ಧಾರವಾಡ prajakiran.com : ಕರ್ನಾಟ ಪ್ರದೇಶ ಕಾಂಗ್ರೆಸ್ ಸಮಿತಿಯ ಚುನಾವಣಾ ತಕರಾರುಗಳ ಕಾನೂನು ನಿರ್ವಹಣಾ ಸಮಿತಿಯ ಸಭೆಯು ಬೆಂಗಳೂರಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ನಡೆಯಿತು.
ಸಭೆಯಲ್ಲಿ ಉಪಸ್ಥಿತರಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರು, ಪ್ರಸ್ತುತ ನಡೆಯುತ್ತಿರುವ ಶಿರಾ, ಆರ್.ಆರ್.ನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ, ವಿಧಾನಪರಿಷತ್ಗೆ ಎರಡು ಶಿಕ್ಷಕರ ಕ್ಷೇತ್ರದ ಮತ್ತು ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಸಂಭವನೀಯ ಕಾನೂನು ಮತ್ತು ನೀತಿ ಸಂಹಿತೆ ಉಲ್ಲಂಘನೆ ಸಂಬಂಧ ಕಾನೂನಾತ್ಮಕ ಕಾರ್ಯನಿರ್ವಹಿಸಬೇಕು.
ಮತ್ತು ಚುನಾವಣಾ ಆಯೋಗದಿಂದ ಸಂಪರ್ಕಿಸುವ ನಿಟ್ಟಿನಲ್ಲಿ ಚುರುಕಿನಿಂದ ಜವಾಬ್ದಾರಿ ನಿರ್ವಹಿಸುವಂತೆ ಶಿವಕುಮಾರ ಸಲಹೆ ನೀಡಿದರು.
ಸಭೆಯಲ್ಲಿ ಸಮಿತಿ ಸದಸ್ಯರಾದ ಎಸ್.ಎ.ಅಹ್ಮದ್ ಅವರಿಗೆ ಶಿರಾ ಮತ್ತು ಆರ್.ಆರ್.ನಗರ ವಿಧಾನಸಭಾ ಕ್ಷೇತ್ರ, ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಪಿ.ಎಚ್.ನೀರಲಕೇರಿ ಅವರಿಗೆ ಪಶ್ಚಿಮ ಪದವೀಧರ ಕ್ಷೇತ್ರ, ಸುಮಾ ಅನಿಲಕುಮಾರ್ಗೆ ಆಗ್ನೇಯ ಪದವೀಧರ ಕ್ಷೇತ್ರ ಹಾಗೂ ಬೆಂಗಳೂರು ಶಿಕ್ಷಕರ ಕ್ಷೇತ್ರ, ರಮೇಶ್ ಮರಗೋಳಗೆ ಈಶಾನ್ಯ ಶಿಕ್ಷಕರ ಕ್ಷೇತ್ರದ ಜವಾಬ್ದಾರಿ ವಹಿಸಲಾಯಿತು.
ಸಭೆಯಲ್ಲಿ ಸಮಿತಿಯ ಅಧ್ಯಕ್ಷ ವಿ.ಎಸ್ ಉಗ್ರಪ್ಪ, ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಎ.ಎಸ್.ಪೊನ್ನಣ್ಣ, ಕೆಪಿಸಿಸಿ ಸದಸ್ಯ ಹೆಚ್.ಡಿ.ಅಮರನಾಥ್ ಉಪಸ್ಥಿತರಿದ್ದರು.