ಬೆಂಗಳೂರು prajakiran.com : ರಾಜ್ಯದಲ್ಲಿ ಭಾನುವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ82 ಜನ ಸಾವನ್ನಪ್ಪಿದ್ದಾರೆ.
ಮತ್ತೆ ಹೊಸದಾಗಿ 5199 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 96141 ಕ್ಕೆ ಏರಿಕೆಯಾಗಿದೆ.
ಇಂದು ರಾಜ್ಯದಲ್ಲಿ 2088 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 35838 ಜನ ಗುಣಮುಖರಾಗಿದ್ದು, 58417 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 632 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ ಭಾನುವಾರವೂ 82 ಜನ ಮೃತಪಟ್ಟಿದ್ದು, ಈವರೆಗೆ ಸಾವನ್ನಪ್ಪಿದ್ದವರ ಸಂಖ್ಯೆ 1878 ಕ್ಕೆ ಏರಿಕೆಯಾದಂತಾಗಿದೆ.
ಭಾನುವಾರ ಪತ್ತೆಯಾದ ಪ್ರಕರಣಗಳಲ್ಲಿ ರಾಜ್ಯದ ರಾಜಧಾನಿ ಬೆಂಗಳೂರು ನಗರ ದಲ್ಲಿಯೇ ಅತಿ ಹೆಚ್ಚು ಸೋಂಕಿತರು ಕಂಡು ಬಂದಿದ್ದಾರೆ.
ಬೆಂಗಳೂರಿನಲ್ಲಿ 1950 ಬರೋಬ್ಬರಿ ಜನ ಸೋಂಕಿತರು ಕಂಡು ಬಂದಿರುವುದು ಬೆಂಗಳೂರಿಗರನ್ನು ಮತ್ತೆ ಬೆಚ್ಚಿಬೀಳಿಸುವಂತೆ ಮಾಡಿದೆ.
ಇನ್ನೂಳಿದಂತೆ ಬಳ್ಳಾರಿ 579, ಮೈಸೂರು 230, ಬೆಂಗಳೂರು ಗ್ರಾಮಾಂತರ 213 ದಕ್ಷಿಣ ಕನ್ನಡ 199 , ಉಡುಪಿ 169, ಧಾರವಾಡ 165, ಹಾಸನ 164, ಬೆಳಗಾವಿ 163 , ಕಲಬುರಗಿ 152, ವಿಜಯಪುರ 132,ರಾಯಚೂರು 131, ದಾವಣಗೆರೆ 89, ಉತ್ತರಕನ್ನಡ 85, ಚಿಕ್ಕಬಳ್ಳಾಪುರ 81, ಬೀದರ 77, ಮಂಡ್ಯ 64, ಗದಗ ಹಾಗೂ ಚಿಕ್ಕಮಗಳೂರು 81, ಯಾದಗಿರಿ 56, ಚಿತ್ರದುರ್ಗ 53, ಕೋಲಾರ 49, ಹಾವೇರಿ 47, ತುಮಕೂರು 46, ಬಾಗಲಕೋಟೆ 41, ಕೊಪ್ಪಳ 40, ಶಿವಮೊಗ್ಗ 39, ಚಾಮರಾಜನಗರ 28, ಕೊಡಗು 20, ರಾಮನಗರ 15 ಹೀಗೆ ಒಟ್ಟು 30 ಜಿಲ್ಲೆಗಳಲ್ಲಿ ಕರೋನಾ ವೈರಸ್ ತನ್ನ ಅಟ್ಟಹಾಸ ಮೆರೆದಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಸಾವಿನ ರಣಕೇಕೆ ರಾಜ್ಯದಲ್ಲಿ ಭಾನುವಾರವೂ ಮುಂದುವರೆದಿದ್ದು, ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಬರೋಬ್ಬರಿ 29 ಜನ ಸಾವನ್ನಪ್ಪಿದ್ದಾರೆ.
ದಕ್ಷಿಣ ಕನ್ನಡ 7, ಧಾರವಾಡ, ಕಲಬುರಗಿ ಹಾಗೂ ಬೆಳಗಾವಿ ತಲಾ 6, ತುಮಕೂರು ಹಾಗೂಮೈಸೂರು ತಲಾ 5, ದಾವಣಗೆರೆಹಾಗೂ ಹಾಸನ ತಲಾ 3, ಉತ್ತರಕನ್ನಡ, ಚಿಕ್ಕಬಳ್ಳಾಪುರ, ಗದಗ ಹಾಗೂ ಬಾಗಲಕೋಟೆ ತಲಾ 2, ವಿಜಯಪುರ, ಮಂಡ್ಯ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ತಲಾ ಒಬ್ಬರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.