ಬೆಂಗಳೂರು prajakiran.com : ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನಾ ನಿಯಂತ್ರಿಸಲು ನಾಳೆಯಿಂದ 14 ದಿನ ಸಂಪೂರ್ಣ ಲಾಕ್ಡೌನ್ ವಿಸ್ತರಿಸಲು ರಾಜ್ಯದ ಬಿಜೆಪಿ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.
ಸಚಿವ ಸಂಪುಟದ ಸಭೆ ಬಳಿಕ ಈ ಕುರಿತು ನಿರ್ಧಾರ ಪ್ರಕಟಿಸಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ,
ಕೊರೋನಾ ಸೋಂಕು ನಿಯಂತ್ರಣಕ್ಕೆ ನಾಳೆ ಸಂಜೆಯಿಂದ 14 ದಿನಗಳ ಕಾಲ ಕರ್ನಾಟಕ ಲಾಕ್ ಆಗಲಿದೆ ಎಂದು ತಿಳಿಸಿದರು.
ಇಂದು ನಡೆದ ಸಂಪುಟ ಸಭೆಯಲ್ಲಿ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದ್ದು, ನಾಳೆ ರಾತ್ರಿ 9 ಗಂಟೆಯಿಂದಲೇ ಲಾಕ್ಡೌನ್ ಜಾರಿಗೆ ಬರಲಿದೆ.
ಕೊರೋನಾ ಸೋಂಕು ನಿಯಂತ್ರಣಕ್ಕೆ ಲಾಕ್ಡೌನ್ ಅವಶ್ಯ ಎಂದಿದ್ದಾರೆ.
ಬೆಳಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ ಅಗತ್ಯ ವಸ್ತುವನ್ನು ಮಾರಾಟ ಮಾಡಲು ಅವಕಾಶ ಮಾಡಿಕೊಡುತ್ತದೆ. ಅಲ್ಲದೆ ಬಾರ್ ನಲ್ಲಿ ಪಾರ್ಸಲ್ ವ್ಯವಸ್ಥೆ ಇದೆ ಎಂದು ಹೇಳಿದರು.