ರಾಜ್ಯ

ರಾಜ್ಯದಲ್ಲಿ ಸೋಮವಾರ 5 ಸಾವು, 249 ಪ್ರಕರಣ ಪತ್ತೆ

follow/like: facebook.com/prajakirannews

ಬೆಂಗಳೂರು prajakiran.com : ರಾಜ್ಯದಲ್ಲಿ ಸೋಮವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 5 ಜನ ಸಾವನ್ನಪ್ಪಿದ್ದಾರೆ.

ಮತ್ತೆ ಹೊಸದಾಗಿ 249 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ  9399ಕ್ಕೆ ಏರಿಕೆಯಾಗಿದೆ.

249ಸೋಂಕಿತರಲ್ಲಿ, 50  ಜನ ಹೊರರಾಜ್ಯದಿಂದಲೇ ಬಂದವರಿಗೆ ಆಗಿದ್ದಾರೆ.  11  ಜನಅಂತರ್ ರಾಷ್ಟ್ರೀಯ ಪ್ರಯಾಣಿಕರಾಗಿದ್ದಾರೆ.

ಇಂದು ರಾಜ್ಯದಲ್ಲಿ111 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 5730 ಜನ ಗುಣಮುಖರಾಗಿದ್ದು,  3523 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  80 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.



ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ ಸೋಮವಾರವೂ 5 ಜನ ಮೃತಪಟ್ಟಿದ್ದು, ಈವರೆಗೆ ಸಾವನ್ನಪ್ಪಿದ್ದವರ ಸಂಖ್ಯೆ 142ಕ್ಕೆ ಏರಿಕೆಯಾದಂತಾಗಿದೆ.

ಶನಿವಾರ ಪತ್ತೆಯಾದ 249 ಪ್ರಕರಣಗಳಲ್ಲಿ ರಾಜ್ಯದ ರಾಜಧಾನಿ ಬೆಂಗಳೂರುನಗರ ದಲ್ಲಿಯೇ ಅತಿ ಹೆಚ್ಚು ಸೋಂಕಿತರು ಕಂಡು ಬಂದಿದ್ದಾರೆ.

ನಿನ್ನೇ 196 ಸೋಂಕಿತರನ್ನು ಕಂಡಿದ್ದ ಬೆಂಗಳೂರು ಇಂದು 126 ಜನ ಸೋಂಕಿತರು ಕಂಡು ಬಂದಿರುವುದುಬೆಂಗಳೂರಿಗರನ್ನು ಮತ್ತೆ ಬೆಚ್ಚಿಬೀಳಿಸುವಂತೆ ಮಾಡಿದೆ.

 ಇನ್ನೂಳಿದಂತೆ  ಕಲಬುರಗಿ 27, ವಿಜಯಪುರ 15, ಉಡುಪಿ 14, ದಕ್ಷಿಣ ಕನ್ನಡ 12, ದಾವಣಗೆರೆ 9, ಉತ್ತರಕನ್ನಡ  ಹಾಗೂ ಬಾಗಲಕೋಟೆ ತಲಾ 6, ಬೀದರ, ಚಿಕ್ಕಮಗಳೂರು ತಲಾ 5, ಬೆಂಗಳೂರು ಗ್ರಾಮಾಂತರ ಹಾಗೂ ಧಾರವಾಡ ತಲಾ 4, ರಾಮನಗರ 3, ಚಿತ್ರದುರ್ಗ, ಕೋಲಾರ, ತುಮಕೂರು ಹಾಗೂ ಕೊಡಗು ತಲಾ 2, ಯಾದಗಿರಿ, ಚಿಕ್ಕಬಳ್ಳಾಪುರ, ಮೈಸೂರು, ಗದಗ, ಕೊಪ್ಪಳದಲ್ಲಿ ತಲಾ ಒಂದು ಹೀಗೆಒಟ್ಟು 22 ಜಿಲ್ಲೆಗಳಲ್ಲಿ ಕರೋನಾ ವೈರಸ್ ಪ್ರಕರಣ ದಾಖಲಾಗಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.



 ಸಾವಿನ ರಣಕೇಕೆ ರಾಜ್ಯದಲ್ಲಿ ಭಾನುವಾರವೂ ಮುಂದುವರೆದಿದ್ದು, ರಾಜ್ಯದ ರಾಜಧಾನಿ ಬೆಂಗಳೂರು ನಗರ ಜಿಲ್ಲೆಯಲ್ಲಿಯೇ 3 ಜನ ಸಾವನ್ನಪ್ಪಿದ್ದರೆ,  ಬಳ್ಳಾರಿ ಹಾಗೂ ರಾಮನಗರದಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ.   

ಬೆಂಗಳೂರಿನ ಪಿ-9276ನೇ ಸೋಂಕಿತ 45 ವರ್ಷದ ವ್ಯಕ್ತಿ, ಪಿ- 9299 ಸೊಂಕಿತ  38 ವರ್ಷದ ಮಹಿಳೆ, ಪಿ- 9362 ಸೋಂಕಿತ 70 ವರ್ಷದ ವೃದ್ದ, ಬಳ್ಳಾರಿ ಪಿ-7732ನ ಸೋಂಕಿತ 60ವರ್ಷದ ವೃದ್ದೆ, ರಾಮನಗರದ ಪಿ-9237 ನ ಸೋಂಕಿತ 90  ವರ್ಷದ ವೃದ್ದ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ ಎಂದು ವಿವರಿಸಲಾಗಿದೆ.



PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *