ ಸ್ಪರ್ಧೆ

ಬೆಂಗಳೂರು ಪ್ರಜಾಕಿರಣ.ಕಾಮ್ : ಧಾರವಾಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಾಗಿ ಶಿರಹಟ್ಟಿಯ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಪ್ರಕಟಿಸಿದ್ದಾರೆ. ಅವರು ಬೆಂಗಳೂರಿನ ವೀರಶೈವ ಲಿಂಗಾಯತ ಭವನದಲ್ಲಿ ತಮ್ಮ ಬೆಂಬಲಿಗರು, ಹಿತೈಷಿಗಳ ಜೊತೆ ಸಭೆ ನಡೆಸಿದ ಬಳಿಕ ಈ ವಿಷಯ ಘೋಷಿಸಿದರು. ಧಾರವಾಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ತಾವು ಕಣಕ್ಕಿಳಿಯಲೇಬೇಕೆಂದು ಬೆಂಬಲಿಗರು ಒಕ್ಕೊರಲಿನಿಂದ ಒತ್ತಾಯಿಸಿದ ಪರಿಣಾಮ ಸ್ಪರ್ಧೆ ಮಾಡುವುದಾಗಿ ಸ್ವಾಮೀಜಿ ತಿಳಿಸಿದರು. “ನೊಂದ ಜನರು ನಮ್ಮ ಜೊತೆಗೆ ನೋವು ತೋಡಿಕೊಂಡಿದ್ದರಿಂದ ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ. ಕರ್ನಾಟಕದಲ್ಲಿ ಒಕ್ಕಲಿಗ, […]

ರಾಜ್ಯ

ಆದಿತ್ಯ ಮಿಲ್ಕ್ ಸಂಸ್ಥಾಪಕ ಶಿವಕಾಂತ ಸಿದ್ನಾಳ ಇನ್ನಿಲ್ಲ….!

ಬೆಳಗಾವಿ ಪ್ರಜಾಕಿರಣ.ಕಾಮ್  : ಜಿಲ್ಲೆಯ ಖ್ಯಾತ ಉದ್ಯಮಿ, ಆದಿತ್ಯ ಮಿಲ್ಕ್ ಸಂಸ್ಥಾಪಕ ಶಿವಕಾಂತ ಎಸ್. ಸಿದ್ನಾಳ (48) ಅವರು ಶನಿವಾರ ವಿಧಿವಶರಾದರು. ಅವರಿಗೆ ಪತ್ನಿ ದೀಪಾ ಸಿದ್ನಾಳ, ಓರ್ವ ಪುತ್ರ ಮತ್ತು ಪುತ್ರಿ ಸೇರಿದಂತೆ ಅಪಾರ ಬಂಧು-ಬಳಗವಿದೆ. ಮೂಲತಃ ಬೈಲಹೊಂಗಲ ತಾಲೂಕಿನ ಸಾಣಿಕೊಪ್ಪ ಗ್ರಾಮದ ಶಿವಕಾಂತ ಸಿದ್ನಾಳ ಅವರು ಆದಿತ್ಯ ಮಿಲ್ಕ್ ಉದ್ಯಮ ಆರಂಭಿಸುವ ಮೂಲಕ ಜಿಲ್ಲೆಯಲ್ಲಿ ಹೈನುಗಾರಿಕೆ ಕ್ಷೇತ್ರದಲ್ಲಿ ಕ್ರಾಂತಿಯನ್ನೇ ಮಾಡಿದ್ದರು. ವಿಆರ್‌ಎಲ್ ಸಂಮೂಹ ಸಂಸ್ಥೆಗಳ ಚೇರ್ಮನ್ ಡಾ.ವಿಜಯ ಸಂಕೇಶ್ವರ ಅವರ ಅಳಿಯರಾಗಿದ್ದ ಶಿವಕಾಂತ ಸಿದ್ನಾಳ […]

ರಾಜ್ಯ

ಯಮನೂರು ಚಾಂಗದೇವರ ಜಾತ್ರೆಯಲ್ಲಿ ನೀರಿಗಾಗಿ ಭಕ್ತರ ಪರದಾಟ….!?

