ಬೆಂಗಳೂರು prajakiran.com : ರಾಜ್ಯದಲ್ಲಿ ಶನಿವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 98 ಜನ ಸಾವನ್ನಪ್ಪಿದ್ದಾರೆ.
ಮತ್ತೆ ಹೊಸದಾಗಿ 5172 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 1,29,287 ಕ್ಕೆ ಏರಿಕೆಯಾಗಿದೆ.
ಇಂದು ರಾಜ್ಯದಲ್ಲಿ 3860 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 53648 ಜನ ಗುಣಮುಖರಾಗಿದ್ದು73219 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 602 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ ಶನಿವಾರವೂ 98 ಜನ ಮೃತಪಟ್ಟಿದ್ದು, ಈವರೆಗೆ ಸಾವನ್ನಪ್ಪಿದ್ದವರ ಸಂಖ್ಯೆ 2412 ಕ್ಕೆ ಏರಿಕೆಯಾದಂತಾಗಿದೆ.
ಶನಿವಾರ ಪತ್ತೆಯಾದ ಪ್ರಕರಣಗಳಲ್ಲಿ ರಾಜ್ಯದ ರಾಜಧಾನಿ ಬೆಂಗಳೂರು ನಗರ ದಲ್ಲಿಯೇ ಅತಿ ಹೆಚ್ಚು ಸೋಂಕಿತರು ಕಂಡು ಬಂದಿದ್ದಾರೆ.
ಬೆಂಗಳೂರಿನಲ್ಲಿ 1852 ಬರೋಬ್ಬರಿ ಜನ ಸೋಂಕಿತರು ಕಂಡು ಬಂದಿರುವುದು ಬೆಂಗಳೂರಿಗರನ್ನು ಮತ್ತೆ ಬೆಚ್ಚಿಬೀಳಿಸುವಂತೆ ಮಾಡಿದೆ.
ಇನ್ನೂಳಿದಂತೆ ಮೈಸೂರು 365, ಬಳ್ಳಾರಿ 269, ಕಲಬುರಗಿ ಹಾಗೂ ಬೆಳಗಾವಿ ತಲಾ 219, ಧಾರವಾಡ 184, ಹಾಸನ 146, ದಕ್ಷಿಣ ಕನ್ನಡ 139, ಉಡುಪಿ 136, ಬಾಗಲಕೋಟೆ 134, ವಿಜಯಪುರ 129, ಶಿವಮೊಗ್ಗ 119, ರಾಯಚೂರು 109, ದಾವಣಗೆರೆ 108, ಕೊಪ್ಪಳ 107, ತುಮಕೂರು ಹಾಗೂ ಗದಗ ತಲಾ 99, ಮಂಡ್ಯ 95, ಬೆಂಗಳೂರು ಗ್ರಾಮಾಂತರ 93, ಚಿಕ್ಕಬಳ್ಳಾಪುರ 72, ಚಿತ್ರದುರ್ಗ 60, ಚಿಕ್ಕಮಗಳೂರು 57, ಬೀದರ ಹಾಗೂ ಹಾವೇರಿ ತಲಾ 52, ಉತ್ತರಕನ್ನಡ ಹಾಗು ರಾಮನಗರ ತಲಾ 51, ಚಾಮರಾಜನಗರ 43, ಯಾದಗಿರಿ ಹಾಗೂ ಕೋಲಾರ ತಲಾ 39, ಕೊಡಗು 35 ಹೀಗೆ ಒಟ್ಟು 30 ಜಿಲ್ಲೆಗಳಲ್ಲಿ ಕರೋನಾ ವೈರಸ್ ತನ್ನ ಅಟ್ಟಹಾಸ ಮೆರೆದಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಸಾವಿನ ರಣಕೇಕೆ ರಾಜ್ಯದಲ್ಲಿ ಶನಿವಾರವೂ ಮುಂದುವರೆದಿದ್ದು, ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಬರೋಬ್ಬರಿ 27 ಜನ ಸಾವನ್ನಪ್ಪಿದ್ದಾರೆ.
ಮೈಸೂರು 9, ಧಾರವಾಡ ಹಾಗೂ ದಕ್ಷಿಣ ಕನ್ನಡ ತಲಾ 8, ಉಡುಪಿ 6, ಕಲಬುರಗಿ 5, ಶಿವಮೊಗ್ಗ, ದಾವಣಗೆರೆ ಹಾಗೂ ಬೀದರ ತಲಾ 4, ಯಾದಗಿರಿ, ಚಿತ್ರದುರ್ಗ ತಲಾ 3, ಹಾಸನ, ಕೊಪ್ಪಳ, ತುಮಕೂರು, ಗದಗ ತಲಾ 2, ಬಳ್ಳಾರಿ, ವಿಜಯಪುರ, ಮಂಡ್ಯ, ಚಿಕ್ಕಬಳ್ಳಾಪುರ ಹಾಗೂ ಉತ್ತರಕನ್ನಡ ತಲಾ ಒಬ್ಬರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.