ಧಾರವಾಡ prajakiran.com ; ಧಾರವಾಡ ಜಿಲ್ಲೆಯಾದ್ಯಂತ ನಿನ್ನೆಯಿಂದ ಭಾರೀ ಮಳೆ ಸುರಿಯುತ್ತಿದೆ.
ಈ ಹಿನ್ನೆಲೆಯಲ್ಲಿ ಜಿಲ್ಲೆಯ ತುಪರಿಹಳ್ಳ ಹಾಗೂ ಬೆಣ್ಣೆ ಹಳ್ಳ ತುಂಬಿ ಹರಿಯುತ್ತಿವೆ.
ಇದರಿಂದಾಗಿ ಜಿಲ್ಲೆಯ ಹಲವು ಹಳ್ಳಿಗಳಲ್ಲಿ ಪ್ರವಾಹ ಭೀತಿ ಆರಂಭವಾಗಿದೆ.
ಜಿಲ್ಲಾಡಳಿತ ಕೂಡ ಈ ಬಗ್ಗೆ ತೀವ್ರ ನಿಗಾವಹಿಸಿದ್ದು, ಜನರಿಗೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚಿಸಿದೆ.
ಇದೇ ವೇಳೆ ನವಲಗುಂದ ತಾಲೂಕಿನ ಶಿರೂರ ಬಳಿ 8 ಜನ ಕುರಿಗಾರರು ಹಾಗೂ 200 ಕುರಿಗಳು ಬೆಣ್ಣೆ ಹಳ್ಳದಲ್ಲಿ ಸಿಲುಕಿದ್ದಾರೆ ಎಂದು ತಿಳಿದುಬಂದಿದೆ.
ಕೂಡಲೇ ಮಾಹಿತಿ ಅರಿತ ನವಲಗುಂದ ತಾಲೂಕು ಆಡಳಿತ, ಪೊಲೀಸರು ಹಾಗೂ ಅಗ್ನಿ ಶಾಮಕದಳದ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.