ಧಾರವಾಡ prajakiran. com : ಬರುವ ಮೇ 18 ಕ್ಕೆ ನಾನು ನನ್ನ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು .
ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ಮೇ 11 ಕ್ಕೆ ರಾಜೀನಾಮೆ ಕೊಡಬೇಕಿತ್ತು .
ಆದರೆ , ಚುನಾವಣಾ ನೋಟಿಫಿಕೇಶನ್ ಬರದಿದ್ದ ಕಾರಣ ನೀಡಿರಲಿಲ್ಲ . ಈಗ ನೋಟಿಫಿಕೇಶನ್ ಕೂಡ ಬಂದಿದೆ .
ಮೇ 18 ಕ್ಕೆ ರಾಜೀನಾಮೆ ನೀಡುತ್ತೇನೆ ಎಂದ ಅವರು ಮೋಹನ ಲಿಂಬಿಕಾಯಿ ತಾವೇ ಪರಿಷತ್ ಅಭ್ಯರ್ಥಿಯಾಗುತ್ತೇನೆ ಎಂದು ಹೇಳುತ್ತಿದ್ದಾರೆ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಹೊರಟ್ಟಿ , ಆ ಬಗ್ಗೆ ನನಗೆ ಏನೂ ಗೊತ್ತಿಲ್ಲ ಎಂದರು .
ಬಿಜೆಪಿ ಟಿಕೆಟ್ ವಿಚಾರವಾಗಿ ಮೇ 18 ರ ನಂತರವೇ ಪ್ರತಿಕ್ರಿಯೆ ನೀಡುತ್ತೇನೆ ಎಂದು ಹೊರಟ್ಟಿ ಹೇಳಿದರು .