ರಾಜ್ಯ

ರಾಜ್ಯದಲ್ಲಿ ಮಂಗಳವಾರ ಏಳು ಸಾವು, 317 ಪ್ರಕರಣ ಪತ್ತೆ

ಬೆಂಗಳೂರು prajakiran.com : ರಾಜ್ಯದಲ್ಲಿ ಮಂಗಳವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಬರೋಬ್ಬರಿ ಏಳು ಜನ ಸಾವನ್ನಪ್ಪಿದ್ದಾರೆ.

ಮತ್ತೆ ಹೊಸದಾಗಿ 317 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 7530ಕ್ಕೆ ಏರಿಕೆಯಾಗಿದೆ.

317 ಸೋಂಕಿತರಲ್ಲಿ, 108 ಜನ ಹೊರರಾಜ್ಯದಿಂದಲೇ ಬಂದವರಿಗೆ ಆಗಿದ್ದಾರೆ.  78 ಜನಅಂತರ್ ರಾಷ್ಟ್ರೀಯ ಪ್ರಯಾಣಿಕರಾಗಿದ್ದಾರೆ.



ಇಂದು ರಾಜ್ಯದಲ್ಲಿ322 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 4456 ಜನ ಗುಣಮುಖರಾಗಿದ್ದು, 2976 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 72 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ ಮಂಗಳವಾರವೂ ಎಳು ಜನ ಮೃತಪಟ್ಟಿದ್ದು, ಈವರೆಗೆ ಸಾವನ್ನಪ್ಪಿದ್ದವರ ಸಂಖ್ಯೆ 94ಕ್ಕೆ ಬಂದು ನಿಂತಿದೆ.

ಮಂಗಳವಾರ ಪತ್ತೆಯಾದ 317 ಪ್ರಕರಣಗಳಲ್ಲಿ ದಕ್ಷಿಣ ಕನ್ನಡದಲ್ಲಿ 79, ಬಿಸಲನಾಡು ಕಲಬುರಗಿಯಲ್ಲಿ 63, ಬಳ್ಳಾರಿ ಜಿಲ್ಲೆಯಲ್ಲಿ 53, ರಾಜ್ಯದ ರಾಜಧಾನಿ ಬೆಂಗಳೂರು  ನಗರ 47 ಸೋಂಕಿತರು ಕಂಡು ಬಂದಿದ್ದಾರೆ.

ಇನ್ನೂಳಿದಂತೆ ಧಾರವಾಡ 8,  ಉಡುಪಿ ಹಾಗೂ ಶಿವಮೊಗ್ಗದಲ್ಲಿ ತಲಾ 7, ಯಾದಗಿರಿ ರಾಯಚೂರ, ಉತ್ತರಕನ್ನಡ ತಲಾ 6, ಹಾಸನ 5, ವಿಜಯಪುರ, ಮೈಸೂರು, ಗದಗ, ರಾಮನಗರ, ಚಿಕ್ಕಮಗಳೂರು, ಕೊಪ್ಪಳ ತಲಾ 4, ಬೆಳಗಾವಿ 3, ಬೀದರ 2, ತುಮಕೂರದಲ್ಲಿ ಒಂದು ಪ್ರಕರಣ ದಾಖಲಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.



ಸಾವಿನ ರಣಕೇಕೆ ರಾಜ್ಯದಲ್ಲಿ ಮಂಗಳವಾರ ಮುಂದುವರೆದಿದ್ದು, ರಾಜ್ಯದ ರಾಜಧಾನಿ ಬೆಂಗಳೂರು ನಗರ ಜಿಲ್ಲೆಯಲ್ಲಿಯೇ 5 ಜನ ಸಾವನ್ನಪ್ಪಿದ್ದರೆ, ಬೀದರ  ಹಾಗೂ ರಾಮನಗರದಲ್ಲಿ ತಲಾ ಒಬ್ಬರು  ಸಾವನ್ನಪ್ಪಿದ್ದಾರೆ.

ಬೆಂಗಳೂರಿನ ಪಿ-5336 ನೇ ಸೋಂಕಿತ 72 ವರ್ಷದ ವೃದ್ದ, ಪಿ-7227 60 ವರ್ಷದ ವೃದ್ದ, ಪಿ-7229 65 ವರ್ಷದ ವೃದ್ದೆ, ಪಿ-7253 85 ವರ್ಷದ ವೃದ್ದೆ, ಪಿ-725986 ವರ್ಷದ ವೃದ್ದೆ ಸಾವನ್ನಪ್ಪಿದ್ದಾರೆ.

ಅದೇ ರೀತಿ ಬೀದರನ ಪಿ-7524 49 ವರ್ಷದ ವ್ಯಕ್ತಿ, ರಾಮನಗರದ ಪಿ-7261 48 ವರ್ಷದ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ ಎಂದು ವಿವರಿಸಲಾಗಿದೆ.



PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *