ಧಾರವಾಡ prajakiran.com : ರಾಜ್ಯ ಸರಕಾರದ ಹಾಗೂ ಖಾಸಗಿ ಆಸ್ಪತ್ರೆಗಳ ನಡುವೆ ದರ ಸಮರ ನಡೆದಿರುವ ಬೆನ್ನಹಿಂದೆಯೇ ವಿದ್ಯಾನಗರಿ ಧಾರವಾಡದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಖಾಸಗಿ ಆಸ್ಪತ್ರೆಗಳ ವೈದ್ಯರ ಜೊತೆಗೆ ಸಭೆ ನಡೆಸಿದರು.
ಸಭೆ ಬಳಿಕ ಮಾತನಾಡಿದ ಅವರು ಧಾರವಾಡ ಜಿಲ್ಲೆಯ ಖಾಸಗಿ ಆಸ್ಪತ್ರೆಯ ವೈದ್ಯರ ಸಭೆ ನಡೆಸಲಾಗಿದೆ. ಕೊವಿಡ್ ಸೋಂಕಿತರಿಗಾಗಿ ಧಾರವಾಡ ಜಿಲ್ಲೆಯಲ್ಲಿ 17 ಖಾಸಗಿ ಆಸ್ಪತ್ರೆ ಗಳನ್ನ ರಿಸರ್ವ್ ಮಾಡಲಾಗಿದೆ ಎಂದರು.
ಈಗಾಗಲೇ ಧಾರವಾಡ ಜಿಲ್ಲೆಯಲ್ಲಿ ಕರೋನಾ ಎದುರಿಸಲು 6000 ಬೆಡ್ ಗಳನ್ನ ಸಿದ್ದ ಇವೆ. ನಾವೂ ಇಗಾಗಲೇ ಆಸ್ಪತ್ರೆಗಳು ಮತ್ತು ಹೋಟೆಲ್ ಗಳ ಮಾಲೀಕರಿಗೆ ಸೂಚನೆ ನೀಡಲಾಗಿದೆ
ಕರೊನಾ ಬಗ್ಗೆ ಜಿಲ್ಲಾಡಳಿತ ಮುನ್ನಚ್ಚರಿಕೆ ಕ್ರಮವನ್ನ ಕೈಗೊಳ್ಳಲಿದೆ ಎಂದು ಸಚಿವ ಜಗದೀಶ ಶೆಟ್ಟರ ಸ್ಪಷ್ಟಪಡಿಸಿದರು.