ಧಾರವಾಡ prajakiran.com :
ಕೊಳವೆ ಬಾವಿಗೆ ವಿದ್ಯುತ್ ಪೂರೈಕೆ ಮಾಡಲು ಹೋಗಿ ರೈತನೊಬ್ಬ ದಾರುಣವಾಗಿ ಸಾವನ್ನಪ್ಪಿದ ಘಟನೆ ಧಾರವಾಡ ತಾಲೂಕಿನ ನಿಗದಿ ಗ್ರಾಮದಲ್ಲಿ ನಡೆದಿದೆ.
ಶನಿವಾರ ಸಂಜೆ ಹೊಲದಲ್ಲಿ ನೀರು ಹಾಸಲು ಬೋರವೆಲ್ ಗೆ ಫ್ಯೂಸ್ ಹಾಕುವಾಗ ವಿದ್ಯುತ್ ಶಾಕ್ ನಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಬೋರವಲ್ ಡಬ್ಬಿಯಿಂದ ಶಾಕ್ ಹೊಡೆದ ಹಿನ್ನೆಲೆಯಲ್ಲಿ ಈ ರ್ದುಘಟನೆ ಸಂಭವಿಸಿದೆ.
ಸಾವನ್ನಪ್ಪಿದ ರೈತನನ್ನು ಆನಂದ ಮೇಟ್ಯಾಳ (೪೦) ಎಂದು ಗುರುತಿಸಲಾಗಿದೆ.
ಈ ಕುರಿತು ಧಾರವಾಡ
ಗ್ರಾಮಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಮುಂದುವರೆದಿದೆ.