ರಾಜ್ಯ

ಧಾರವಾಡದ ಪಶ್ಚಿಮ ವಿಧಾನ ಸಭಾ ಕ್ಷೇತ್ರದಲ್ಲಿ 11 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧ

ಧಾರವಾಡ prajakiran.com : ಧಾರವಾಡದ ಪಶ್ಚಿಮ ವಿಧಾನ ಸಭಾ ಕ್ಷೇತ್ರದಲ್ಲಿ 11 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ದವಾಗಿದೆ ಎಂದು ಚುನಾವಣಾಧಿಕಾರಿಗಳು ಘೋಷಣೆ ಮಾಡಿದ್ದಾರೆ.

ಕ್ರಮಬದ್ದ ನಾಮಪತ್ರಗಳ ವಿವರ ಹೀಗಿದೆ : 

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಆರ್. ಎಂ.ಕುಬೇರಪ್ಪ, ಜನತಾದಳ ( ಜಾತ್ಯಾತೀತ) ಶಿವಶಂಕರ ಚನ್ನಪ್ಪ ಕಲ್ಲೂರ, ಭಾರತೀಯ ಜನತಾ ಪಕ್ಷದ ಸಿದ್ದಲಿಂಗಪ್ಪ ವಿ.ಸಂಕನೂರ, ಕರ್ನಾಟಕ ರಾಷ್ಟ್ರ ಸಮಿತಿಯ ಶಿವರಾಜ ಕೆಂಚಪ್ಪ ಕಾಂಬಳೆ,

ಶಿವಸೇನಾ ಪಕ್ಷದ ಸೋಮಶೇಖರ ವಿರೂಪಾಕ್ಷ ಉಮರಾಣಿ, ಪಕ್ಷೇತರ ಅಭ್ಯರ್ಥಿಗಳಾದ ದಶರಥ ಚಂದ್ರಹಾಸ ರಂಗರೆಡ್ಡಿ, ಬಸನಗೌಡ ದ್ಯಾಮನಗೌಡ ಹಿರೇಗೌಡ್ರ,ಬಸವರಾಜ ಹೆಚ್.ಗುರಿಕಾರ,

ಬಸವರಾಜ ಎಸ್.ತೇರದಾಳ,ಮಹ್ಮದ ಶಫೀವುದ್ದೀನ್ ಎಸ್ ನಾಗರಕಟ್ಟಿ ಹಾಗೂ ಶಿವಕುಮಾರ ಮಹಾದೇವಪ್ಪ ತಳವಾರ ಹನ್ನೊಂದು ಜನ ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿವೆ ಎಂದು ಚುನಾವಣಾಧಿಕಾರಿಗಳಾಗಿರುವ ಪ್ರಾದೇಶಿಕ ಆಯುಕ್ತ ಅಮ್ಲಾನ್ ಆದಿತ್ಯ ಬಿಸ್ವಾಸ್ ತಿಳಿಸಿದ್ದಾರೆ.

 ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ ಮತ್ತಿತರ ಅಧಿಕಾರಿಗಳು ,ಸಿಬ್ಬಂದಿ ಉಪಸ್ಥಿತರಿದ್ದರು.

 ಸೋಮವಾರದವರೆಗೆ ನಾಮಪತ್ರ ಹಿಂಪಡೆಯಲು ಅವಕಾಶ

 ಎರಡನೇ ಶನಿವಾರವೂ ಚುನಾವಣಾಧಿಕಾರಿಗಳ ಕಚೇರಿ ಕಾರ್ಯನಿರ್ವಹಿಸಲಿದ್ದು ದಿನವೂ ಸಹ ನಾಮಪತ್ರಗಳನ್ನು ಹಿಂತೆಗೆದುಕೊಳ್ಳಬಹುದು.

ಸೋಮವಾರ .12  ಮಧ್ಯಾಹ್ನ‌ 3 ಗಂಟೆಯವರೆಗೆ ನಾಮಪತ್ರ ವಾಪಸು ಪಡೆಯಲು ಕೊನೆಯ ದಿನವಾಗಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *