ಬೆಂಗಳೂರು prajakiran.com : ರಾಜ್ಯದಲ್ಲಿ ಸೋಮವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 73 ಜನ ಸಾವನ್ನಪ್ಪಿದ್ದಾರೆ.
ಮತ್ತೆ ಹೊಸದಾಗಿ 2738 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 41, 581 ಕ್ಕೆ ಏರಿಕೆಯಾಗಿದೆ.
ಇಂದು ರಾಜ್ಯದಲ್ಲಿ839 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 116248 ಜನ ಗುಣಮುಖರಾಗಿದ್ದು, 24572 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 545 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ ಸೋಮವಾರ 73 ಜನ ಮೃತಪಟ್ಟಿದ್ದು, ಈವರೆಗೆ ಸಾವನ್ನಪ್ಪಿದ್ದವರ ಸಂಖ್ಯೆ 757ಕ್ಕೆ ಏರಿಕೆಯಾದಂತಾಗಿದೆ.
ಭಾನುವಾರ ಪತ್ತೆಯಾದ ಪ್ರಕರಣಗಳಲ್ಲಿ ರಾಜ್ಯದ ರಾಜಧಾನಿ ಬೆಂಗಳೂರು ನಗರ ದಲ್ಲಿಯೇ ಅತಿ ಹೆಚ್ಚು ಸೋಂಕಿತರು ಕಂಡು ಬಂದಿದ್ದಾರೆ. ಬೆಂಗಳೂರಿನಲ್ಲಿ ನಿನ್ನೇ 1525 ಜನ ಸೋಂಕಿತರಿದ್ದರೆ ಇಂದು ಬರೋಬ್ಬರಿ 1315 ಜನ ಸೋಂಕಿತರು ಕಂಡು ಬಂದಿರುವುದು ಬೆಂಗಳೂರಿಗರನ್ನು ಮತ್ತೆ ಬೆಚ್ಚಿಬೀಳಿಸುವಂತೆ ಮಾಡಿದೆ.
ಇನ್ನೂಳಿದಂತೆ ಯಾದಗಿರಿ 162, ಮೈಸೂರು 151, ದಕ್ಷಿಣ ಕನ್ನಡ 131, ಬಳ್ಳಾರಿ 106, ಕಲಬುರಗಿ 89, ವಿಜಯಪುರ 86, ಶಿವಮೊಗ್ಗ 74, ಧಾರವಾಡ 71, ಉಡುಪಿ 53, ತುಮಕೂರು 48, ರಾಯಚೂರು ಹಾಗೂ ದಾವಣಗೆರೆ 45, ಚಿಕ್ಕಬಳ್ಳಾಪುರ 42, ಉತ್ತರಕನ್ನಡ ಹಾಗೂ ಬಾಗಲಕೋಟೆ ತಲಾ 37, ಕೊಪ್ಪಳ್ಳ 31, ಮಂಡ್ಯ 30, ಕೊಡಗು 29, ಬೆಳಗಾವಿ 27, ಹಾಸನ 25, ಬೀದರ 23, ಬೆಂಗಳೂರು ಗ್ರಾಮಾಂತರ ಹಾಗೂ ಕೋಲಾರ ತಲಾ 21, ಚಿಕ್ಕಮಗಳೂರು 10, ಚಾಮರಾಜನಗರ 9, ಚಿತ್ರದುರ್ಗ 8, ಗದಗ ಹಾಗೂ ಹಾವೇರಿ ತಲಾ 6, ಹೀಗೆ ಒಟ್ಟು 29 ಜಿಲ್ಲೆಗಳಲ್ಲಿ ಕರೋನಾ ವೈರಸ್ ತನ್ನ ಅಟ್ಟಹಾಸ ಮೆರೆದಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಸಾವಿನ ರಣಕೇಕೆ ರಾಜ್ಯದಲ್ಲಿ ಭಾನುವಾರವೂ ಮುಂದುವರೆದಿದ್ದುರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಬರೋಬ್ಬರಿ 47 ಜನ ಸಾವನ್ನಪ್ಪಿದ್ದಾರೆ. ಮೈಸೂರಿನಲ್ಲಿ 6, ಧಾರವಾಡ 5, ಶಿವಮೊಗ್ಗ 3, ಬಾಗಲಕೋಟೆ 2, ಕೊಡಗು ಹಾಗೂ ಬೆಳಗಾವಿ ತಲಾ 2, ತುಮಕೂರು, ಹಾಸನ, ಗದಗ ಹಾಗೂ ಹಾವೇರಿಯಲ್ಲಿ ತಲಾ ಒಬ್ಬರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.