*ಯಮನೂರು ಚಾಂಗದೇವ ಜಾತ್ರೆಯಲ್ಲಿ ಭಕ್ತರ ಪರದಾಟ* *ಶಾಸಕ ಎನ್. ಎಚ್.ಕೋನರಡ್ಡಿ ನಿರ್ಲಕ್ಷ್ಯ ಸರಿಯಲ್ಲ* *ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅಸಮಾಧಾನ* ಹುಬ್ಬಳ್ಳಿ ಪ್ರಜಾಕಿರಣ. ಕಾಮ್ : ಉತ್ತರ ಕರ್ನಾಟಕ ಭಾಗದ ಪ್ರಸಿದ್ಧ ಜಾತ್ರೆಗಳ ಪೈಕಿ ಒಂದಾಗಿರುವ ನವಲಗುಂದ ತಾಲ್ಲೂಕಿನ ಯಮನೂರು ಗ್ರಾಮದ ಚಾಂಗದೇವರ ಜಾತ್ರೆಯಲ್ಲಿ ಸಾವಿರಾರು ಭಕ್ತರು ಪವಿತ್ರ ಸ್ನಾನಕ್ಕೆ ಬೆಣ್ಣೆಹಳ್ಳದಲ್ಲಿ ನೀರಿಲ್ಲದೆ ಪರದಾಟ ನಡೆಸಿದ್ದಾರೆ. ಬೆಣ್ಣಿಹಳ್ಳದಲ್ಲಿ ನೀರಿಲ್ಲದ ಪರಿಣಾಮ ಇರುವ ಅಲ್ಪಸ್ವಲ್ಪ ನೀರಲ್ಲೇ ಚಾಂಗದೇವರ ಭಕ್ತಾದಿಗಳು ಸ್ನಾನ, ನೆಮ ಮುಗಿಸಿಕೊಳ್ಳುತ್ತಿದ್ದಾರೆ. ಪ್ರತಿ ವರ್ಷ ಹೋಳಿಹುಣ್ಣಿಮೆ […]

ರಾಜ್ಯ

ಧಾರವಾಡದ ಮನಸೂರಿನಲ್ಲಿ ಮತ್ತೆ ಮೂರು ಕರುಗಳ ಮೇಲೆ ಚಿರತೆ ದಾಳಿ…!

ಧಾರವಾಡ ಪ್ರಜಾಕಿರಣ.ಕಾಮ್ : ಧಾರವಾಡ ತಾಲೂಕಿನ  ಮನಸೂರ ಗ್ರಾಮದಲ್ಲಿ ಕಳೆದೊಂದು ವಾರದಿಂದ ಬೀಡು ಬಿಟ್ಟಿರುವ ಚಿರತೆ ಇದೀಗ ಮತ್ತೊಮ್ಮೆ ಮೂರು ಕರುಗಳ ಮೇಲೆ ದಾಳಿ ಮಾಡಿದೆ. ಇದರಿಂದಾಗಿ ಮೂರು ಕರುಗಳು ಚಿರತೆಯ ರಕ್ತದಾಹಕ್ಕೆ ಬಲಿಯಾದಂತಾಗಿವೆ. ಇದರಿಂದಾಗಿ ರೈತ ಸಮುದಾಯ ಮತ್ತಷ್ಟು ಆತಂಕಕ್ಕೆ ಸಿಲುಕಿದೆ. ಧಾರವಾಡ ತಾಲೂಕಿನ ಮನಸೂರ ಗ್ರಾಮದ ಬಳಿಯ ಜೋಶಿ ಫಾರ್ಮ್ ಹೌಸ್ ನಲ್ಲಿ ಕಟ್ಟಿದ್ದ ಆಕಳ‌ ಕರುಗಳ ಮೇಲೆ ನಿನ್ನೆ ತಡರಾತ್ರಿ ಚಿರತೆ ಈ ದಾಳಿ ನಡೆಸಿದೆ. ಕಳೆದ‌ ವಾರ‌ ಇದೇ ಗ್ರಾಮದಲ್ಲಿ ಕುಬೇರಪ್ಪ […]

