ಬೆಂಗಳೂರು prajakiran.com : ರಾಜ್ಯದಲ್ಲಿ ಗುರುವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ97 ಜನ ಸಾವನ್ನಪ್ಪಿದ್ದಾರೆ.
ಮತ್ತೆ ಹೊಸದಾಗಿ 5030 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 80863 ಕ್ಕೆ ಏರಿಕೆಯಾಗಿದೆ.
ಇಂದು ರಾಜ್ಯದಲ್ಲಿ2071 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 29310 ಜನ ಗುಣಮುಖರಾಗಿದ್ದು, 49931 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 640 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ ಗುರುವಾರವೂ 97 ಜನ ಮೃತಪಟ್ಟಿದ್ದು, ಈವರೆಗೆ ಸಾವನ್ನಪ್ಪಿದ್ದವರ ಸಂಖ್ಯೆ 1616 ಕ್ಕೆ ಏರಿಕೆಯಾದಂತಾಗಿದೆ.
ಗುರುವಾರ ಪತ್ತೆಯಾದ ಪ್ರಕರಣಗಳಲ್ಲಿ ರಾಜ್ಯದ ರಾಜಧಾನಿ ಬೆಂಗಳೂರು ನಗರ ದಲ್ಲಿಯೇ ಅತಿ ಹೆಚ್ಚು ಸೋಂಕಿತರು ಕಂಡು ಬಂದಿದ್ದಾರೆ.
ಬೆಂಗಳೂರಿನಲ್ಲಿ 2207 ಬರೋಬ್ಬರಿ ಜನ ಸೋಂಕಿತರು ಕಂಡು ಬಂದಿರುವುದು ಬೆಂಗಳೂರಿಗರನ್ನು ಮತ್ತೆ ಬೆಚ್ಚಿಬೀಳಿಸುವಂತೆ ಮಾಡಿದೆ.
ಇನ್ನೂಳಿದಂತೆ ರಾಯಚೂರು 258, ಕಲಬುರಗಿ 229, ದಕ್ಷಿಣ ಕನ್ನಡ 218, ಬೆಳಗಾವಿ 214, ಧಾರವಾಡ 183, ಬಳ್ಳಾರಿ 164, ಬೆಂಗಳೂರು ಗ್ರಾಮಾಂತರ 161, ಉಡುಪಿ 160, ಮೈಸೂರು, 116, ಹಾಸನ 108, ದಾವಣಗೆರೆ 107, ಬಾಗಲಕೋಟೆ 106, ಬೀದರ 94, ಉತ್ತರಕನ್ನಡ 83, ಶಿವಮೊಗ್ಗ 82, ಗದಗ 72, ಚಿಕ್ಕಬಳ್ಳಾಪುರ 65, ಚಿಕ್ಕಮಗಳೂರು 62, ತುಮಕೂರು 56, ಯಾದಗಿರಿ 55, ಮಂಡ್ಯ 50, ಕೋಲಾರ 40, ಚಾಮರಾಜನಗರ 27, ರಾಮನಗರ 26, ಕೊಡಗು 22, ವಿಜಯಪುರ 20, ಹಾವೇರಿ 18, ಕೊಪ್ಪಳ 17, ಚಿತ್ರದುರ್ಗ 10 ಹೀಗೆ ಒಟ್ಟು 30 ಜಿಲ್ಲೆಗಳಲ್ಲಿ ಕರೋನಾ ವೈರಸ್ ತನ್ನ ಅಟ್ಟಹಾಸ ಮೆರೆದಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಸಾವಿನ ರಣಕೇಕೆ ರಾಜ್ಯದಲ್ಲಿ ಗುರುವಾರವೂ ಮುಂದುವರೆದಿದ್ದು, ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಬರೋಬ್ಬರಿ 48 ಜನ ಸಾವನ್ನಪ್ಪಿದ್ದಾರೆ.
ದಕ್ಷಿಣ ಕನ್ನಡ 7, ಬಳ್ಳಾರಿ 5, ಮೈಸೂರು 8, ರಾಯಚೂರು 2, ಬೆಳಗಾವಿ 4, ಧಾರವಾಡ 2, ಹಾಸನ 2, ಬೀದರ 3, ಶಿವಮೊಗ್ಗ 2, ಗದಗ 2, ಚಿಕ್ಕಬಳ್ಳಾಪುರ 3, ಚಿಕ್ಕಮಗಳೂರು ಹಾಗೂ ತುಮಕೂರು, ಮಂಡ್ಯ ತಲಾ 2, ರಾಮನಗರ, ವಿಜಯಪುರ ಹಾಗೂ ಹಾವೇರಿ ತಲಾ ಒಬ್ಬರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.