ಧಾರವಾಡ prajakiran.com : ತುಪ್ಪರಿಹಳ್ಳದಲ್ಲಿ ಕೊಚ್ಚಿ ಹೋದ ಧಾರವಾಡ ತಾಲೂಕಿನ ಹಾರೋಬೆಳವಡಿ ಗ್ರಾಮದ ರೈತ ಮಡಿವಾಳಪ್ಪ ಜಕ್ಕಪ್ಪನವರ ಅವರಿಗಾಗಿ ಗುರುವಾರವೂ ಶೋಧ ಕಾರ್ಯ ಮುಂದುವರೆದಿದೆ.
ಕಳೆದ ಮೂರು ದಿನಗಳಿಂದ ರಾಷ್ಟ್ರೀಯ ವಿಪತ್ತು ನಿರ್ವಹಣೆ ತಂಡ,ಅಗ್ನಿ ಶಾಮಕ ದಳ, ಸ್ಥಳೀಯ ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.
ಅಂದಾಜು 50 ಜನ ತಂಡ ಈ ಕೆಲಸದಲ್ಲಿ ನಿರತವಾದರೂ ರೈತನ ಸುಳಿವು ದೊರೆಯದಿರುವುದು ಗ್ರಾಮಸ್ಥರು ಹಾಗೂ ಅವರ ಕುಟುಂಬದವರಿಗೆ ಆತಂಕ ಮೂಡಿಸಿದೆ.
ಹೀಗಾಗಿ ಗುರುವಾರ ಕೂಡ ಸ್ಥಳದಲ್ಲಿ ಜೆಸಿಬಿ ತಂಡ ಹೊಲಕ್ಕೆ ಹೋಗಿ ಬರುತ್ತಿದ್ದ ಸಂದರ್ಭದಲ್ಲಿ ತುಪ್ಪರಿ ಹಳ್ಳದ ಪ್ರವಾಹಕ್ಕೆ ಸಿಲುಕಿ ಕೊಚ್ಚಿಕೊಂಡು ಹೋಗಿದ್ದ ರಯತ ಮಡಿವಾಳಪ್ಪ ಜಕ್ಕಪ್ಪನವರಗಾಗಿ ಶೋಧ ಕಾರ್ಯ ನಡೆಸುತ್ತಿದೆ.
ಹಾರೋಬೆಳವಡಿ ಹಾಗೂ ಆಯಟ್ಟಿ ಗ್ರಾಮದ ಮಧ್ಯೆ ಇರುವ ಬ್ರಿಜ್ ಬಳಿ ರೈತ ಕುಳಿತುಕೊಂಡಿದ್ದ ಸಂದರ್ಭದಲ್ಲಿ ಹಳ್ಳದ ಪ್ರವಾಹಕ್ಕೆ ಸಿಲುಕಿ ಆತ ಕೊಚ್ಚಿಕೊಂಡು ಹೋಗಿದ್ದರಿಂದ ಆ ಬ್ರಿಜ್ ಬಳಿಯೇ ರೈತನಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ಧಾರವಾಡ ಎಸ್ಪಿ ವರ್ತಿಕಾ ಕಟಿಯಾರ್ ತಿಳಿಸಿದ್ದಾರೆ.