ಬೆಂಗಳೂರು prajakiran.com : ರಾಜ್ಯದಲ್ಲಿ ಶುಕ್ರವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 21 ಜನ ಸಾವನ್ನಪ್ಪಿದ್ದಾರೆ.
ಮತ್ತೆ ಹೊಸದಾಗಿ 1694 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 19710 ಕ್ಕೆ ಏರಿಕೆಯಾಗಿದೆ.
ಇಂದು ರಾಜ್ಯದಲ್ಲಿ 471 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 8805 ಜನ ಗುಣಮುಖರಾಗಿದ್ದು, 10608 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 201 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ ಶುಕ್ರವಾರವೂ 21 ಜನ ಮೃತಪಟ್ಟಿದ್ದು, ಈವರೆಗೆ ಸಾವನ್ನಪ್ಪಿದ್ದವರ ಸಂಖ್ಯೆ 293 ಕ್ಕೆ ಏರಿಕೆಯಾದಂತಾಗಿದೆ.
ಶುಕ್ರವಾರ ಪತ್ತೆಯಾದ ಪ್ರಕರಣಗಳಲ್ಲಿ ರಾಜ್ಯದ ರಾಜಧಾನಿ ಬೆಂಗಳೂರು ನಗರ ದಲ್ಲಿಯೇ ಅತಿ ಹೆಚ್ಚು ಸೋಂಕಿತರು ಕಂಡು ಬಂದಿದ್ದಾರೆ.
ಬೆಂಗಳೂರಿನಲ್ಲಿ ನಿನ್ನೇ 889 ಜನ ಸೋಂಕಿತರಿದ್ದರೆ ಇಂದು ಬರೋಬ್ಬರಿ 994 ಜನ ಸೋಂಕಿತರು ಕಂಡು ಬಂದಿರುವುದು ಬೆಂಗಳೂರಿಗರನ್ನು ಮತ್ತೆ ಬೆಚ್ಚಿಬೀಳಿಸುವಂತೆ ಮಾಡಿದೆ.
ಇನ್ನೂಳಿದಂತೆ ಬಳ್ಳಾರಿ ಹಾಗೂ ದಕ್ಷಿಣ ಕನ್ನಡದಲ್ಲಿ ತಲಾ 97, ಕಲಬುರಗಿ 72, ತುಮಕೂರು 57, ಬೆಂಗಳೂರು ಗ್ರಾಮಾಂತರ 44, ಧಾರವಾಡ 38, ಮೈಸೂರು 35, ಮಂಡ್ಯ 33, ಬೀದರ 28, ಚಾಮರಾಜನಗರ 24, ಶಿವಮೊಗ್ಗ 23, ಗದಗ 19, ಉಡುಪಿ ಹಾಗೂ ಕೊಡಗು ತಲಾ 16, ಯಾದಗಿರಿ 14, ಹಾಸನ ಹಾಗೂ ಬೆಳಗಾವಿ ತಲಾ 13, ಕೋಲಾರ 11, ರಾಮನಗರ 10, ಬಾಗಲಕೋಟೆ 8, ರಾಯಚೂರು 7, ದಾವಣಗೆರೆ ಹಾಗೂ ಉತ್ತರಕನ್ನಡ ತಲಾ 5, ವಿಜಯಪುರ ಹಾಗೂ ಕೊಪ್ಪಳ ತಲಾ 4, ಚಿಕ್ಕಬಳ್ಳಾಪುರ ಹಾಗೂ ಚಿತ್ರದುರ್ಗ ತಲಾ 3, ಹಾವೇರಿಯಲ್ಲಿ ಒಂದು ಹೀಗೆ ಒಟ್ಟು 29ಜಿಲ್ಲೆಗಳಲ್ಲಿ ಕರೋನಾ ವೈರಸ್ ತನ್ನ ಅಟ್ಟಹಾಸ ಮೆರೆದಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಸಾವಿನ ರಣಕೇಕೆ ರಾಜ್ಯದಲ್ಲಿ ಶುಕ್ರವಾರವೂ ಮುಂದುವರೆದಿದ್ದು, ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ 5, ಚಿಕ್ಕಬಳ್ಳಾಪುರ ಹಾಗೂ ಕಲಬರುಗಿಯಲ್ಲಿ ತಲಾ 3, ವಿಜಯಪುರ ಹಾಗೂ ಶಿವಮೊಗ್ಗ ತಲಾ 2, ಗಣಿನಾಡು ಬಳ್ಳಾರಿ, ಹಾಸನ, ಬೀದರ, ದಾವಣಗೆರೆ ಹಾಗೂ ರಾಯಚೂರು ಜಿಲ್ಲೆಯಲ್ಲಿ ತಲಾಒಬ್ಬರು ಸಾವನ್ನಪ್ಪಿದ್ದಾರೆ.