ಧಾರವಾಡ prajakiran.com : ಧಾರವಾಡದ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯ ಎಕ್ಸಿಕ್ಯೂಟಿವ್ ಇಂಜಿನಿಯರ್ ಮನೋಹರ ಮಂಡೋಳಿಕರ್ ಮನೆಯಲ್ಲಿ 13ಲಕ್ಷ ನಗದು ಅಕ್ರಮ ಹಣ ಎಸಿಬಿ ದಾಳಿ ವೇಳೆ ಪತ್ತೆಯಾಗಿದೆ.
ನಿನ್ನೆ ಧಾರವಾಡದಲ್ಲಿ ಮಂಗಳವಾರ ನಡೆದ ಎಸಿಬಿ ದಾಳಿಯ ವೇಳೆ ನಾಲ್ಕನೇ ದರ್ಜೆ ಗುತ್ತಿಗೆದಾರರ ಲೈಸನ್ಸ್ ಮಾಡಿಕೊಡಲು ಲಂಚದ ಬೇಡಿಕೆಯಿಟ್ಟಿದ್ದರು.
ಧಾರವಾಡದ ಎಸಿಬಿ ಡಿವೈಎಸ್ಪಿ ವೇಣುಗೋಪಾಲ ಅವರ ನೇತೃತ್ವದಲ್ಲಿ ನಡೆದ ದಾಳಿ ವೇಳೆ ಆರು ಸಾವಿರ ಲಂಚ ಸ್ವೀಕರಿಸುವಾಗ ಬಲೆಗೆ ಕೆಡವಿದ್ದರು.
ಕಲಘಟಗಿಯ ಕಲ್ಲಪ್ಪ ಶಿರಬಡಗಿ ಅವರಿಗೆ ನಾಲ್ಕನೇ ದರ್ಜೆ ಗುತ್ತಿಗೆದಾರ ಪರವಾನಿಗೆ ಮಾಡಿಸಲು ಲಂಚದ ಬೇಡಿಕೆಯಿಟ್ಟಿದ್ದರು.
ಇದರಿಂದ ನೊಂದ ಗುತ್ತಿಗೆದಾರ ಭ್ರಷ್ಟಾಚಾರ ನಿಗ್ರಹ ದಳದ ಮೊರೆ ಹೋಗಿದ್ದ. ಅವರು ನೀಡಿದ ದೂರಿನ ಆಧಾರದ ಮೇಲೆ ಲಂಚ ಪಡೆಯುತ್ತಿದ್ದಾಗ ಎಕ್ಸಿಕ್ಯೂಟಿವ್ ಇಂಜಿನಿಯರ್ ಮನೋಹರ ಮಾಂಡೋಲಿಕರ ಎಸಿಬಿ ಬಲೆಗೆ ಬಿದ್ದ ಹಿನ್ನೆಲೆಯಲ್ಲಿ ಅವರ ಮನೆ ಮೇಲೆ ದಾಳಿ ನಡೆಸಿದ್ದರು.
ಆಗ ಅಪಾರ ಪ್ರಮಾಣದ ಬಂಗಾರ, ಬೆಳ್ಳಿ ಪತ್ತೆಯಾಗಿತ್ತು.
ಆದರೆ ಕೇವಲ ಹದಿಮೂರು ಲಕ್ಷ ರೂಪಾಯಿ ಮಾತ್ರ ವಶಪಡಿಸಿಕೊಂಡು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಇವರ ವಿರುದ್ದ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡು ಧಾರವಾಡ ಕೇಂದ್ರ ಕಾರಾಗೃಹ ಕ್ಕೆ ಕಳುಹಿಸಲಾಗಿದೆ ಎಂದು ಎಸಿಬಿ ಡಿವೈಎಸ್ಪಿ ವೇಣುಗೋಪಾಲ ಪ್ರಜಾಕಿರಣ.ಕಾಮ್ ಗೆ ತಿಳಿಸಿದ್ದಾರೆ