ದೇಶದಲ್ಲಿ ಎಳು ಹಂತದಲ್ಲಿ ಮತದಾನ : ರಾಜೀವಕುಮಾರ
ನವದೆಹಲಿ ಪ್ರಜಾಕಿರಣ.ಕಾಮ್ : ದೇಶದಲ್ಲಿ ಒಟ್ಟು ಎಳು ಹಂತದಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಮುಖ್ಯ ಆಯುಕ್ತ ರಾಜೀವಕುಮಾರ್ ತಿಳಿಸಿದರು.
ಅವರು ಶನಿವಾರ ನವದೆಹಲಿಯ ವಿಜ್ಞಾನ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಒಟ್ಟು ಎಳು ಹಂತದಲ್ಲಿ ಅಂದರೆ ಮೊದಲ ಹಂತ
ಎಪ್ರಿಲ್ 19, ಎರಡನೇ ಹಂತ ಎಪ್ರಿಲ್ 26, ಮೂರನೇ ಹಂತ ಮೇ 3, ನಾಲ್ಕನೇ ಹಂತ ಮೇ 13, ಐದನೇ ಹಂತ ಮೇ 20, ಆರನೇ ಹಂತ ಮೇ 25, ಎಳನೇ ಹಂತ ಜೂನ್ 1 ರಂದು 57 ಕ್ಷೇತ್ರದಲ್ಲಿ ಮತದಾನ ನಡೆಯಲಿದೆ. ಜೂನ್ 4 ರಂದು ದೇಶದ್ಯಾಂತ ಏಕಕಾಲಕ್ಕೆ ಮತ ಎಣಿಕೆ ನಡೆಯಲಿದೆ ಎಂದು ಹೇಳಿದರು.
ದೇಶದಲ್ಲಿ
ಒಟ್ಟು ಮತದಾರರು 97 ಕೋಟಿ ಮತದಾರರಿದ್ದು, ಅದರಲ್ಲಿ 49 ಕೋಟಿ
ಮಹಿಳಾ ಮತದಾರರು, 40 ಕೋಟಿ
ಪುರುಷ ಮತದಾರರು, 48 ಸಾವಿರ
ತೃತೀಯ ಲಿಂಗಿಗಳು ಇದ್ದಾರೆ ಎಂದರು.
ಉತ್ತರ ಪ್ರದೇಶ, ಬಿಹಾರ, ಪಶ್ಚಿಮ ಬಂಗಾಳ ದಲ್ಲಿ ಎಳು ಹಂತದ ಚುನಾವಣೆ ನಡೆಯಲಿದೆ ಎಂದು ಹೇಳಿದರು.
ರಾಜ್ಯದ 28 ಲೋಕಸಭಾ ಕ್ಷೇತ್ರದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದ್ದು,
ಮೊದಲ ಹಂತ ಎಪ್ರಿಲ್ 26 ಹಾಗೂ ಎರಡನೇ ಹಂತ ಮೇ 7 ರಂದು ನಡೆಯಲಿದೆ.
ದಕ್ಷಿಣ ಕರ್ನಾಟಕದ ಜಿಲ್ಲೆಗಳಾದ
ಮೈಸೂರು -ಕೊಡಗು, ಚಿಕ್ಕಬಳ್ಳಾಪುರ, ಉಡುಪಿ-ಚಿಕ್ಕಮಗಳೂರು, ಚಾಮರಾಜನಗರ,
ಹಾಸನ, ಮಂಡ್ಯ, ಕೋಲಾರ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಎಪ್ರಿಲ್ 26 ರಂದು ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.
ಅದೇರೀತಿ ಎರಡನೇ ಹಂತದಲ್ಲಿ ಮೇ 7ರಂದು ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಾದ ಬೆಳಗಾವಿ, ಬಾಗಲಕೋಟೆ, ವಿಜಯಪುರ,
ಬಳ್ಳಾರಿ, ಚಿಕ್ಕೋಡಿ, ಕಲಬುರಗಿ, ಬೀದರ, ರಾಯಚೂರು, ಉತ್ತರ ಕನ್ನಡ, ಕೊಪ್ಪಳ, ಗದಗ -ಹಾವೇರಿ, ಧಾರವಾಡ, ದಾವಣಗೆರೆ, ಶಿವಮೊಗ್ಗ ದಲ್ಲಿ ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯುಕ್ತ ರಾಜೀವಕುಮಾರ್ ತಿಳಿಸಿದರು.