ರಾಜ್ಯ

ಧಾರವಾಡದಲ್ಲಿ 30ಕ್ಕೂ ಹೆಚ್ಚು ಕಾಂಗ್ರೆಸ್ ಪಕ್ಷದ ಮುಖಂಡರ ಬಂಧನ, ಬಿಡುಗಡೆ

ಧಾರವಾಡ prajakiran.com : ಧಾರವಾಡದ ಕೆಸಿಡಿಯ ಬಿಬಿಎ ಸಭಾಂಗಣದಲ್ಲಿ
ಕೇಂದ್ರ ವಾರ್ತಾ ಇಲಾಖೆ ಏರ್ಪಡಿಸಿರುವ ಸುಶಾಸನ ಹಾಗೂ ಗರೀಬ್ ಕಲ್ಯಾಣ ಯೋಜನೆಗಳ ಛಾಯಾಚಿತ್ರ ಪ್ರದರ್ಶನ ಬಿಜೆಪಿ ಸರ್ಕಾರದ ಸಾಧನೆ ಎಂಬಂತೆ ಕಾರ್ಯಕ್ರಮವನ್ನು ಬಿಂಬಿಸುತ್ತಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು

ಅಲ್ಲದೇ, ಅದನ್ನು ತಕ್ಷಣ ರದ್ದುಗೊಳಿಸಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಪಕ್ಷದ ಮುಖಂಡರು ಎಐಸಿಸಿ ಸದಸ್ಯ ದೀಪಕ ಚಿಂಚೋರೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.

ಕೇಂದ್ರದ ನರೇಂದ್ರ ಮೋದಿಯವರ ನೇತೃತ್ವದ ಎನ್ ಡಿ ಎ ಮೈತ್ರಿ ಕೂಟದ ಸರ್ಕಾರದ ಎಂಟು ವರ್ಷಗಳ ಪೂರೈಕೆ ಮಾಡಿದ ಸಂದರ್ಭದಲ್ಲಿ ಬಿಜೆಪಿ ಸಾಧನೆ ಪ್ರಚಾರ ಮಾಡಲು ಅಧಿಕಾರ
ಸರ್ಕಾರದ ವಿರುದ್ಧ ಘೋಷಣೆ ಕೂಗಿ ಅಸಮಾಧಾನ ವ್ಯಕ್ತಪಡಿಸಿದರು.

ಸರ್ಕಾರ ಅಧಿಕಾರವನ್ನು ದುರುಪಯೋಗ ಪಡಿಸಿಕೊಳ್ಳುವ ಮೂಲಕ ಜನರ ದಾರಿ ತಪ್ಪಿಸುತ್ತಿದೆ. 75ವರ್ಷಗಳ ಇತಿಹಾಸವನ್ನು ತಿರುಚಿ ಹಾಕಿದೆ ಎಂದು ಆರೋಪಿಸಿದ್ದಾರೆ.

ಬಿಜೆಪಿ ಸಾಧನೆಯನ್ನು ಸರ್ಕಾರಿ ಯಂತ್ರದ ಮೂಲಕ ಪ್ರಚಾರ ಮಾಡುತ್ತಿದೆ ಎಂದು ಕಿಡಿಕಾರಿದರು.

ಈ ಸಂದರ್ಭದಲ್ಲಿ ಪೊಲೀಸರ ಜೊತೆಗೆ ಮಾತಿನ‌ಚಕಮಕಿ ನಡೆಯಿತು. ಅಲ್ಲದೆ, ಪರಿಸ್ಥಿತಿ ವಿಕೋಪಕ್ಕೆ ತೆರಳುವ ಸಾಧ್ಯತೆ ಅರಿತು ಪೊಲೀಸರು 30ಕ್ಕೂ ಹೆಚ್ಚು ಕಾಂಗ್ರೆಸ್ ಪಕ್ಷದ ಮುಖಂಡರ ಬಂಧಿಸಿ, ಆನಂತರ ಬಿಡುಗಡೆ ಮಾಡಲಾಯಿತು.

ಪೊಲೀಸರ ಈ ವರ್ತ‌ನೆಯನ್ನು ಎಐಸಿಸಿ ಸದಸ್ಯ ದೀಪಕ ಚಿಂಚೋರೆ ತರಾಟೆಗೆ ತೆಗೆದುಕೊಂಡರು.

ಹೋರಾಟ ಹತ್ತಿಕ್ಕುವ ಕುಮ್ಮಕ್ಕನ್ನು ಸಹಿಸುವುದಿಲ್ಲ ಎಂದು ಗುಡುಗಿದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *