ರಾಜ್ಯದಲ್ಲಿ 7071 ಜನ ಬಿಡುಗಡೆ
ಬೆಂಗಳೂರು prajakiran.com : ರಾಜ್ಯದಲ್ಲಿ ಸೋಮವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 115 ಜನ ಸಾವನ್ನಪ್ಪಿದ್ದಾರೆ.
ಮತ್ತೆ ಹೊಸದಾಗಿ 6317 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 2,33,283 ಕ್ಕೆ ಏರಿಕೆಯಾಗಿದೆ.
ಇಂದು ರಾಜ್ಯದಲ್ಲಿ 7071 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 148562ಜನ ಗುಣಮುಖರಾಗಿದ್ದು, ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
695 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ ಸೋಮವಾರವೂ 115 ಜನ ಮೃತಪಟ್ಟಿದ್ದು, ಈವರೆಗೆ ಸಾವನ್ನಪ್ಪಿದ್ದವರ ಸಂಖ್ಯೆ 4,062 ಕ್ಕೆ ಏರಿಕೆಯಾದಂತಾಗಿದೆ.
ಸೋಮವಾರ ಪತ್ತೆಯಾದ ಪ್ರಕರಣಗಳಲ್ಲಿ ರಾಜ್ಯದ ರಾಜಧಾನಿ ಬೆಂಗಳೂರು ನಗರದಲ್ಲಿಯೇ ಅತಿ ಹೆಚ್ಚು ಸೋಂಕಿತರು ಕಂಡು ಬಂದಿದ್ದಾರೆ. ಬೆಂಗಳೂರಿನಲ್ಲಿ 2053 ಬರೋಬ್ಬರಿ ಜನ ಸೋಂಕಿತರು ಕಂಡು ಬಂದಿರುವುದು ಬೆಂಗಳೂರಿಗರನ್ನು ಮತ್ತೆ ಬೆಚ್ಚಿಬೀಳಿಸುವಂತೆ ಮಾಡಿದೆ.
ಇನ್ನೂಳಿದಂತೆ ಮೈಸೂರು 597, ಶಿವಮೊಗ್ಗ 397, ಬಳ್ಳಾರಿ 319, ಉಡುಪಿ 268, ಕಲಬುರಗಿ 211, ಧಾರವಾಡ 201, ಬೆಳಗಾವಿ 171, ಕೊಪ್ಪಳ 169, ದಾವಣಗೆರೆ 165, ಬಾಗಲಕೋಟೆ 164, ದಕ್ಷಿಣಕನ್ನಡ 144, ತುಮಕೂರು 130, ಕೋಲಾರ 121, ವಿಜಯಪುರ 106, ಗದಗ 99, ಚಿಕ್ಕಮಗಳೂರು 92, ರಾಮನಗರ 85, ಉತ್ತರಕನ್ನಡ 89, ಬೆಂಗಳೂರು ಗ್ರಾಮಾಂತರ 25, ಬೀದರ 72, ಚಾಮರಾಜನಗರ 61, ಚಿಕ್ಕಬಳ್ಳಾಪುರ 41, ಚಿತ್ರದುರ್ಗ 21, ಹಾಸನ 250, ಹಾವೇರಿ 43, ಕೊಡಗು 18, ಮಂಡ್ಯ 26, ರಾಯಚೂರು 110, ಯಾದಗಿರಿ 69 ಹೀಗೆ ಒಟ್ಟು 30 ಜಿಲ್ಲೆಗಳಲ್ಲಿ ಕರೋನಾ ವೈರಸ್ ತನ್ನ ಅಟ್ಟಹಾಸ ಮೆರೆದಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಸಾವಿನ ರಣಕೇಕೆ ರಾಜ್ಯದಲ್ಲಿ ಸೋಮವಾರವೂ ಮುಂದುವರೆದಿದ್ದು, ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಬರೋಬ್ಬರಿ 39 ಜನ ಸಾವನ್ನಪ್ಪಿದ್ದಾರೆ.
ಹಾಸನ ಹಾಗೂ ಬೆಳಗಾವಿ ತಲಾ 9, ದಕ್ಷಿಣ ಕನ್ನಡ 8, ಕಲಬುರಗಿ 7, ಬಳ್ಳಾರಿ 6, ಮೈಸೂರು ಹಾಗೂ ಧಾರವಾಡ ತಲಾ 5, ಹಾವೇರಿ, ಕೊಪ್ಪಳ ಹಾಗೂ ಶಿವಮೊಗ್ಗ ತಲಾ 4, ರಾಯಚೂರು ಹಾಗೂ ವಿಜಯಪುರ ತಲಾ 3, ಚಿಕ್ಕಮಗಳೂರು, ತುಮಕೂರು ತಲಾ 2, ಉತ್ತರಕನ್ನಡ, ಉಡುಪಿ, ಕೊಡಗು ಹಾಗೂ ಬಾಗಲಕೋಟೆ ತಲಾ ಒಬ್ಬರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.