ಬೆಂಗಳೂರು prajakiran.com : ರಾಜ್ಯದಲ್ಲಿ ಮಂಗಳವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 15 ಜನ ಸಾವನ್ನಪ್ಪಿದ್ದಾರೆ.
ಮತ್ತೆ ಹೊಸದಾಗಿ 1498 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 26815ಕ್ಕೆ ಏರಿಕೆಯಾಗಿದೆ.
ಇಂದು ರಾಜ್ಯದಲ್ಲಿ 571 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 11098 ಜನ ಗುಣಮುಖರಾಗಿದ್ದು, 15297 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 279 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ ಮಂಗಳವಾರ 15 ಜನ ಮೃತಪಟ್ಟಿದ್ದು, ಈವರೆಗೆ ಸಾವನ್ನಪ್ಪಿದ್ದವರ ಸಂಖ್ಯೆ 416ಕ್ಕೆ ಏರಿಕೆಯಾದಂತಾಗಿದೆ.
ಮಂಗಳವಾರ ಪತ್ತೆಯಾದ ಪ್ರಕರಣಗಳಲ್ಲಿ ರಾಜ್ಯದ ರಾಜಧಾನಿ ಬೆಂಗಳೂರು ನಗರ ದಲ್ಲಿಯೇ ಅತಿ ಹೆಚ್ಚು ಸೋಂಕಿತರು ಕಂಡು ಬಂದಿದ್ದಾರೆ.
ಬೆಂಗಳೂರಿನಲ್ಲಿ ನಿನ್ನೇ 981 ಜನ ಸೋಂಕಿತರಿದ್ದರೆ ಇಂದು ಬರೋಬ್ಬರಿ 800 ಜನ ಸೋಂಕಿತರು ಕಂಡು ಬಂದಿರುವುದು ಬೆಂಗಳೂರಿಗರನ್ನು ಮತ್ತೆ ಬೆಚ್ಚಿಬೀಳಿಸುವಂತೆ ಮಾಡಿದೆ.
ಇನ್ನೂಳಿದಂತೆ ದಕ್ಷಿಣ ಕನ್ನಡ 83, ಧಾರವಾಡ 57, ಕಲಬುರಗಿ ಹಾಗೂ ಬೀದರ ತಲಾ 51, ಮೈಸೂರು 49, ಬಳ್ಳಾರಿ 45, ರಾಮನಗರ 37, ಉತ್ತರಕನ್ನಡ 35, ಶಿವಮೊಗ್ಗ 33, ಮಂಡ್ಯ 29, ಉಡುಪಿ 28, ಹಾಸನ ಹಾಗೂ ಬಾಗಲಕೋಟೆ ತಲಾ 26, ರಾಯಚೂರು 23, ವಿಜಯಪುರ 22, ಬೆಳಗಾವಿ 20, ತುಮಕೂರು 16, ಕೊಡಗು 14, ಯಾದಗಿರಿ 10, ದಾವಣಗೆರೆ , ಕೋಲಾರ, ಹಾವೇರಿ, ಚಾಮರಾಜನಗರ ಹಾಗೂ ಚಿಕ್ಕಮಗಳೂರು ತಲಾ 6, ಕೊಪ್ಪಳ 5, ಗದಗ 4, ಚಿಕ್ಕಬಳ್ಳಾಪುರ 3, ಚಿತ್ರದುರ್ಗ 1 ಹೀಗೆ ಒಟ್ಟು 29 ಜಿಲ್ಲೆಗಳಲ್ಲಿ ಕರೋನಾ ವೈರಸ್ ತನ್ನ ಅಟ್ಟಹಾಸ ಮೆರೆದಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಸಾವಿನ ರಣಕೇಕೆ ರಾಜ್ಯದಲ್ಲಿ ಮಂಗಳವಾರವೂ ಮುಂದುವರೆದಿದ್ದು, ಮೈಸೂರು 4, ಬೀದರ 4, ಕಲಬರುಗಿ 2, ಬೆಳಗಾವಿ, ಹಾಸನ, ದಾವಣಗೆರೆ, ಬಾಗಲಕೋಟೆ ಹಾಗೂ ಧಾರವಾಡದಲ್ಲಿ ತಲಾಒಬ್ಬರು ಸಾವನ್ನಪ್ಪಿದ್ದಾರೆ.