ಧಾರವಾಡ prajakiran.com : ವಿದ್ಯಾನಗರಿ ಧಾರವಾಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಸಾವಿನ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿರುವುದು ಜಿಲ್ಲೆಯ ಜನತೆಗೆ ಆತಂಕ ಮೂಡಿಸಿದೆ.
ಅದರಲ್ಲೂ ಹುಬ್ಬಳ್ಳಿಯ ವಿದ್ಯಾನಗರ ಪೊಲೀಸ್ ಠಾಣೆಯ ಎ ಎಸ್ ಐ ಒಬ್ಬರು ಸೇರಿದಂತೆ ಬುಧವಾರ ಒಂದೇ ದಿನ 5 ಜನ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವುದು ಜಿಲ್ಲೆಯ ಜನತೆಯನ್ನು ಬೆಚ್ಚಿ ಬೀಳಿಸಿದೆ.
ಆ ಮೂಲಕ ಧಾರವಾಡ ಜಿಲ್ಲೆಯಲ್ಲಿ ಈವರೆಗೆ ಕಿಲ್ಲರ್ ಕರೋನಾಕ್ಕೆ ಬಲಿಯಾದವರ ಸಂಖ್ಯೆ 44ಕ್ಕೆ ಏರಿಕೆಯಾದಂತಾಗಿದೆ.
ಧಾರವಾಡ ಜಿಲ್ಲೆಯಲ್ಲಿ ಬುಧವಾರ ಮತ್ತೇ ಹೊಸದಾಗಿ 138 ಜನರಿಗೆ ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಆ ಮೂಲಕ ಜಿಲ್ಲೆಯ ಒಟ್ಟು ಪ್ರಕರಣಗಳ ಸಂಖ್ಯೆ 1397 ಕ್ಕೆ ಏರಿದೆ.
ಈ ಪೈಕಿ ಇದುವರೆಗೆ 499 ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 854 ಪ್ರಕರಣಗಳು ಸಕ್ರಿಯವಾಗಿವೆ.
ಅಲ್ಲದೆ, ಈವರೆಗೆ ಜಿಲ್ಲೆಯ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಇನ್ನೂ 41 ಜನ ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ.
ಬುಧವಾರ ಕರೋನಾದಿಂದ ಮರಣ ಹೊಂದಿದವರ ವಿವರ :
ಪಿ- 25498 ( 52 F)- ಹುಬ್ಬಳ್ಳಿಯ ಮಿಲ್ಲತ್ ನಗರ ನಿವಾಸಿ
ಪಿ-25539 ( 48 M) ಸವದತ್ತಿ ತಾಲ್ಲೂಕಿನ ಮುನವಳ್ಳಿಯವರು
ಪಿ-45201 ( 60 M) ಹುಬ್ಬಳ್ಳಿಯ ಆನಂದನಗರ ನಿವಾಸಿ
ಪಿ-45244 ( 58 F)ಹಾನಗಲ್ ತಾಲೂಕು ಕಾಡಶೆಟ್ಟಿಹಳ್ಳಿ ನಿವಾಸಿ
ಪಿ- 45261 ( 51 M) ಹುಬ್ಬಳ್ಳಿ ಹೂಗಾರ ಓಣಿಯವರು
ಈ ಐವರೂ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು ಎಂದು ಧಾರವಾಡ ಜಿಲ್ಲಾಡಳಿತ ತಿಳಿಸಿದೆ.