ಬೆಂಗಳೂರು prajakiran.com : ರಾಜ್ಯದಲ್ಲಿ ಬುಧವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 87 ಜನ ಸಾವನ್ನಪ್ಪಿದ್ದಾರೆ.
ಮತ್ತೆ ಹೊಸದಾಗಿ 3176 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 47253 ಕ್ಕೆ ಏರಿಕೆಯಾಗಿದೆ.
ಇಂದು ರಾಜ್ಯದಲ್ಲಿ 1076 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 18466 ಜನ ಗುಣಮುಖರಾಗಿದ್ದು, 27853 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 597 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ ಬುಧವಾರವೂ 87 ಜನ ಮೃತಪಟ್ಟಿದ್ದು, ಈವರೆಗೆ ಸಾವನ್ನಪ್ಪಿದ್ದವರ ಸಂಖ್ಯೆ 928ಕ್ಕೆ ಏರಿಕೆಯಾದಂತಾಗಿದೆ.
ಬುಧವಾರ ಪತ್ತೆಯಾದ ಪ್ರಕರಣಗಳಲ್ಲಿ ರಾಜ್ಯದ ರಾಜಧಾನಿ ಬೆಂಗಳೂರು ನಗರ ದಲ್ಲಿಯೇ ಅತಿ ಹೆಚ್ಚು ಸೋಂಕಿತರು ಕಂಡು ಬಂದಿದ್ದಾರೆ. ಬೆಂಗಳೂರಿನಲ್ಲಿ ನಿನ್ನೇ 1267 ಜನ ಸೋಂಕಿತರಿದ್ದರೆ ಇಂದು ಬರೋಬ್ಬರಿ 1975 ಜನ ಸೋಂಕಿತರು ಕಂಡು ಬಂದಿರುವುದು ಬೆಂಗಳೂರಿಗರನ್ನು ಮತ್ತೆ ಬೆಚ್ಚಿಬೀಳಿಸುವಂತೆ ಮಾಡಿದೆ.
ಇನ್ನೂಳಿದಂತೆ ಧಾರವಾಡ139, ಬಳ್ಳಾರಿ 136, ಮೈಸೂರು 99, ವಿಜಯಪುರ 80, ದಕ್ಷಿಣ ಕನ್ನಡ 76, ಕಲಬರುಗಿ 67, ಉಡುಪಿ 52, ಯಾದಗಿರಿ 49, ಉತ್ತರಕನ್ನಡ 48, ಬೆಳಗಾವಿ 41, ಗದಗ 39, ಬೀದರ ಹಾಗೂ ದಾವಣಗೆರೆ ತಲಾ 35, ಬಾಗಲಕೋಟೆ 34, ಚಿಕ್ಕಬಳ್ಳಾಪುರ 32, ಮಂಡ್ಯ 31, ಶಿವಮೊಗ್ಗ 29, ರಾಯಚೂರು 26, ಹಾಸನ 25, ತುಮಕೂರು 24, ಕೊಡಗು 23, ಕೋಲಾರ 15, ಕೊಪ್ಪಳ 14, ಚಿಕ್ಕಮಗಳೂರು 13, ಚಿತ್ರದುರ್ಗ 12, ಬೆಂಗಳೂರು ಗ್ರಾಮಾಂತರ 10, ಚಾಮರಾಜನಗರ 8, ಹಾವೇರಿ 6, ರಾಮನಗರ 3 ಹೀಗೆ ಒಟ್ಟು 30 ಜಿಲ್ಲೆಗಳಲ್ಲಿ ಕರೋನಾ ವೈರಸ್ ತನ್ನ ಅಟ್ಟಹಾಸ ಮೆರೆದಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಸಾವಿನ ರಣಕೇಕೆ ರಾಜ್ಯದಲ್ಲಿ ಬುಧವಾರವೂ ಮುಂದುವರೆದಿದ್ದುರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಬರೋಬ್ಬರಿ 60 ಜನ ಸಾವನ್ನಪ್ಪಿದ್ದಾರೆ.
ಮೈಸೂರು 6, ಧಾರವಾಡ 5, ಉತ್ತರಕನ್ನಡ, ಬಾಗಲಕೋಟೆ ತಲಾ 3, ಚಿಕ್ಕಬಳ್ಳಾಪುರ, ರಾಯಚೂರು ತಲಾ 2, ಶಿವಮೊಗ್ಗ, ಮಂಡ್ಯ, ತುಮಕೂರು, ಚಿಕ್ಕಮಗಳೂರು, ಚಿತ್ರದುರ್ಗ, ರಾಮನಗರ ತಲಾ ಒಬ್ಬರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.