ಧಾರವಾಡ prajakiran.com : ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ನವಲೂರ ಮೇಲಸೇತುವೆ ದುರಸ್ತಿ ಕಾಮಗಾರಿ ಸ್ಥಳಕ್ಜೆ ಅನಿರೀಕ್ಷಿತ ಭೇಟಿ ನೀಡಿ, ಪ್ರಗತಿ ಪರಿಶೀಲನೆ ಮಾಡಿದರು.
ಕಾಮಗಾರಿ ಗುಣಮಟ್ಟದಿಂದ ಆಗಬೇಕು. ಮಳೆಗಾಲ ಆರಂಭವಾಗುವ ಮೊದಲು ದುರಸ್ತಿ ಕಾಮಗಾರಿ ಪೂರ್ಣಗೊಳಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳು ಕಾಲ್ನಡಿಗೆಯಲ್ಲಿ ನವಲೂರ ಮೇಲಸೇತುವೆ ಉದ್ದಕ್ಕೂ ಸಂಚರಿಸಿ, ಕಾರ್ಮಿಕರು ಮಾಡುತ್ತಿರುವ ದುರಸ್ತಿ ಕಾರ್ಯವನ್ನು ವೀಕ್ಷಿಸಿದರು.
ಜಿಲ್ಲಾಧಿಕಾರಿಗಳೊಂದಿಗೆ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಕಾರ್ಯಪಾಲಕ ಅಭಿಯಂತರ ಎನ್.ಕೆ.ಕುರಂದಕರ ಹಾಗೂ ಅಧಿಕಾರಿಗಳು, ಗುತ್ತಿಗೆದಾರರು ಉಪಸ್ಥಿತರಿದ್ದು, ಮಾಹಿತಿ ನೀಡಿದರು.