ರಾಜ್ಯ

ಗೂಂಡಾ ಮುಕ್ತ ಧಾರವಾಡ ಮಾಡಿ : ಬಸವರಾಜ‌ ಕೊರವರ

ಧಾರವಾಡ ಪ್ರಜಾಕಿರಣ.ಕಾಮ್  : ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ಹಾಗೂ ಗೂಂಡಾ ಕಾಯ್ದೆಯಡಿ ರೌಡಿಶೀಟರ್ ಗಡಿಪಾರು ಮಾಡಲು ಒತ್ತಾಯಿಸಿ ನೂರಾರು ಆಟೋ ಚಾಲಕರು ಧಾರವಾಡದ ಜನಜಾಗೃತಿ ಸಂಘ ಅಧ್ಯಕ್ಷರಾದ ಬಸವರಾಜ ಕೊರವರ ಹಾಗೂ ನಾಗರಾಜ ಕಿರಣಗಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ, ಮುಖ್ಯಮಂತ್ರಿ ಹಾಗೂ ಗೃಹಸಚಿವರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಸವರಾಜ ಕೊರವರ, ವಿದ್ಯಾನಗರಿ ಧಾರವಾಡದಲ್ಲಿ ಪುಂಢರು ಹಾವಳಿ ವಿಪರೀತ ಹೆಚ್ಚಿದೆ. ಹಲವರಂತೂ ಗ್ಯಾಂಗ್ ಕಟ್ಟಿಕೊಂಡು ರಾಜಾರೋಷವಾಗಿ ಅಂಧಾ ದರ್ಬಾರ್ ನಡೆಸುತ್ತಿದ್ದಾರೆ. […]

ರಾಜ್ಯ

ಧಾರವಾಡದ ಆರ್‌ಎಫ್‌ಓ ಮಹೇಶ ಹಿರೇಮಠ ಮನೆ, ಕಚೇರಿ ಮೇಲೆ ಲೋಕಾ ದಾಳಿ

ಧಾರವಾಡ ಪ್ರಜಾಕಿರಣ.ಕಾಮ್ : ಧಾರವಾಡ ಅರಣ್ಯ ಇಲಾಖೆಯ ವಿಭಾಗೀಯ ಅರಣ್ಯ ಅಧಿಕಾರಿಯ ಮಹೇಶ ಹಿರೇಮಠ ಅವರ ಮನೆ ಮೇಲೆ ಲೋಕಾಯುಕ್ತರು ಬುಧವಾರ ಬೆಳ್ಳಂಬೆಳಿಗ್ಗೆ ದಾಳಿ ಮಾಡಿದ್ದು, ಮಹತ್ವದ ದಾಖಲೆಗಳ ಪರಿಶೀಲನೆ ಆರಂಭಿಸಿದ್ದಾರೆ. ಧಾರವಾಡದ ಕುಮಾರೇಶ್ವರ ಬಡಾವಣೆಯ ಮೂಕಾಂಬಿಕಾ ನಗರದಲ್ಲಿರುವ ಆರ್‌ಎಫ್‌ಓ ಮಹೇಶ ಹಿರೇಮಠ ಅವರ ಮನೆ ಮತ್ತು ಕಚೇರಿಯಲ್ಲಿ ಲೋಕಾಯುಕ್ತರು ಪರಿಶೀಲನೆ ಆರಂಭಿಸಿದ್ದಾರೆ. ಲೋಕಾಯುಕ್ತ ಎಸ್ಪಿ ಶಂಕರ ರಾಗಿ ನೇತೃತ್ವದಲ್ಲಿ ದಾಳಿ ನಡೆದಿದ್ದು, ದಾಖಲೆಗಳನ್ನು ಕ್ರೋಡಿಕರಿಸಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.   Share on: WhatsApp

ರಾಜ್ಯ

ನಾಡಿನ ಹಿರಿಯ ಸಾಹಿತಿ ಡಾ. ಗುರುಲಿಂಗ ಕಾಪಸೆ ಇನ್ನು ನೆನಪು ಮಾತ್ರ…!

