ರಾಜ್ಯ

ರಾಜ್ಯದ 11 ಜಿಲ್ಲೆಯಲ್ಲಿ ಲಾಕ್ ಡೌನ್ ಮುಂದುವರಿಕೆ : ಕಿರಾಣಿ ವ್ಯಾಪಾರ ಅವಧಿ ಮಧ್ಯಾಹ್ನ 2 ಗಂಟೆಯವರೆಗೆ ವಿಸ್ತಾರ

ಸಿಎಂ ಯಡಿಯೂರಪ್ಪ ಘೋಷಣೆ

ಬೆಂಗಳೂರು prajakiran.com : ಕರೋನಾ ಹೆಚ್ಚಿರುವ ರಾಜ್ಯದ 11 ಜಿಲ್ಲೆಯಲ್ಲಿ ಲಾಕ್ ಡೌನ್ ಮುಂದುವರೆಸಲಾಗಿದೆ ಎಂದು
ಸಿಎಂ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.

ಅವರು ಗುರುವಾರ ರಾತ್ರಿ ಮಹತ್ವದ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಈ ಕುರಿತು ವಿವರ ನೀಡಿದರು.

ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಚಾಮರಾಜನಗರ, ದಾವಣಗೆರೆ, ಹಾಸನ, ಮಂಡ್ಯ, ಕೊಡಗು, ಬೆಂಗಳೂರು ಗ್ರಾಮಾಂತರ, ಬೆಳಗಾವಿ,ದಕ್ಷಿಣ ಕನ್ಬಡ ಜಿಲ್ಲೆಯ ಮಾರ್ಗಸೂಚಿಗಳಲ್ಲಿ ಯಾವುದೇ ಬದಲಾವಣೆ ಇಲ್ಲ. ಇವು ಸಂಪೂರ್ಣ ಲಾಕ್ ಡೌನ್ ಆಗಿರಲಿವೆ.

ಕೋವಿಡ್ ರಾತ್ರಿ ಕಫ್ಯೂ ಮತ್ತು
ಶುಕ್ರವಾರ ಸಂಜೆಯಿಂದ ಸೋಮವಾರ ಬೆಳಗ್ಗೆ ವರೆಗೆ ವಾರ್ರ್ಯಂತ್ಯ ಕರ್ಫ್ಯೂ ಜಾರಿಗೊಳಿಸಲಾಗುವುದು.
ಆಯಾ ಜಿಲ್ಲೆಯ ಜಿಲ್ಲಾಧಿಕಾರಿ ಜೊತೆಗೆ ಸಮಾಲೋಚನೆ ನಡೆಸಿ ಅವರಿಗೆ ಅಗತ್ಯ ಕ್ರಮವನ್ನು ತೆಗೆದುಕೊಳ್ಳುವ
ಅಧಿಕಾರ ನೀಡಲಾಗಿದೆ ಎಂದು ಹೇಳಿದರು.

ಎಲ್ಲಾ ಜೂನ್ 14ರಿಂದ
21ರವರೆಗೆ ಎಲ್ಲಾ ಕಾರ್ಖಾನೆಗಳು ಶೇ. 50 ರಷ್ಟು ಸಿಬ್ಬಂದಿಗೆ ಕೆಲಸ ನಿರ್ವಹಣೆ ಮಾಡಲು ಅನುಮತಿ, ಶೇ.30 ರಷ್ಟು ಸಿಬ್ಬಂದಿಯೊಂದಿಗೆ ಗಾರ್ಮೆಂಟ್ಸ್ ಫ್ಯಾಕ್ಟರಿ ಕೆಲಸ ಮಾಡಲು ಅವಕಾಶ ನೀಡಲಾಗಿದೆ.

ಅಗತ್ಯ ವಸ್ತುಗಳ (ಕಿರಾಣಿ) ಮಾರಾಟಕ್ಕೆ
ಮಧ್ಯಾಹ್ನ 2 ಗಂಟೆಯವರೆಗೆ ಸಮಯ ವಿಸ್ತರಿಸಲಾಗಿದೆ.

ಅಲ್ಲದೆ, ಕಟ್ಟಡ ನಿರ್ಮಾಣ ಕಾರ್ಯ ಕ್ಕೆ ಅನುಮತಿ ನೀಡಿದ್ದು, ಸ್ಟೀಲ್, ಸಿಮೆಂಟ್ ಅಂಗಡಿ ತೆಗೆಯಲು ಅವಕಾಶ ನೀಡಲಾಗಿದೆ.

ಜೊತೆಗೆ ಹಿರಿಯರು ಪಾರ್ಕ್ ನಲ್ಲಿ ವಾಕ್ ಅವಕಾಶ ಕಲ್ಪಿಸಲಾಗಿದೆ.

ಬೀದಿಬದಿ ವ್ಯಾಪಾರ ಮಾಡಲು ಅವರಿಗೆ ಮಧ್ಯಾಹ್ನ 2 ಗಂಟೆಯ ವರೆಗೆ ಅವಕಾಶ ನೀಡಲಾಗಿದೆ.

ಆದರೆ, ಆಟೋ ಟ್ಯಾಕ್ಸಿ ಇಬ್ಬರು ಪ್ರಯಾಣಿಕರೊಂದಿಗೆ ಸಂಚರಿಸಬಹುದು.

ಶುಕ್ರವಾರ ಸಂಜೆ 7 ಯಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ
ವಾರಾಂತ್ಯ ಕರ್ಫ್ಯೂ ಹಾಗೂ ಪ್ರತಿ ದಿನ ರಾತ್ರಿ ಕರ್ಫ್ಯೂ 7 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಜಾರಿ ಯಲ್ಲಿರುತ್ತದೆ.

ಸರಕಾರಿ ಇಲಾಖೆಯ ಕಚೇರಿಯು ಶೇಕಡಾ 50 ರಷ್ಟು ಕೆಲಸ ಅಂತರ್ ಜಿಲ್ಲೆಯ ಓಡಾಟ ಅವಕಾಶ ಇದೆ.

ಕೆ ಎಸ್ ಆರ್ ಟಿಸಿ ಹಾಗೂ ಬಿ ಎಂಟಿಸಿಗೆ ಸಾರ್ವಜನಿಕ ಸಾರಿಗೆ ಬಳಕೆಗೆ ಸಿಎಂ ಬಿ ಎಸ್ ವೈ ಅವಕಾಶ ನಿರಾಕರಿಸಿದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *