ನವದೆಹಲಿ Prajakiran.com : ಸಿಡಿಲು ಬಡಿದು 26ಕ್ಕೂ ಅಧಿಕ ಮಂದಿ ಸಾವನ್ನಪ್ಪಿರುವ ಘಟನೆ ಪಶ್ಚಿಮಬಂಗಾಳದ ವಿವಿಧ ಪ್ರದೇಶಗಳಲ್ಲಿ ಸೋಮವಾರ ನಡೆದಿದೆ.
ಹೂಗ್ಲಿ ಜಿಲ್ಲೆಯಲ್ಲಿ 11 ಮಂದಿ, ಮುರ್ಶಿದಾಬಾದ್ ನಲ್ಲಿ 9, ಬಂಕುರಾದಲ್ಲಿ ಇಬ್ಬರು, ಮಿಡ್ನಾಪುರದಲ್ಲಿ ಇಬ್ಬರು ಹಾಗೂ ಪಶ್ಚಿಮ ಮಿಡ್ನಾಪುರದಲ್ಲಿ ಇಬ್ಬರು ಸಾವನ್ನಪ್ಪಿರುವುದಾಗಿ ವರದಿ ವಿವರಿಸಿದೆ.
ಘಟನೆಯಲ್ಲಿ ಜೀವ ಕಳೆದುಕೊಂಡವರ ಬಗ್ಗೆ ಸಾಂತ್ವಾನ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಪ್ರಾಣ ಕಳೆದುಕೊಂಡ ಕುಟುಂಬ ಸದಸ್ಯರಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ ಎರಡು ಲಕ್ಷ ರೂಪಾಯಿ ನೀಡಲಾಗುವುದು ಎಂದು ಘೋಷಿಸಿದ್ದಾರೆ.
ಮಿಂಚು ಹೊಡೆದು ಗಾಯಗೊಂಡವರಿಗೆ ತಲಾ 50 ಸಾವಿರ ಪರಿಹಾರ ಕೊಡುವುದಾಗಿ ಪ್ರಧಾನ ಮಂತ್ರಿ ಕಚೇರಿ ತಿಳಿಸಿದೆ.