ಬೆಂಗಳೂರು prajakiran.com : ರಾಜ್ಯದಲ್ಲಿ ಶನಿವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ72 ಜನ ಸಾವನ್ನಪ್ಪಿದ್ದಾರೆ.
ಮತ್ತೆ ಹೊಸದಾಗಿ 5072 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 90942 ಕ್ಕೆ ಏರಿಕೆಯಾಗಿದೆ.
ಇಂದು ರಾಜ್ಯದಲ್ಲಿ 2403 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 33750 ಜನ ಗುಣಮುಖರಾಗಿದ್ದು, 55388 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 611 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ ಶನಿವಾರವೂ 72 ಜನ ಮೃತಪಟ್ಟಿದ್ದು, ಈವರೆಗೆ ಸಾವನ್ನಪ್ಪಿದ್ದವರ ಸಂಖ್ಯೆ 1796 ಕ್ಕೆ ಏರಿಕೆಯಾದಂತಾಗಿದೆ.
ಶನಿವಾರ ಪತ್ತೆಯಾದ ಪ್ರಕರಣಗಳಲ್ಲಿ ರಾಜ್ಯದ ರಾಜಧಾನಿ ಬೆಂಗಳೂರು ನಗರ ದಲ್ಲಿಯೇ ಅತಿ ಹೆಚ್ಚು ಸೋಂಕಿತರು ಕಂಡು ಬಂದಿದ್ದಾರೆ.
ಬೆಂಗಳೂರಿನಲ್ಲಿ 2036 ಬರೋಬ್ಬರಿ ಜನ ಸೋಂಕಿತರು ಕಂಡು ಬಂದಿರುವುದು ಬೆಂಗಳೂರಿಗರನ್ನು ಮತ್ತೆ ಬೆಚ್ಚಿಬೀಳಿಸುವಂತೆ ಮಾಡಿದೆ.
ಇನ್ನೂಳಿದಂತೆ ಬೆಳಗಾವಿ 341, ಬಳ್ಳಾರಿ 222, ದಕ್ಷಿಣ ಕನ್ನಡ 218, ಮೈಸೂರು 187, ಧಾರವಾಡ 183 ಕಲಬುರಗಿ 183, ಉಡುಪಿ 182, ವಿಜಯಪುರ 175, ಉತ್ತರಕನ್ನಡ 155, ಬೆಂಗಳೂರು ಗ್ರಾಮಾಂತರ 154, ಹಾಸನ 151, ಚಿಕ್ಕಬಳ್ಳಾಪುರ 101, ದಾವಣಗೆರೆ 179, ಯಾದಗಿರಿ, ರಾಯಚೂರು ಹಾಗೂ ಕೋಲಾರ 68, ಬೀದರ 62, ಗದಗ 61, ಮಂಡ್ಯ60, ಬಾಗಲಕೋಟಿ 57, ಹಾವೇರಿ 52, ಶಿವಮೊಗ್ಗ ಹಾಗೂ ಚಿಕ್ಕಮಗಳೂರು 42, ತುಮಕೂರು 27, ಚಾಮರಾಜನಗರ 22, ರಾಮನಗರ 20, ಚಿತ್ರದುರ್ಗ 16, ಕೊಡಗು 9, ಹೀಗೆ ಒಟ್ಟು 30 ಜಿಲ್ಲೆಗಳಲ್ಲಿ ಕರೋನಾ ವೈರಸ್ ತನ್ನ ಅಟ್ಟಹಾಸ ಮೆರೆದಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಸಾವಿನ ರಣಕೇಕೆ ರಾಜ್ಯದಲ್ಲಿ ಶನಿವಾರವೂ ಮುಂದುವರೆದಿದ್ದು, ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಬರೋಬ್ಬರಿ 29 ಜನ ಸಾವನ್ನಪ್ಪಿದ್ದಾರೆ.
ದಕ್ಷಿಣ ಕನ್ನಡ ಹಾಗೂ ಮೈಸೂರು ತಲಾ 8, ಧಾರವಾಡ ಹಾಗೂ ಕಲಬರುಗಿ ತಲಾ 4, ಬೆಳಗಾವಿ 5, ಹಾಸನ, ಹಾವೇರಿ, ಶಿವಮೊಗ್ಗ, ಕೊಪ್ಪಳ ಹಾಗೂ ಚಿಕ್ಕಬಳ್ಳಾಪುರ ತಲಾ 2, ಯಾದಗಿರಿ, ತುಮಕೂರು ಹಾಗೂ ದಾವಣಗೆರೆ, ಗದಗ, ತಲಾ 1, ತಲಾ ಒಬ್ಬರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.