ಧಾರವಾಡ prajakiran.com : ಧಾರವಾಡದ ಬಾರಾಕೋಟ್ರಿಯಲ್ಲಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಮನೆಗೆ ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ ನೀಡಿ ಕುಟುಂಬಸ್ಥರಿಗೆ ಸ್ಥೈರ್ಯ ತುಂಬಿದರು.
ಬಳಿಕ ಹೇಳಿಕೆ ನೀಡಿದಅವರು, ಇದು ಏಕೆ ನಡೆದಿದೆ ಅನ್ನೋದು ಎಲ್ಲರಿಗೂ ಗೊತ್ತಿರೋ ವಿಚಾರ ಇದೆಲ್ಲಾ ರಾಜಕೀಯವಾಗಿ ನಡೆಯುತ್ತಿದೆ ಎಂದರು.
ಕಾನೂನು ಪ್ರಕಾರ ಬಂಧನವಾದರೆ ಆಗಲಿ. ಆದರೆ ಅದರಲ್ಲಿ ರಾಜಕೀಯ ಇರಬಾರದು. ವಿನಯ ಅವರು ಶೀಘ್ರದಲ್ಲಿಯೇ ಕ್ಲೀನ್ ಚಿಟ್ ತೆಗೆದುಕೊಂಡು ಹೊರಗೆ ಬರುತ್ತಾರೆ.
ನಮಗೆ ಸಂಪೂರ್ಣ ಭರವಸೆ ಇದೆ. ಎಲ್ಲ ನಾಯಕರು, ಕಾರ್ಯಕರ್ತರು ವಿನಯ ಜೊತೆ ಇದ್ದಾರೆ. ಬಿಜೆಪಿ ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದರು.
ಬಿಜೆಪಿಯವರು ಎಲ್ಲವನ್ನು ತನ್ನ ಕೈಯಲ್ಲಿ ಇಟ್ಟುಕೊಂಡು ನಮಗೆ ಹೆದರಿಸುತ್ತಿದ್ದಾರೆ. ಐಟಿ, ಇಡಿ, ಸಿಬಿಐ ಹೀಗೆ ಎಲ್ಲವೂ ದುರ್ಬಳಕೆ ಮಾಡಿಕೊಳ್ಳುತ್ತಿದೆ. ‘ಸತ್ಯ ಮೇವ ಜಯತೆ’ ಆಗಿಯೇ ಆಗುತ್ತದೆ.
ರಾಜ್ಯದಲ್ಲಿ ಅಷ್ಟೇ ಅಲ್ಲ ದೇಶದಲ್ಲಿ ಕಾಂಗ್ರೆಸ್ ಮೇಲೆ ಯಾವ ರೀತಿ ದಾಳಿ ಮಾಡಲಾಗುತ್ತಿದೆ ಅನ್ನೋದು ಎಲ್ಲರಿಗೂ ಗೊತ್ತಿದೆ ಎಂದು ಗುಡುಗಿದರು.