ಬೆಂಗಳೂರು prajakiran.com : ರಾಜ್ಯದಲ್ಲಿ ಗುರುವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 17 ಜನ ಸಾವನ್ನಪ್ಪಿದ್ದಾರೆ.
ಮತ್ತೆ ಹೊಸದಾಗಿ 2,228 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ ಕ್ಕೆ ಏರಿಕೆಯಾಗಿದೆ.
ಇಂದು ರಾಜ್ಯದಲ್ಲಿ 957 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು12,833 ಜನ ಗುಣಮುಖರಾಗಿದ್ದು, 17,782 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 457 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ ಗುರುವಾರ 17 ಜನ ಮೃತಪಟ್ಟಿದ್ದು, ಈವರೆಗೆ ಸಾವನ್ನಪ್ಪಿದ್ದವರ ಸಂಖ್ಯೆ 486 ಕ್ಕೆ ಏರಿಕೆಯಾದಂತಾಗಿದೆ.
ಗುರುವಾರ ಪತ್ತೆಯಾದ ಪ್ರಕರಣಗಳಲ್ಲಿ ರಾಜ್ಯದ ರಾಜಧಾನಿ ಬೆಂಗಳೂರು ನಗರ ದಲ್ಲಿಯೇ ಅತಿ ಹೆಚ್ಚು ಸೋಂಕಿತರು ಕಂಡು ಬಂದಿದ್ದಾರೆ. ಬೆಂಗಳೂರಿನಲ್ಲಿ ನಿನ್ನೇ 1148 ಜನ ಸೋಂಕಿತರಿದ್ದರೆ ಇಂದು ಬರೋಬ್ಬರಿ 1373 ಜನ ಸೋಂಕಿತರು ಕಂಡು ಬಂದಿದ್ದು, ಆ ಮೂಲಕ ಬೆಂಗಳೂರಿನಲ್ಲಿಯೇ ಅತಿ ಹೆಚ್ಚು 13,882 ಸೋಂಕಿತರಿರುವುದು ಬೆಂಗಳೂರಿಗರನ್ನು ಮತ್ತೆ ಬೆಚ್ಚಿಬೀಳಿಸುವಂತೆ ಮಾಡಿದೆ.
ಇನ್ನೂಳಿದಂತೆ ದಕ್ಷಿಣ ಕನ್ನಡ 167, ಕಲಬುರಗಿ 85, ಧಾರವಾಡ 75,ಮೈಸೂರು 52, ಬಳ್ಳಾರಿ 41, ದಾವಣಗೆರೆ 40, ಶಿವಮೊಗ್ಗ 37, ಬಾಗಲಕೋಟೆ 36, ಕೋಲಾರ 34, ಚಿಕ್ಕಬಳ್ಳಾಪುರ 32, ತುಮಕೂರು 27, ಮಂಡ್ಯ 24, ಉತ್ತರಕನ್ನಡ 23, ಉಡುಪಿ 22, ಹಾಸನ 21, ಹಾವೇರಿ 18, ರಾಮನಗರ 17, ಯಾದಗಿರಿ, ರಾಯಚೂರು ಹಾಗೂ ಬೆಂಗಳೂರು ಗ್ರಾಮಾಂತರ 16, ಬೀದರ 15, ಚಾಮರಾಜನಗರ 12, ಬೆಳಗಾವಿ 9, ಗದಗ 6, ಚಿಕ್ಕಮಗಳೂರು 5, ಕೊಡಗು 4, ಕೊಪ್ಪಳ ಹಾಗೂ ಚಿತ್ರದುರ್ಗ ತಲಾ 2, ವಿಜಯಪುರ 1 ಹೀಗೆ ರಾಜ್ಯದ ಎಲ್ಲಾ 30 ಜಿಲ್ಲೆಗಳಲ್ಲಿ ಕರೋನಾ ವೈರಸ್ ತನ್ನ ಅಟ್ಟಹಾಸ ಮೆರೆದಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಸಾವಿನ ರಣಕೇಕೆ ರಾಜ್ಯದಲ್ಲಿ ಗುರುವಾರವೂ ಮುಂದುವರೆದಿದ್ದು, ಧಾರವಾಡದಲ್ಲಿ ಬರೋಬ್ಬರಿ 7 ಜನ ಸಾವನ್ನಪ್ಪಿದ್ದಾರೆ. ಹಾಸನ, ಮೈಸೂರು ಹಾಗೂ ಕಲಬುರಗಿ 2, ತುಮಕೂರು, ದಾವಣಗೆರೆ, ಉತ್ತರಕನ್ನಡ, ರಾಯಚೂರು ಜಿಲ್ಲೆಯಲ್ಲಿ ತಲಾಒಬ್ಬರು ಸಾವನ್ನಪ್ಪಿದ್ದಾರೆ.