ಧಾರವಾಡ prajakiran.com : ಇಲ್ಲಿಯ ಗಾಂಧಿ ನಗರದ ಮದಿನಾ ಕಾಲೋನಿ ನಿವಾಸಿ ಹಾಗೂ ಅಂಜುಮನ್ ಸಂಸ್ಥೆಯ ನಿವೃತ್ತ ಶಿಕ್ಷಕರಾದ ಬಾಬುಲಾಲ್ ಎಚ್ ಪಾಗೆ (71) ಸ್ವಗೃಹದಲ್ಲಿ ನಿಧನ ಹೊಂದಿದರು.
ಅವರಿಗೆ ಗುರುವಾರ ಸಂಜೆ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣ ಹುಬ್ಬಳ್ಳಿ ವಿವೇಕಾನಂದ ಆಸ್ಪತ್ರೆಗೆ ಸೇರಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಇಹಲೋಕ ತ್ಯಜಿಸಿದರು.
ಅವರು ಇಬ್ಬರು ಪುತ್ರಿಯರು ಹಾಗೂ ಬಿಲ್ಡರ್ ಸಮೀರ್ ಪಾಗೆ ಸೇರಿ ಇಬ್ಬರು ಪುತ್ರರು, ಅಪಾರ ಬಂಧು ಬಳಗವನ್ನು ಬಿಟ್ಟು ಅಗಲಿದ್ದಾರೆ.
ಇವರ ಅಂತಿಮ ಯಾತ್ರೆ ಅ.೨೯ರಂದು ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ಸ್ವಗೃಹ ದಿಂದ ಹೊರಡುವುದು.
ಧಾರವಾಡದ ಜನ್ನತ್ ನಗರದ ಖಬರ್ ಸ್ಥಾನದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಅವರ ಕುಟುಂಬದ ಸದಸ್ಯರು ತಿಳಿಸಿದ್ದಾರೆ.