ಬೆಂಗಳೂರು prajakiran.com : ಭ್ರಷ್ಟಾಚಾರ ಆರೋಪ ಕೇಳಿಬಂದ ಹಿನ್ನೆಲೆ ರಾಜ್ಯದ 9 ಅಧಿಕಾರಿಗಳ ಮನೆ ಮೇಲೆ ಬೆಳ್ಳಂಬೆಳಗ್ಗೆ ಎಸಿಬಿ ದಾಳಿ ನಡೆಸಿದೆ.
300ಕ್ಕೂ ಹೆಚ್ಚು ಎಸಿಬಿ ಅಧಿಕಾರಿಗಳು 40 ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.
ಅಕ್ರಮ ಸಂಪತ್ತು, ವಿವಿಧ ಕಡೆಗಳಲ್ಲಿ ಭೂಮಿ, ಮನೆ ಹೊಂದಿರುವ ಮಾಹಿತಿ ಹಿನ್ನೆಲೆ ಶಿವಮೊಗ್ಗ, ಬೆಂಗಳೂರು, ಮಂಗಳೂರು, ದಾವಣಗೆರೆ, ಉಡುಪಿ, ಬಳ್ಳಾರಿ, ಚಿತ್ರದುರ್ಗ, ಮಂಡ್ಯ ಇತ್ಯಾದಿ ಜಿಲ್ಲೆಗಳಲ್ಲಿ ಏಕಕಾಲಕ್ಕೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಇಇ ಜಿಲ್ಲಾ ನಗರಾಭಿವೃದ್ಧಿ ಕೋಶ ಡಿಸಿ ಕಚೇರಿ ಮಂಗಳೂರು ಜಿ. ಶ್ರೀಧರ್,
ಇಇ ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ಲಿಮಿಟೆಡ್ ಉಡುಪಿ ಕೃಷ್ಣ .ಎಸ್. ಹೆಬ್ಸರ್, ಆರ್ ಪಿ ಕುಲಕರ್ಣಿ, ಸಿಇ- ಕೆಆರ್ಡಿಸಿಎಲ್, ಎಚ್ ಆರ್ ಕೃಷ್ಣಪ್ಪ, ಸಹಾಯಕ ನಿರ್ದೇಶಕ ಮಲ್ಲೂರು ನಗರ ಯೋಜನಾ ಪ್ರಾಧಿಕಾರ ಕೋಲಾರ, ಸುರೇಶ್ ಮೊಹ್ರೆ, ಜೆಇ ಪಿಆರ್ಇ ಬೀದರ್, ವೆಂಕಟೇಶ್ ಟಿ ಡಿಸಿಎಫ್ ಸಾಮಾಜಿಕ ಅರಣ್ಯ, ಮಂಡ್ಯ, ಸಿದ್ದರಾಮ ಮಲ್ಲಿಕಾರ್ಜುನ್ ಬಿರಾದಾರ ಎಇಇ ಹೆಸ್ಕಾಮ್ ವಿಜಯಪುರ, ಕೃಷ್ಣಮೂರ್ತಿ ಹಿರಿಯ ಮೋಟಾರು ವಾಹನ ನಿರೀಕ್ಷಕ, ಕೋರಮಂಗಲ, ಎ ಎನ್ ವಿಜಯ್ ಕುಮಾರ್ ಎಲೆಕ್ಟ್ರಿಕಲ್ ಇನ್ಸ್ಪೆಕ್ಟರ್ ಬಳ್ಳಾರಿ. ಇವರ ಮನೆ ಮೇಲೆ ಎಸಿಬಿ ದಾಳಿ ಮಾಡಿ ಪರಿಶೀಲನೆ ನಡೆಸಿದೆ.