ಬೆಂಗಳೂರು prajakiran.com : ರಾಜ್ಯದಲ್ಲಿ ಶನಿವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 93 ಜನ ಸಾವನ್ನಪ್ಪಿದ್ದಾರೆ.
ಮತ್ತೆ ಹೊಸದಾಗಿ 4537 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 59652 ಕ್ಕೆ ಏರಿಕೆಯಾಗಿದೆ.
ಇಂದು ರಾಜ್ಯದಲ್ಲಿ 1018 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 21775 ಜನ ಗುಣಮುಖರಾಗಿದ್ದು, 36631 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 580 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ ಶನಿವಾರವೂ 93 ಜನ ಮೃತಪಟ್ಟಿದ್ದು, ಈವರೆಗೆ ಸಾವನ್ನಪ್ಪಿದ್ದವರ ಸಂಖ್ಯೆ 1240ಕ್ಕೆ ಏರಿಕೆಯಾದಂತಾಗಿದೆ.
ಶನಿವಾರ ಪತ್ತೆಯಾದ ಪ್ರಕರಣಗಳಲ್ಲಿ ರಾಜ್ಯದ ರಾಜಧಾನಿ ಬೆಂಗಳೂರು ನಗರ ದಲ್ಲಿಯೇ ಅತಿ ಹೆಚ್ಚು ಸೋಂಕಿತರು ಕಂಡು ಬಂದಿದ್ದಾರೆ.
ಬೆಂಗಳೂರಿನಲ್ಲಿ ನಿನ್ನೇ 2208 ಜನ ಸೋಂಕಿತರಿದ್ದರೆ ಇಂದು ಬರೋಬ್ಬರಿ 2125 ಜನ ಸೋಂಕಿತರು ಕಂಡು ಬಂದಿರುವುದು ಬೆಂಗಳೂರಿಗರನ್ನು ಮತ್ತೆ ಬೆಚ್ಚಿಬೀಳಿಸುವಂತೆ ಮಾಡಿದೆ.
ಇನ್ನೂಳಿದಂತೆ ದಕ್ಷಿಣ ಕನ್ನಡ 509, ಧಾರವಾಡ 186, ವಿಜಯಪುರ 176, ಬಳ್ಳಾರಿ 155, ಬೆಳಗಾವಿ 137, ಉತ್ತರಕನ್ನಡ 116, ಶಿವಮೊಗ್ಗ 114, ಉಡುಪಿ 109, ಚಿಕ್ಕಬಳ್ಳಾಪುರ 107, ಮೈಸೂರು 101, ಬೆಂಗಳುರು ಗ್ರಾಮಾಂತರ 94, ಕಲಬುರಗಿ ಹಾಗೂ ಗದಗ 82, ಬೀದರ 72, ದಾವಣಗೆರೆ 56, ಹಾಸನ 51, ಮಂಡ್ಯ 42, ಕೋಲಾರ, 35, ಚಾಮರಾಜನಗರ 34, ತುಮಕೂರು ಹಾಗೂ ಚಿಕ್ಕಮಗಳೂರು ತಲಾ 24, ಚಿತ್ರದುರ್ಗ 22, ರಾಯಚೂರು 16, ಹಾವೇರಿ 15, ಬಾಗಲಕೋಟೆ, ಕೊಪ್ಪಳ ಹಾಗೂ ರಾಮನಗರ ತಲಾ 13, ಕೊಡಗು 10, ಯಾದಗಿರಿ 4 ಹೀಗೆ ಒಟ್ಟು 30 ಜಿಲ್ಲೆಗಳಲ್ಲಿ ಕರೋನಾ ವೈರಸ್ ತನ್ನ ಅಟ್ಟಹಾಸ ಮೆರೆದಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಸಾವಿನ ರಣಕೇಕೆ ರಾಜ್ಯದಲ್ಲಿ ಶನಿವಾರವೂ ಮುಂದುವರೆದಿದ್ದು, ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಬರೋಬ್ಬರಿ 49 ಜನ ಸಾವನ್ನಪ್ಪಿದ್ದಾರೆ.
ದಕ್ಷಿಣ ಕನ್ನಡ 7, ಧಾರವಾಡ 6, ಕಲಬರುಗಿ 5, ಬಳ್ಳಾರಿ, ಬೆಳಗಾವಿ, ದಾವಣಗೆರೆ, ತುಮಕೂರು ಹಾಗೂ ಬಾಗಲಕೋಟೆ ತಲಾ 3, ಮೈಸೂರು, ಉಡುಪಿ, ಹಾವೇರಿ ತಲಾ ಎರಡು, ಶಿವಮೊಗ್ಗ ಚಿಕ್ಕಬಳ್ಳಾಪುರ, ಬೀದರ, ಮಂಡ್ಯ ಹಾಗೂ ಕೊಡಗು ತಲಾ ಒಬ್ಬರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.