ಧಾರವಾಡ prajakiran.com : ಧಾರವಾಡ ಜಿಲ್ಲೆಯ ಕರೋನಾ ಪಾಸಿಟಿವ್ ಪ್ರಕರಣ ದಿನದಿಂದ ದಿನಕ್ಕೆ ಏರುತ್ತಲೇ ಸಾಗಿದೆ.
ಸೋಂಕಿತರ ಸಂಖ್ಯೆ ಭಾನುವಾರ ಒಂದೇ ದಿನ ಮತ್ತೆ 777 ಕ್ಕೆ ಬಂದಿದೆ.
ದುರಂತದ ಸಂಗತಿಯೆಂದರೆ ಇಂದು ಕೂಡ 4 ಸೋಂಕಿತರು ಚಿಕಿತ್ಸೆ ಫಲಿಸದೆ ಸಾವಿಗೀಡಾಗಿದ್ದಾರೆ.
ಹುಬ್ಬಳ್ಳಿ ರೈಲ್ವೆ ಆಸ್ಪತ್ರೆಯಲ್ಲಿ ಇಬ್ಬರು, ಧಾರವಾಡದ ಎಸ್ ಡಿಎಂ ಹಾಗೂ ರಾಮಬಗೌಡರ ಆಸ್ಪತ್ರೆಯಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ ಎಂದು ಹೆಲ್ತ್ ಬುಲೆಟಿನ್ ತಿಳಿಸಿದೆ.
ಆತಂಕದ ವಿಚಾರವೆಂದರೆ 353 ಜನ ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಆ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 5640 ಕ್ಕೆ ಎರಿಕೆ ಆಗಿದೆ.
ಸಮಾಧಾನದ ಸಂಗತಿಯೆಂದರೆ 826
ಸೋಂಕಿತರು ಗುಣಮುಖರಾಗಿ
ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.