ಬೆಳಗಾವಿ Prajakiran.com : ಬೆಳಗಾವಿ ಹಾಗೂ ಉತ್ತರ ಕರ್ನಾಟಕ ಭಾಗದಲ್ಲಿ ತಮ್ಮದೆ ಆದ ಸಮಾಜ ಸೇವೆಯ ಮೂಲಕ ಗುರುತಿಸಿಕೊಂಡಿದ್ದ ಪ್ರಭಾವಿ ಕಾಂಗ್ರೆಸ್ ಮುಖಂಡ ಅದರಲ್ಲೂ
ಸವದತ್ತಿ ಜನತೆಯ ನೆಚ್ಚಿನ ಕಣ್ಮಣಿ ಆಗಿದ್ದ ಆನಂದ ಚೋಪ್ರಾ ಅವರು ನಿಧನರಾಗಿದ್ದಾರೆ .
ಶನಿವಾರ ಬೆಳಗಿನ ಜಾವ ತೀವ್ರ ಹೃದಯಾಘಾತದಿಂದ ಅವರು ನಿಧನರಾದರೆಂದು ಪ್ರಾಥಮಿಕ ವರದಿಗಳು ತಿಳಿಸಿವೆ.ಅವರು ವೃದ್ಧ ತಾಯಿ, ಪತ್ನಿ ,ಪುತ್ರಿ, ಪುತ್ರನನ್ನು ಮತ್ತು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಅವರು ಸವದತ್ತಿ ಕ್ಷೇತ್ರದಿಂದ ಒಂದು ಬಾರಿ ಪಕ್ಷೇತರರಾಗಿ, ಮತ್ತೊಂದು ಬಾರಿ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದರು. ಕಳೆದ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಅತ್ಯಂತ ಕಡಿಮೆ ಅಂತರದಿಂದ ಸೋಲನ್ನು ಅನುಭವಿಸಿದ್ದರು.
ಚುನಾವಣೆ ಸೋಲಿನ ನಂತರ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿತ್ತು. ಆನಂತರ ಚೇತರಿಸಿಕೊಂಡಿದ್ದ ಅವರು ಮತ್ತೆ ಮೊದಲಿನಂತ ಲವಲವಿಕೆಯಿಂದ ಓಡಾಡಿಕೊಂಡಿದ್ದರು.
ಇದೀಗಅವರು ಬಾರದ ಲೋಕಕ್ಕೆ ಪಯಣಿಸಿರುವುದು ಕಾಂಗ್ರೆಸ್ ಪಕ್ಷಕ್ಕೆ ಅದರಲ್ಲೂ ಅವರ ಅಪಾರ ಅಭಿಮಾನಿಗಳಿಗೆ ತುಂಬಲಾರದ ನಷ್ಟವುಂಟು ಮಾಡಿದೆ.
ಕಾಂಗ್ರೆಸ್ ಮುಖಂಡ ಆನಂದ್ ಚೋಪ್ರ ಅವ್ರ ನಿಧನಕ್ಕೆ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಸೇರಿದಂತೆ ಅನೇಕರು ಮುಖಂಡರು ಸಂತಾಪ ಸೂಚಿಸಿದ್ದಾರೆ