*ಇದುವರೆಗೆ 159 ಜನ ಗುಣಮುಖ ಬಿಡುಗಡೆ*
*129 ಸಕ್ರಿಯ ಪ್ರಕರಣಗಳು
*ಇದುವರೆಗೆ ಐವರ ಮರಣ
ಧಾರವಾಡ prajakiran.com : ವಿದ್ಯಾನಗರಿ ಧಾರವಾಡ ಜಿಲ್ಲೆಯಲ್ಲಿ ಶನಿವಾರ ಮತ್ತೆಹೊಸದಾಗಿ 19 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್ ತಿಳಿಸಿದ್ದಾರೆ.
ಆ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 259 ಕ್ಕೆ ಏರಿಕೆಯಾಗಿದೆ. ಇದರಲ್ಲಿ ಈಗಾಗಲೇ 159 ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಟ್ಟು 129 ಪ್ರಕರಣಗಳು ಮಾತ್ರ ಸಕ್ರಿಯವಾಗಿವೆ ಎಂದು ಅವರು ವಿವರಿಸಿದ್ದಾರೆ.
ಕರೋನಾ ಸೋಂಕಿನಿಂದಾಗಿ ಧಾರವಾಡ ಜಿಲ್ಲೆಯಲ್ಲಿ ಈವರೆಗೆ ಐವರು ಮೃತಪಟ್ಟಿದ್ದಾರೆ.
ಶನಿವಾರ ಪತ್ತೆಯಾದ ಧಾರವಾಡ ಜಿಲ್ಲೆಯ 19 ಸೋಂಕಿತರ ಬಡಾವಣೆ, ಊರುಗಳ ಮಾಹಿತಿಯನ್ನು ಜಿಲ್ಲಾಡಳಿತ ಬಿಡುಗಡೆಗೊಳಿಸಿಲ್ಲ.
ಮರಣೋತ್ತರ ಕೋವಿಡ್ ದೃಢ :
ರಕ್ತವಾಂತಿ ಕಾಯಿಲೆ ಶಸ್ತ್ರ ಚಿಕಿತ್ಸೆಗಾಗಿ ಜೂನ್ 22 ರಂದು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ 73 ವರ್ಷದ ವ್ಯಕ್ತಿ ಜೂ. 24 ರಂದು ಮೃತಪಟ್ಟಿದ್ದರು.
ಶಸ್ತ್ರಚಿಕಿತ್ಸೆಗೆ ಮುನ್ನ ಮೂಗು ಮತ್ತು ಗಂಟಲು ದ್ರವ ಸಂಗ್ರಹಿಸಲಾಗಿತ್ತು. ಮೃತ ವ್ಯಕ್ತಿಯಲ್ಲಿ ಕೋವಿಡ್ ದೃಢಪಟ್ಟಿದೆ. ಅವರು ಹುಬ್ಬಳ್ಳಿ ತಾಲೂಕಿನ ಛಬ್ಬಿ ಗ್ರಾಮದವರು ಎಂದು ಧಾರವಾಡ ಜಿಲ್ಲಾಡಳಿತ ತಿಳಿಸಿದೆ.