ಬೆಂಗಳೂರು prajakiran.com : ರಾಜ್ಯದಲ್ಲಿ ಸೋಮವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಇಬ್ಬರು ಸಾವನ್ನಪ್ಪಿದ್ದಾರೆ.
ಮತ್ತೆ ಹೊಸದಾಗಿ 213 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 7213ಕ್ಕೆ ಏರಿಕೆಯಾಗಿದೆ.
213 ಸೋಂಕಿತರಲ್ಲಿ, 103 ಜನ ಹೊರರಾಜ್ಯದಿಂದಲೇ ಬಂದವರಿಗೆ ಆಗಿದ್ದಾರೆ. 23 ಜನಅಂತರ್ ರಾಷ್ಟ್ರೀಯ ಪ್ರಯಾಣಿಕರಾಗಿದ್ದಾರೆ.
ಇಂದು ರಾಜ್ಯದಲ್ಲಿ180 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 4135 ಜನ ಗುಣಮುಖರಾಗಿದ್ದು, 2987 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 56 ಜನ ಮಾತ್ರ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ ಸೋಮವಾರವೂ ಇಬ್ಬರು ಮೃತಪಟ್ಟಿದ್ದು, ಈವರೆಗೆ ಸಾವನ್ನಪ್ಪಿದ್ದವರ ಸಂಖ್ಯೆ 88ಕ್ಕೆ ಬಂದು ನಿಂತಿದೆ.
ಸೋಮವಾರ ಪತ್ತೆಯಾದ 213 ಪ್ರಕರಣಗಳಲ್ಲಿ ಬಿಸಲನಾಡು ಕಲಬುರಗಿಯಲ್ಲಿ 48, ರಾಜ್ಯದ ರಾಜಧಾನಿ ಬೆಂಗಳೂರು ನಗರ ಜಿಲ್ಲೆಯಲ್ಲಿ 35, ಧಾರವಾಡದಲ್ಲಿ 34, ದಕ್ಷಿಣ ಕನ್ನಡದಲ್ಲಿ 23, ರಾಯಚೂರು 18, ಯಾದಗಿರಿಯಲ್ಲಿ 13 ಅತಿ ಹೆಚ್ಚು ಸೋಂಕಿತರು ಕಂಡು ಬಂದಿದ್ದಾರೆ.
ಇನ್ನೂಳಿದಂತೆ ಬೀದರನಲ್ಲಿ 11, ಬಳ್ಳಾರಿಯಲ್ಲಿ 10, ಕೊಪ್ಪಳ 4, ವಿಜಯಪುರ, ಬಾಗಲಕೋಟೆ ಹಾಗೂ ಶಿವಮೊಗ್ಗದಲ್ಲಿ ತಲಾ ಮೂರು ಪ್ರಕರಣ, ಉಡುಪಿ, ಹಾವೇರಿ ಹಾಗೂ ರಾಮನಗರದಲ್ಲಿ ತಲಾ ಎರಡು ಪ್ರಕರಣ, ಹಾಸನ, ದಾವಣಗೆರೆಯಲ್ಲಿ ತಲಾ ಒಂದು ಪ್ರಕರಣ ದಾಖಲಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಸಾವಿನ ರಣಕೇಕೆ ರಾಜ್ಯದಲ್ಲಿ ಸೋಮವಾರವೂ ಮುಂದುವರೆದಿದ್ದು, ರಾಜ್ಯದ ರಾಜಧಾನಿ ಬೆಂಗಳೂರು ನಗರ ಜಿಲ್ಲೆ ಹಾಗೂ ಧಾರವಾಡದ ಒಬ್ಬರು ಸಾವನ್ನಪ್ಪಿದ್ದಾರೆ.
ಬೆಂಗಳೂರಿನ ಪಿ-7185 ನೇ ಸೋಂಕಿತ 75 ವರ್ಷದ ಮಹಿಳೆ ಜೂನ್ 13ರಂದು ದಾಖಲಾಗಿದ್ದು, ವೈರಲ್ ಇನ್ಸಪೆಕ್ಷನ್ ಜೂನ್ 15ರಂದು ಸಾವನ್ನಪ್ಪಿದ್ದಾರೆ.
ಪಿ-7060ನೇ 65 ವರ್ಷದ ವೃದ್ದ ಜೂನ್ 14ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ ಎಂದು ವಿವರಿಸಲಾಗಿದೆ.
ನಮ್ಮ ಪ್ರಜಾಕಿರಣ.ಕಾಮ್ ಫೇಸಬುಕ್ ಫೇಜ್ ಫಾಲೋ ಮಾಡಿ ಶೇರ್ ಮಾಡಿ follow/like: facebook.com/prajakirannews