ರಾಜ್ಯ

ರಾಜ್ಯದಲ್ಲಿ ಭಾನುವಾರ ಸೋಂಕಿಗೆ ಬರೋಬ್ಬರಿ 107 ಸಾವು, 5985 ಪ್ರಕರಣ ಪತ್ತೆ

ಬೆಂಗಳೂರು prajakiran.com : ರಾಜ್ಯದಲ್ಲಿ ಭಾನುವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ107 ಜನ ಸಾವನ್ನಪ್ಪಿದ್ದಾರೆ.

ಮತ್ತೆ ಹೊಸದಾಗಿ 5985 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ  1,78,087ಕ್ಕೆ ಏರಿಕೆಯಾಗಿದೆ.

 ಇಂದು ರಾಜ್ಯದಲ್ಲಿ 4670 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು  93,908 ಜನ ಗುಣಮುಖರಾಗಿದ್ದು,  80,973 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 678 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ  ಭಾನುವಾರವೂ 107 ಜನ ಮೃತಪಟ್ಟಿದ್ದು, ಈವರೆಗೆ ಸಾವನ್ನಪ್ಪಿದ್ದವರ ಸಂಖ್ಯೆ 3198 ಕ್ಕೆ ಏರಿಕೆಯಾದಂತಾಗಿದೆ.

ಭಾನುವಾರ ಪತ್ತೆಯಾದ ಪ್ರಕರಣಗಳಲ್ಲಿ ರಾಜ್ಯದ ರಾಜಧಾನಿ ಬೆಂಗಳೂರು ನಗರ ದಲ್ಲಿಯೇ ಅತಿ ಹೆಚ್ಚು ಸೋಂಕಿತರು ಕಂಡು ಬಂದಿದ್ದಾರೆ.

ಬೆಂಗಳೂರಿನಲ್ಲಿ 1948 ಬರೋಬ್ಬರಿ ಜನ ಸೋಂಕಿತರು ಕಂಡು ಬಂದಿರುವುದು ಬೆಂಗಳೂರಿಗರನ್ನು ಮತ್ತೆ ಬೆಚ್ಚಿಬೀಳಿಸುವಂತೆ ಮಾಡಿದೆ.

ಇನ್ನೂಳಿದಂತೆ   ಮೈಸೂರು 455, ಬಳ್ಳಾರಿ 380, ಉಡುಪಿ 282, ಬೆಳಗಾವಿ 235, ರಾಯಚೂರು 202, ಧಾರವಾಡ 196, ಕಲಬುರಗಿ 194, ಹಾಸನ 168, ದಾವಣಗೆರೆ 158, ಬಾಗಲಕೋಟೆ ಹಾಗೂ ಶಿವಮೊಗ್ಗ 149, ದಕ್ಷಿಣ ಕನ್ನಡ 132, ವಿಜಯಪುರ 129, ಗದಗ 114, ಚಿಕ್ಕಮಗಳೂರು 113, ಕೊಪ್ಪಳ 106, ಚಿತ್ರದುರ್ಗ 98, ಬೆಂಗಳೂರು ಗ್ರಾಮಾಂತರ 95, ಯಾದಗಿರಿ 91, ಕೋಲಾರ 87, ಹಾವೇರಿ 80, ತುಮಕೂರು 78, ಬೀದರ 70, ಮಂಡ್ಯ 63, ಉತ್ತರಕನ್ನಡ 59, ಚಿಕ್ಕಬಳ್ಳಾಪುರ ಹಾಗೂ ಚಾಮರಾಜನಗರ 47, ರಾಮನಗರ 38, ಕೊಡಗು 22 ಹೀಗೆ ಒಟ್ಟು 30 ಜಿಲ್ಲೆಗಳಲ್ಲಿ ಕರೋನಾ ವೈರಸ್ ತನ್ನ ಅಟ್ಟಹಾಸ ಮೆರೆದಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಸಾವಿನ ರಣಕೇಕೆ ರಾಜ್ಯದಲ್ಲಿ ಭಾನುವಾರವೂ ಮುಂದುವರೆದಿದ್ದು, ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಬರೋಬ್ಬರಿ 22 ಜನ ಸಾವನ್ನಪ್ಪಿದ್ದಾರೆ.

ಮೈಸೂರು 12, ದಾವಣಗೆರೆ 9, ಕೋಲಾರ 8, ಹಾಸನ 7, ಧಾರವಾಡ ಹಾಗೂ ದಕ್ಷಿಣ ಕನ್ನಡ ತಲಾ 6,  ತುಮಕೂರು, ಬೀದರ ಹಾಗೂ ಕಲಬುರ್ಗಿ ತಲಾ 4, ಚಾಮರಾಜನಗರ, ಚಿತ್ರದುರ್ಗ, ಕೊಪ್ಪಳ, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ರಾಯಚೂರು ತಲಾ 2, ಗದಗ, ಯಾದಗಿರಿ, ಹಾವೇರಿ ಹಾಗೂ ಮಂಡ್ಯದಲ್ಲಿ ತಲಾ ಒಬ್ಬರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. 

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *