ಬೆಂಗಳೂರು prajakiran.com : ರಾಜ್ಯದಲ್ಲಿ ಬುಧವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಬರೋಬ್ಬರಿ ಎಂಟು ಜನ ಸಾವನ್ನಪ್ಪಿದ್ದಾರೆ.
ಮತ್ತೆ ಹೊಸದಾಗಿ 204 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 7734ಕ್ಕೆ ಏರಿಕೆಯಾಗಿದೆ.
204 ಸೋಂಕಿತರಲ್ಲಿ, 106 ಜನ ಹೊರರಾಜ್ಯದಿಂದಲೇ ಬಂದವರಿಗೆ ಆಗಿದ್ದಾರೆ. 2 ಜನಅಂತರ್ ರಾಷ್ಟ್ರೀಯ ಪ್ರಯಾಣಿಕರಾಗಿದ್ದಾರೆ.
ಇಂದು ರಾಜ್ಯದಲ್ಲಿ348 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 4804 ಜನ ಗುಣಮುಖರಾಗಿದ್ದು, 2824 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 72 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ ಬುಧವಾರವೂ ಎಂಟು ಜನ ಮೃತಪಟ್ಟಿದ್ದು, ಈವರೆಗೆ ಸಾವನ್ನಪ್ಪಿದ್ದವರ ಸಂಖ್ಯೆ 102ಕ್ಕೆ ಬಂದು ನಿಂತಿದೆ.
ಬುಧವಾರ ಪತ್ತೆಯಾದ 204 ಪ್ರಕರಣಗಳಲ್ಲಿ ರಾಜ್ಯದ ರಾಜಧಾನಿ ಬೆಂಗಳೂರು ನಗರ 55, ಯಾದಗಿರಿ 37, ಬಳ್ಳಾರಿ 29, ಕಲಬುರಗಿಯಲ್ಲಿ19, ಬೀದರನಲ್ಲಿ 12 ಸೋಂಕಿತರು ಕಂಡು ಬಂದಿದ್ದಾರೆ.
ಇನ್ನೂಳಿದಂತೆ ದಕ್ಷಿಣಕನ್ನಡ ಹಾಗೂ ಧಾರವಾಡದಲ್ಲಿ ತಲಾ 8, ಮಂಡ್ಯ 7, ಹಾಸನ 5, ಉಡುಪಿ, ಬಾಗಲಕೊಟೆ, ಶಿವಮೊಗ್ಗ ತಲಾ 4, ದಾವಣಗೆರೆ, ಚಿಕ್ಕಬಳ್ಳಾಪುರ, ಉತ್ತರಕನ್ನಡದಲ್ಲಿ ತಲಾ 3, ರಾಯಚೂರು, ಮೈಸೂರು, ಬೆಂಗಳೂರು ಗ್ರಾಮಾಂತರದಲ್ಲಿ ಒಂದು ಪ್ರಕರಣ ದಾಖಲಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಸಾವಿನ ರಣಕೇಕೆ ರಾಜ್ಯದಲ್ಲಿ ಬುಧವಾರ ಮುಂದುವರೆದಿದ್ದು, ರಾಜ್ಯದ ರಾಜಧಾನಿ ಬೆಂಗಳೂರು ನಗರ ಜಿಲ್ಲೆಯಲ್ಲಿಯೇ 5 ಜನ ಸಾವನ್ನಪ್ಪಿದ್ದರೆ, ಶಿವಮೊಗ್ಗ, ಬೀದರ ಹಾಗೂ ಬಳ್ಳಾರಿಯಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ.
ಬೆಂಗಳೂರಿನ ಪಿ-6008 ನೇ ಸೋಂಕಿತ 70 ವರ್ಷದ ವೃದ್ದೆ, ಪಿ-6861 ಸೊಂಕಿತ 39 ವರ್ಷದ ಮಹಿಳೆ, ಪಿ-7630 ಸೋಂಕಿತ 64 ವರ್ಷದ ವೃದ್ದ, ಪಿ- 7631 ಸೋಂಕಿತ 61 ವರ್ಷದ ವೃದ್ದ, ಪಿ- 7636ನ ಸೋಂಕಿತ 90 ವರ್ಷದ ವೃದ್ದ ಸಾವನ್ನಪ್ಪಿದ್ದಾರೆ.
ಅದೇ ರೀತಿ ಶಿವಮೊಗ್ಗದ ಪಿ-7573 ಸೋಂಕಿತ 56 ವರ್ಷದ ಮಹಿಳೆ, ಬೀದರನ ಪಿ-7697 ನ ಸೋಂಕಿತ 26 ವರ್ಷದ ಯುವಕ ಹಾಗೂ ಬಳ್ಳಾರಿಯು ಪಿ-7724 ನ ಸೋಂಕಿಯ 62 ವರ್ಷದ ವೃದ್ದ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ ಎಂದು ವಿವರಿಸಲಾಗಿದೆ.