ನಾಡಿನ ಹಿರಿಯ ಸಾಹಿತಿ ಡಾ. ಗುರುಲಿಂಗ ಕಾಪಸೆ ಇನ್ನು ನೆನಪು ಮಾತ್ರ…! ಧಾರವಾಡ ಪ್ರಜಾಕಿರಣ.ಕಾಮ್ : ನಾಡಿನ ಹಿರಿಯ ಸಾಹಿತಿಗಳಾಗಿದ್ದ ಡಾ. ಗುರುಲಿಂಗ ಕಾಪಸೆ ಅವರು ತಮ್ಮ 96 ನೇ ವಯಸ್ಸಿನಲ್ಲಿ ಬುಧವಾರ ಬೆಳಗ್ಗೆ ನಿಧನ ಹೊಂದಿದರು. ಅವರ ಅಂತಿಮ ದರ್ಶನವನ್ನು ಧಾರವಾಡದ ಸಪ್ತಾಪೂರ ಬಳಿಯ ದುರ್ಗಾ ಕಾಲೋನಿ ಯಲ್ಲಿರುವ ಅವರ ನಿವಾಸದಲ್ಲಿ ಮಧ್ಯಾಹ್ನ 2 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ. ನಂತರ ಅವರ ದೇಹವನ್ನು ಬೈಲಹೊಂಗಲನ ಡಾ. ಮಹಾಂತೇಶ ರಾಮಣ್ಣವರ ಆಸ್ಪತ್ರೆಗೆ ನೀಡಲಾಗುವುದು. ಗುರುಲಿಂಗ ಕಾಪಸೆ ಗುರುಗಳು […]

ರಾಜ್ಯ

ಯುಪಿಎ ಅವಧಿಯಲ್ಲಿ ಬಂದ ಎನ್ ಡಿಆರ್ ಎಫ್ ಹಣ ಸರ್ಕಾರ ಬಹಿರಂಗಪಡಿಸಲಿ

*ಯುಪಿಎ, ಎನ್ ಡಿಎ ಅವಧಿಯಲ್ಲಿ ಎಷ್ಟು ಎನ್ ಡಿಆರ್ ಎಫ್ ಹಣ ಬಂದಿದೆ, ಸರ್ಕಾರ ಬಹಿರಂಗಪಡಿಸಲಿ: ಬಸವರಾಜ ಬೊಮ್ಮಾಯಿ ಸವಾಲು* *ಮತದಾನದ ಮೂಲಕ ಜನರೇ ಕಾಂಗ್ರೆಸ್ ನವರ ಕಪಾಳಕ್ಕೆ ಹೊಡೆಯುತ್ತಾರೆ: ಬಸವರಾಜ ಬೊಮ್ಮಾಯಿ* ಹುಬ್ಬಳ್ಳಿ ಪ್ರಜಾಕಿರಣ.ಕಾಮ್ : ರಾಜ್ಯಕ್ಕೆ ಕೇಂದ್ರದಿಂದ ಯುಪಿಎ ಕಾಲದಲ್ಲಿ ಎಷ್ಟು ಹಾಗೂ ಎನ್ ಡಿಎ ಕಾಲದಲ್ಲಿ ಎಷ್ಟು ಎನ್ ಡಿಆರ್ ಎಫ್ ಹಣ ಬಂದಿದೆ ಅನ್ನುವುದನ್ನು ರಾಜ್ಯ ಸರ್ಕಾರ ಬಹಿರಂಗ ಪಡಿಸಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸವಾಲ್ ಹಾಕಿದ್ದಾರೆ. ಹುಬ್ಬಳ್ಳಿಯಲ್ಲಿ […]

