ಧಾರವಾಡ prajakiran.com : ಕಲಘಟಗಿ ತಾಲೂಕಿನ ಗಂಜಿಗಟ್ಟಿ ಗ್ರಾಮದ ಹಿರೇಕೆರೆ ನೀರಿನ ಸೇಳವಿನಲ್ಲಿ ತೇಲಿ ಹೋಗಿದ್ದ ಬಾಲಕಿ ಮೃತಪಟ್ಟ ಹಿನ್ನಲೆಯಲ್ಲಿ ಶನಿವಾರ ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ, ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ ಭೇಟಿ ನೀಡಿ ಕುಟುಂಬಸ್ಥರಿಗೆ ಸರಕಾರದ 5 ಲಕ್ಷ ರೂ. ಪರಿಹಾರಧನದ ಚೆಕ್ ನೀಡಿ, ಸಾಂತ್ವನ ಹೇಳಿದರು.
ಶಾಸಕ ಸಿ.ಎಂ ನಿಂಬ್ಬಣವರ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿ, ಗಂಜಿಗಟ್ಟಿ ಕಲಘಟಗಿ ಮದ್ಯದ ಲೋಕೊಪಯೋಗಿ ರಸ್ತೆಯ ದುರಸ್ಥಿಕರಣಕ್ಕೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವರ್ತಿಕಾ ಕಟಿಯಾರ್, ಡಿವೈಎಸ್ಪಿ ರವಿ ನಾಯಕ್,ಸಿಪಿಐ ವಿಜಯ್ ಬಿರಾದಾರ, ಮುಖಂಡರಾದ ಬಸವರಾಜ ಕುಂದಗೊಳಮಠ ಸೇರಿದಂತೆ ವಿವಿಧ ಜನಪ್ರತಿನಿಧಿಗಳು ಮತ್ತು ಹನುಮಂತಪ್ಪ ಗಾಣಿಗೇರ ಕುಟುಂಬ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದರು.