ಕಾರವಾರ prajakiran.com :
ಕೇಂದ್ರ ಆಯುಷ್ ಇಲಾಖೆ ಸಚಿವ ಶ್ರೀಪಾದ್ ನಾಯಕ್ ಅವರ ಕಾರು ಪಲ್ಟಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹೊಸಕಂಬಿ ಗ್ರಾಮದ ಬಳಿ ನಡೆದಿದೆ.
ಈ ಅಪಘಾತದಲ್ಲಿ ಸಚಿವರ ಪತ್ನಿ ಹಾಗೂ ಆಪ್ತ ಕಾರ್ಯದರ್ಶಿ ಮೃತರಾಗಿದ್ದಾರೆ. ಅಲ್ಲದೆ, ಸಚಿವರು ಕೂಡ ಗಂಭೀರವಾಗಿ ಗಾಯಗೊಂಡಿದ್ದಾರೆ.
ಅವರು ಗೋವಾದಿಂದ ಯಲ್ಲಾಪುರಕ್ಕೆ ಪತ್ನಿಯೊಂದಿಗೆ ಬಂದಿದ್ದರು.
ಚಾಲಕ ಸೇರಿ ನಾಲ್ಕು ಜನ ರಾತ್ರಿ ವೇಳೆ ಗೋಕರ್ಣಕ್ಕೆ ತೆರಳುತಿದ್ದರು.
ಈ ವೇಳೆ ಗಾಡಿ ಪಲ್ಟಿಯಾಗಿದ್ದು, ಸಚಿವ ಶ್ರೀಪಾದ್ ನಾಯಕ್ ಅವರು ಗಂಭೀರ ಗಾಯಗೊಂಡಿದ್ದರೆ, ಪತ್ನಿ ವಿಜಯಾ ಅವರು ಹಾಗೂ ಸಚಿವರ ಆಪ್ತ ಕಾರ್ಯದರ್ಶಿ ದೀಪಕ ರಾಮದಾದ ಗೂಮೆ ಸಾವನ್ನಪ್ಪಿದ್ದಾರೆ.
ತಕ್ಷಣ ಮಾಹಿತಿಯನ್ನು ಅರಿತ ಉತ್ತರ ಕನ್ನಡ ಪೊಲೀಸರು ಘಟನಾ ಸ್ಥಳಕ್ಕೆಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಕುರಿತು ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.