ಧಾರವಾಡ prajakiran.com : ಧಾರವಾಡದ ಸುಪ್ರಸಿದ್ಧ ನುಗ್ಗಿಕೇರಿ ಆಂಜನೇಯ ದೇವಸ್ಥಾನಕ್ಕೆ ಕನ್ನಡ ಚಿತ್ರರಂಗದ ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಎರಡು ದಿನಗಳ ಹಿಂದೆ ದಾಂಡೇಲಿಯ ಪ್ರವಾಸಕ್ಕೆ ಬಂದಿದ್ದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಮರಳಿ ಬೆಂಗಳೂರಿಗೆ ಹೋಗುವಾಗ ಧಾರವಾಡದ ಪವಾಡ ದೇವರಾದ ನುಗ್ಗಿಕೇರಿ ಆಂಜನೇಯ ದೇವಸ್ಥಾನಕ್ಕೆ ಭೇಟಿ ವಿಶೇಷ ಪೂಜೆ ಸಲ್ಲಿಸಿ ಆಂಜನೇಯನ ಆಶಿರ್ವಾದ ಪಡೆದಿದ್ದಾರೆ.
ನುಗ್ಗಿಕೇರಿ ಆಂಜನೇಯನಿಗೆ ಈ ಹಿಂದೆ ಹಿರಿಯ ನಟಅಂಬರೀಷ್ ಮಂಡ್ಯ ಸಂಸದೆ ಸುಮಲತಾ ಅಂಬರೀಷ ಸೇರಿದಂತೆ ಅನೇಕರು ಆಗಮಿಸಿ ವಿಶೇಷ ಪೂಜೆ ಪ್ರಾರ್ಥನೆ ಸಲ್ಲಿಸಿದ್ದು, ಇಷ್ಟಾರ್ಥ ಸಿದ್ದಿ ಆಂಜನೇಯ ಎಂಬ ಖ್ಯಾತಿಯಿದೆ.