follow/like: facebook.com/prajakirannews
ಬೆಂಗಳೂರು prajakiran.com : ರಾಜ್ಯದಲ್ಲಿ ಮಂಗಳವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 8 ಜನ ಸಾವನ್ನಪ್ಪಿದ್ದಾರೆ.
ಮತ್ತೆ ಹೊಸದಾಗಿ 322 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 9721ಕ್ಕೆ ಏರಿಕೆಯಾಗಿದೆ.
322 ಸೋಂಕಿತರಲ್ಲಿ, 64 ಜನ ಹೊರರಾಜ್ಯದಿಂದಲೇ ಬಂದವರಿಗೆ ಆಗಿದ್ದಾರೆ. 5 ಜನಅಂತರ್ ರಾಷ್ಟ್ರೀಯ ಪ್ರಯಾಣಿಕರಾಗಿದ್ದಾರೆ.
ಇಂದು ರಾಜ್ಯದಲ್ಲಿ274 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 6004 ಜನ ಗುಣಮುಖರಾಗಿದ್ದು, 3563 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 120 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ ಮಂಗಳವಾರವೂ 8 ಜನ ಮೃತಪಟ್ಟಿದ್ದು, ಈವರೆಗೆ ಸಾವನ್ನಪ್ಪಿದ್ದವರ ಸಂಖ್ಯೆ 150ಕ್ಕೆ ಏರಿಕೆಯಾದಂತಾಗಿದೆ.
ಮಂಗಳವಾರ ಪತ್ತೆಯಾದ 322 ಪ್ರಕರಣಗಳಲ್ಲಿ ರಾಜ್ಯದ ರಾಜಧಾನಿ ಬೆಂಗಳೂರುನಗರ ದಲ್ಲಿಯೇ ಅತಿ ಹೆಚ್ಚು ಸೋಂಕಿತರು ಕಂಡು ಬಂದಿದ್ದಾರೆ.
ನಿನ್ನೇ 126 ಸೋಂಕಿತರನ್ನು ಕಂಡಿದ್ದ ಬೆಂಗಳೂರು ಇಂದು 107 ಜನ ಸೋಂಕಿತರು ಕಂಡು ಬಂದಿರುವುದುಬೆಂಗಳೂರಿಗರನ್ನು ಮತ್ತೆ ಬೆಚ್ಚಿಬೀಳಿಸುವಂತೆ ಮಾಡಿದೆ.
ಇನ್ನೂಳಿದಂತೆ ಬಳ್ಳಾರಿ 53, ಬೀದರ 22, ಮೈಸೂರು 21, ವಿಜಯಪುರ 16, ಯಾದಗಿರಿ 13, ಉಡುಪಿ 11, ಗದಗ 9, ದಕ್ಷಿಣ ಕನ್ನಡ ಹಾಗೂ ಕೋಲಾರದಲ್ಲಿ ತಲಾ 8, ಹಾಸನ 7, ಕಲಬುರಗಿ 6, ಚಿಕ್ಕಬಳ್ಳಾಪುರ ಹಾಗೂ ಶಿವಮೊಗ್ಗದಲ್ಲಿ ತಲಾ 5, ಧಾರವಾಡ, ತುಮಕೂರು, ಕೊಪ್ಪಳ ಹಾಗೂ ಚಾಮರಾಜನಗರದಲ್ಲಿ ತಲಾ 4, ರಾಯಚೂರು, ಉತ್ತರಕನ್ನಡದಲ್ಲಿ ತಲಾ 3, ಮಂಡ್ಯ, ಬೆಳಗಾವಿ, ದಾವಣಗೆರೆ, ಹಾವೇರಿಜಿಲ್ಲೆಯಲ್ಲಿ ತಲಾ 2, ಕೊಡಗು ಜಿಲ್ಲೆಯ ಒಂದು ಹೀಗೆಒಟ್ಟು 25 ಜಿಲ್ಲೆಗಳಲ್ಲಿ ಕರೋನಾ ವೈರಸ್ ಪ್ರಕರಣ ದಾಖಲಾಗಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಸಾವಿನ ರಣಕೇಕೆ ರಾಜ್ಯದಲ್ಲಿ ಮಂಗಳವಾರವೂ ಮುಂದುವರೆದಿದ್ದು, ರಾಜ್ಯದ ರಾಜಧಾನಿ ಬೆಂಗಳೂರು ನಗರ ಜಿಲ್ಲೆಯಲ್ಲಿಯೇ 6 ಜನ ಸಾವನ್ನಪ್ಪಿದ್ದರೆ, ಬಳ್ಳಾರಿ ಹಾಗೂ ದಕ್ಷಿಣದಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ.
ಬೆಂಗಳೂರಿನ ಪಿ-7623ನೇ ಸೋಂಕಿತ 47 ವರ್ಷದ ಮಹಿಳೆ, ಪಿ- 8870 ಸೊಂಕಿತ 85 ವರ್ಷದ ವೃದ್ದೆ, ಪಿ- 8996 ಸೋಂಕಿತ 81 ವರ್ಷದ ವೃದ್ದ, ಪಿ- 9503 ಸೊಂಕಿತ 32 ವರ್ಷದ ಯುವಕ, ಪಿ- 9508 ಸೊಂಕಿತ 67 ವರ್ಷದ ವೃದ್ದ, ಪಿ- 9518 ಸೊಂಕಿತ 40 ವರ್ಷದ ವ್ಯಕ್ತಿ, ಬಳ್ಳಾರಿ ಪಿ-9679ನ ಸೋಂಕಿತ 85 ವರ್ಷದ ವೃದ್ದೆ, ದಕ್ಷಿಣ ಕನ್ನಡದ ಪಿ-6282ನ ಸೋಂಕಿತ 70 ವರ್ಷದ ವೃದ್ದ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ ಎಂದು ವಿವರಿಸಲಾಗಿದೆ.