ರಾಜ್ಯ

ಕರ್ನಾಟಕದ ಉದ್ದಗಲಕ್ಕೂ ಮೋದಿ ಗಾಳಿ : ಬೊಮ್ಮಾಯಿ

*ಸ್ಟಾರ್ ಪ್ರಚಾರಕರ ಬಗ್ಗೆ ಪಕ್ಷ ತೀರ್ಮಾನ ಮಾಡಲಿದೆ: ಬಸವರಾಜ ಬೊಮ್ಮಾಯಿ* *ಕರ್ನಾಟಕದ ಉದ್ದಗಲಕ್ಕೂ ಮೋದಿ ಗಾಳಿ ಇದೆ: ಬಸವರಾಜ ಬೊಮ್ಮಾಯಿ* ಹಾವೇರಿ ಪ್ರಜಾಕಿರಣ.ಕಾಮ್ : ಚುನಾವಣಾ ಪ್ರಚಾರಕ್ಕೆ ಬರುವ ಸ್ಟಾರ್ ಪ್ರಚಾರಕರ ಜೊತೆ ಮಾತುಕತೆ ನಡೆಯುತ್ತಿದೆ. ಸ್ಟಾರ್ ಪ್ರಚಾರಕರ ಕುರಿತು ಪಕ್ಷ ತೀರ್ಮಾನ ಮಾಡಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಪ್ರಚಾರ ಸಂದರ್ಭದಲ್ಲಿ ಹಾನಗಲ್ ತಾಲೂಕು ಮಾಸಣಕಟ್ಟಿ ಗ್ರಾಮದಲ್ಲಿ ಮಾಧ್ಯಮಗಳಿಗೆ ಮಾತನಾಡಿದರು. ನಮಗೆ ಜನರಿಂದ ಅದ್ಭುತವಾದ ಪ್ರತಿಕ್ರಿಯೆ ಸಿಗುತ್ತಿದೆ. ಜನ […]

ರಾಜ್ಯ

ಧಾರವಾಡದ ಉಪನಗರ ಠಾಣೆ ಎದುರು ಮಧ್ಯರಾತ್ರಿ ದಿಢೀರ್ ಪ್ರತಿಭಟನೆ

*ಧಾರವಾಡದ ಉಪನಗರ ಪೊಲೀಸ್ ಠಾಣೆ ಎದುರು ಮಧ್ಯರಾತ್ರಿ ಆಟೋ ಚಾಲಕರ ದಿಢೀರ್ ಪ್ರತಿಭಟನೆ* *ಮಾರಣಾಂತಿಕ ಹಲ್ಲೆ ಮಾಡಿದ ಆರೋಪಿಗಳಿಗೆ ಸ್ಟೇಶನ್ ಬೇಲ್ ನೀಡಿದ ಪೊಲೀಸರ ಕ್ರಮಕ್ಕೆ ವ್ಯಾಪಕ ಖಂಡನೆ* *ಆಟೋ ಚಾಲಕರ ಹೋರಾಟಕ್ಕೆ ಜನಜಾಗೃತಿ ಸಂಘದ ಅಧ್ಯಕ್ಷ ಬಸವರಾಜ ಕೊರವರ ಸಾಥ್* *ಪೊಲೀಸರ ಮನವೊಲಿಕೆ ಬಳಿಕ ತಾತ್ಕಾಲಿಕವಾಗಿ ಪ್ರತಿಭಟನೆ ಹಿಂದಕ್ಕೆ* *ಮಾ.27ರಂದು ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನೆಗೆ ನಿರ್ಧಾರ* ಧಾರವಾಡ ಪ್ರಜಾಕಿರಣ.ಕಾಮ್ : ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯ ಇಬ್ಬರು ರೌಡಿಶೀಟರ್ ಗಳಾದ ನವೀನ್ […]