ರಾಜ್ಯ

ಹಳೆ ಹುಬ್ಬಳ್ಳಿ ಪ್ರಕರಣ : 86ಕ್ಕೂ ಹೆಚ್ಚು ಕಿಡಿಗೇಡಿಗಳು ಪೊಲೀಸ್ ವಶಕ್ಕೆ

ಹುಬ್ಬಳ್ಳಿ prajakiran. com : ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯ ಆವರಣದಲ್ಲಿ ಕಲ್ಲು ತೂರಾಟ ನಡೆಸಿದ ಕಿಡಿಗೇಡಿಗಳನ್ನು ಇಲ್ಲಿನ ಪೊಲೀಸರು ವಶಕ್ಕೆ ಪಡೆಯುತ್ತಿದ್ದಾರೆ.

ಧಾರ್ಮಿಕ ಭಾವನೆಗೆ ಧಕ್ಕೆಯನ್ನು ಉಂಟು ಮಾಡುವ ರೀತಿಯ ಪೋಸ್ಟ್‌ಗಳನ್ನು ಮಾಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಿಡಿಗೇಡಿಗಳು ನಿನ್ನೆ ಕಲ್ಲು ತೂರಾಟ ನಡೆಸಿದ್ದರು.

ಈಗಾಗಲೇ ಸಿಸಿ ಟಿವಿ ದೃಶ್ಯಾವಳಿಗಳನ್ನು ಆಧರಿಸಿ ಸುಮಾರು 86ಕ್ಕೂ ಹೆಚ್ಚು ಕಿಡಿಗೇಡಿಗಳನ್ನ ವಶಕ್ಕೆ ಪಡೆದಿದ್ದು, ತನಿಖೆ ನಡೆಸುತ್ತಿದ್ದಾರೆ.

ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಎಲ್ಲೆಡೆಯೂ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.

ಅಲ್ಲದೇ ಹಳೆ ಹುಬ್ಬಳ್ಳಿಯಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ.

ಇದಲ್ಲದೆ ನಿನ್ನೆ ರಾತ್ರಿ ಕೆಲ‌ ಕಿಡಿಗೇಡಿಗಳು ಸಂಜೀವಿನಿ‌ ಆಸ್ಪತ್ರೆಗೂ ನುಗ್ಗಿ ದಾಂಧಲೆ ನಡೆಸಿದ್ದಾರೆ.

ಆಸ್ಪತ್ರೆಯ ಕಿಟಿಕಿ ಗಾಜುಗಳನ್ನು ಪುಡಿ ಮಾಡಿ, ಆಂಜನೇಯ ದೇವಾಲಯದಲ್ಲಿಯೂ ದಾಂಧಲೆ ನಡೆಸಿ ಪೂಜಾ ಸಾಮಾನುಗಳನ್ನು ಚೆಲ್ಲಾಪಿಲ್ಲಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಈ ಘಟನೆಗೆ ಸಂಬಂಧಿಸಿದಂತೆ ನಾಲ್ಕು ಪ್ರಕರಣಗಳು ದಾಖಲಾಗಿವೆ.
ಸದ್ಯ 86ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

ಕಲ್ಲು ತೂರಾಟದಲ್ಲಿ 12 ಜನ ಪೊಲೀಸರು ಗಾಯಗೊಂಡಿದ್ದು, 7 ವಾಹನಗಳು ಜಖಂಗೊಂಡಿವೆ.

ಇನ್ನು ಸಾರ್ವಜನಿಕರಿಗೆ ಯಾವುದೇ ಹಾನಿಯಾಗಿದ್ದರೆ ದೂರು ದಾಖಲಿಸುವಂತೆ ಆಯುಕ್ತರು ಸೂಚಿಸಿದ್ದಾರೆ. ಸದ್ಯ ಹುಬ್ಬಳ್ಳಿ ನಗರದಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *