ಹುಬ್ಬಳ್ಳಿ prajakiran. com : ಕರಾವಳಿಯ ಭಾಗದಲ್ಲಿ ವಾಯುಭಾರ ಕುಸಿತ ಕಂಡ ಹಿನ್ನೆಲೆಯಲ್ಲಿ ವಾಣಿಜ್ಯ ನಗರಿ ಹುಬ್ಬಳ್ಳಿಗೆ ಸಹ ತೌಕ್ತೆ ಚಂಡಮಾರುತ ಎಫೆಕ್ಟ್ ತಟ್ಟಿದೆ.
ಭಾನುವಾರ ಬೆಳಗಿನ ಜಾವದಿಂದಲೇ ಹುಬ್ಬಳ್ಳಿ ಧಾರವಾಡ ಅವಳಿನಗರ ಸೇರಿದಂತೆ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಗಾಳಿಯ ರಭಸ ಕೂಡ ಕಂಡು ಬಂದಿದೆ.
ತೌಕ್ತೆ ಚಂಡಮಾರುತದ ಪರಿಣಾಮ ಬೆಳಗ್ಗೆಯಿಂದ ರಾತ್ರಿಯವರೆಗೆ ಆಗಾಗ ಬಿಡುವು ಕೊಟ್ಟು ಸುರಿದಿದೆ.
ಲಾಕ್ ಡೌನ್ ಹಿನ್ನೆಲೆಯಲ್ಲಿ ಬೆಳಿಗ್ಗೆಯಷ್ಟೇ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿತ್ತು.
ಮಳೆಯಿಂದಾಗಿ ಖರೀದಿಗೆ ಅಡ್ಡಿಯಾಗಿದ್ದು, ಜನ ಸ್ವಲ್ಪ ಮನೆಯಿಂದ ಹೊರಗೆ ಬರಲು ಹಿಂದೇಟು ಹಾಕಿದರು.